<p><strong>ಯಾದಗಿರಿ:</strong> ಕೇಂದ್ರ ಸರ್ಕಾರ ವಿದ್ಯುತ್ ಖಾಸಗೀಕರಣ ಕಾಯ್ದೆ ಸಂಸತ್ತಿನಲ್ಲಿ ಜಾರಿಗೆ ತರುತ್ತಿದ್ದು, ಇದನ್ನು ವಿರೋಧಿಸಿ ಆಗಸ್ಟ್ 10ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜೆಸ್ಕಾಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಹೇಳಿದರು.</p>.<p>ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರ ಸಂಘ ಅಧಿಕಾರಿಗಳ ಅಸೋಸಿಯೇಷ್ನ ಒಕ್ಕೂಟ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಂಸ್ಥೆ ಹಾಗೂ ಗುತ್ತಿಗೆದಾರರ ಸಂಘದಿಂದ ನಡೆದ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.</p>.<p>ಕಳೆದ 50 ವರ್ಷಗಳಿಂದ ರೈತರ, ಗ್ರಾಹಕರ, ಸಾರ್ವಜನಿಕರ ಜನರ ಸೇವೆ ಮಾಡುತ್ತಿದ್ದು, ಈಗ ಏಕಾಏಕಿ ಕೇಂದ್ರ ಸರ್ಕಾರ ವಿದ್ಯುತ ಪ್ರಸರಣ ಇಲಾಖೆ ಖಾಸಗೀಕರಣಗೊಳಿಸಲು ಮುಂದಾಗಿರುವುದು ಸರಿಯಲ್ಲ ಎಂದರು.</p>.<p>ಪ್ರತಿಭಟನೆಗೆ ಎಲ್ಲ ನೌಕರರು ಒಂದು ದಿನ ರಜೆ ಹಾಕುವ ಮೂಲಕ ಕೇಂದ್ರದ ಕಾಯ್ದೆ ವಿರುದ್ಧ ಹೋರಾಟ ನಡೆಸಲಿದ್ದಾರೆ. ಎಲ್ಲ ನೌಕರರು, ಗುತ್ತಿಗೆದಾರರು ಒಗ್ಗೂಟ್ಟಿನಿಂದ ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.</p>.<p>ಕೆಪಿಟಿಸಿಎಲ್ ಲೆಕ್ಕಾಧಿಕಾರಿ ಹಣಮಂತರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಚುನಾವಣೆ ಪೂರ್ವ ನೀಡಿದ ಪ್ರಣಾಳಿಕೆಯಲ್ಲಿ 2021ರ ವಿದ್ಯುತ್ ಕಾಯ್ದೆ ತಿದ್ದುಪಡೆ ಅಜೆಂಡಾ ಇರಲಿಲ್ಲ. ಏಕಾಏಕಿ ಕಾಯ್ಕೆ ಜಾರಿ ಮಾಡುತ್ತಿರುವುದು ಖಾಸಗಿ ಅವರಿಗೆ ಮಣೆ ಹಾಕುತ್ತಿರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಸುಚಿತಕುಮಾರ, ಶಂಕರ ಗುತ್ತಿ, ಶಾಂತಪ್ಪ ಪೂಜಾರಿ, ಚಂದಪ್ಪ, ಸಂಜೀವಕುಮಾರ್, ಚಂದ್ರಕಾಂತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಕೇಂದ್ರ ಸರ್ಕಾರ ವಿದ್ಯುತ್ ಖಾಸಗೀಕರಣ ಕಾಯ್ದೆ ಸಂಸತ್ತಿನಲ್ಲಿ ಜಾರಿಗೆ ತರುತ್ತಿದ್ದು, ಇದನ್ನು ವಿರೋಧಿಸಿ ಆಗಸ್ಟ್ 10ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜೆಸ್ಕಾಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಹೇಳಿದರು.</p>.<p>ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರ ಸಂಘ ಅಧಿಕಾರಿಗಳ ಅಸೋಸಿಯೇಷ್ನ ಒಕ್ಕೂಟ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಂಸ್ಥೆ ಹಾಗೂ ಗುತ್ತಿಗೆದಾರರ ಸಂಘದಿಂದ ನಡೆದ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.</p>.<p>ಕಳೆದ 50 ವರ್ಷಗಳಿಂದ ರೈತರ, ಗ್ರಾಹಕರ, ಸಾರ್ವಜನಿಕರ ಜನರ ಸೇವೆ ಮಾಡುತ್ತಿದ್ದು, ಈಗ ಏಕಾಏಕಿ ಕೇಂದ್ರ ಸರ್ಕಾರ ವಿದ್ಯುತ ಪ್ರಸರಣ ಇಲಾಖೆ ಖಾಸಗೀಕರಣಗೊಳಿಸಲು ಮುಂದಾಗಿರುವುದು ಸರಿಯಲ್ಲ ಎಂದರು.</p>.<p>ಪ್ರತಿಭಟನೆಗೆ ಎಲ್ಲ ನೌಕರರು ಒಂದು ದಿನ ರಜೆ ಹಾಕುವ ಮೂಲಕ ಕೇಂದ್ರದ ಕಾಯ್ದೆ ವಿರುದ್ಧ ಹೋರಾಟ ನಡೆಸಲಿದ್ದಾರೆ. ಎಲ್ಲ ನೌಕರರು, ಗುತ್ತಿಗೆದಾರರು ಒಗ್ಗೂಟ್ಟಿನಿಂದ ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.</p>.<p>ಕೆಪಿಟಿಸಿಎಲ್ ಲೆಕ್ಕಾಧಿಕಾರಿ ಹಣಮಂತರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಚುನಾವಣೆ ಪೂರ್ವ ನೀಡಿದ ಪ್ರಣಾಳಿಕೆಯಲ್ಲಿ 2021ರ ವಿದ್ಯುತ್ ಕಾಯ್ದೆ ತಿದ್ದುಪಡೆ ಅಜೆಂಡಾ ಇರಲಿಲ್ಲ. ಏಕಾಏಕಿ ಕಾಯ್ಕೆ ಜಾರಿ ಮಾಡುತ್ತಿರುವುದು ಖಾಸಗಿ ಅವರಿಗೆ ಮಣೆ ಹಾಕುತ್ತಿರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಸುಚಿತಕುಮಾರ, ಶಂಕರ ಗುತ್ತಿ, ಶಾಂತಪ್ಪ ಪೂಜಾರಿ, ಚಂದಪ್ಪ, ಸಂಜೀವಕುಮಾರ್, ಚಂದ್ರಕಾಂತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>