<p><strong>ಸುರಪುರ</strong>: ಜಾಗತಿಕ ತಾಪಮಾನ ಏರಿಕೆ, ಮಾಲಿನ್ಯ ಹೆಚ್ಚಳ, ಅರಣ್ಯ ನಾಶ, ಜಲಮೂಲಗಳ ಹಾನಿಯಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಜನ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ನ್ಯಾಯಾಧೀಶ ಚಿದಾನಂದ ಬಡಿಗೇರ ಹೇಳಿದರು.</p>.<p>ಇಲ್ಲಿಯ ಜೆಎಂಎಫ್ಸಿ ಕೋರ್ಟ್ನಲ್ಲಿ ಶನಿವಾರ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ವಿಶ್ವ ಭೂದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿಶ್ವ ಭೂ ದಿನದಂದು ಈ ಕುರಿತು ಚರ್ಚೆ ನಡೆಯಬೇಕು. ಜನರಿಗೆ ಶಿಕ್ಷಣ ನೀಡಲು ಹಾಗೂ ಪರಿಸರ ಸಾಕ್ಷರತೆ ಮೂಡಿಸಲು ಭೂಮಿ ದಿನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಭೂಮಿಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದರು.</p>.<p>ಪ್ರತಿಯೊಬ್ಬರು ಒಂದು ಸಸಿ ನೆಟ್ಟು ಅದನ್ನು ಬೆಳೆಸುವ ಸಂಕಲ್ಪದೊಂದಿಗೆ ಭೂಮಿಗೆ ಹಸಿರು ಹೊದಿಕೆ ಹಾಕುವ ಕೆಲಸ ಮಾಡಬೇಕಾಗಿದೆ. ಭೂಮಿ ನಮ್ಮನ್ನು ರಕ್ಷಿಸುತ್ತದೆ. ನಾವು ಅದನ್ನು ರಕ್ಷಿಸಬೇಕು ಎಂದು ಅವರು<br />ತಿಳಿಸಿದರು.</p>.<p>ಭೂಮಿಯನ್ನು ಆರೈಕೆ ಮಾಡಿ ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಆರೋಗ್ಯಕರ ಭೂಮಿಯನ್ನು ಹಸ್ತಾಂತ ರಿಸುವ ಅಗತ್ಯವಿದೆ. ಕೈಗಾರಿಕರಣ, ಅರಣ್ಯ ನಾಶ, ಗಣಿಗಾರಿಕೆಯಿಂದಾಗಿ ಭೂಮಿಯ ತಾಪಮಾನ ಮಾನವ ಸಹಿಸಲಾರದಷ್ಟು ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ನಮ್ಮ ದುರಾಸೆ ಪರಿಸರ ಅಸಮ ತೋಲನಕ್ಕೆ ಕಾರಣವಾಗಿದೆ. ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರು ಗಿಡ-ಮರ ಬೆಳೆಸಬೇಕು ಎಂದರು.</p>.<p>ವಕೀಲರ ಸಂಘದ ಉಪಾಧ್ಯಕ್ಷ ಮಾನಪ್ಪ ಕವಡಿಮಟ್ಟಿ, ಎಪಿಪಿ ರಾಘವೇಂದ್ರ ಜಹಗೀರದಾರ, ಪ್ಯಾನಲ್ ವಕೀಲರಾದ ಸಂತೋಷ್ ಗಾರಂಪಳ್ಳಿ, ಮಧುಸೂಧನ್ ಮುಂದಡಾ, ಮಲ್ಲಣ್ಣ ಭೋವಿ, ಸಿಬ್ಬಂದಿ ಇತರರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ಜಾಗತಿಕ ತಾಪಮಾನ ಏರಿಕೆ, ಮಾಲಿನ್ಯ ಹೆಚ್ಚಳ, ಅರಣ್ಯ ನಾಶ, ಜಲಮೂಲಗಳ ಹಾನಿಯಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಜನ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ನ್ಯಾಯಾಧೀಶ ಚಿದಾನಂದ ಬಡಿಗೇರ ಹೇಳಿದರು.</p>.<p>ಇಲ್ಲಿಯ ಜೆಎಂಎಫ್ಸಿ ಕೋರ್ಟ್ನಲ್ಲಿ ಶನಿವಾರ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ವಿಶ್ವ ಭೂದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿಶ್ವ ಭೂ ದಿನದಂದು ಈ ಕುರಿತು ಚರ್ಚೆ ನಡೆಯಬೇಕು. ಜನರಿಗೆ ಶಿಕ್ಷಣ ನೀಡಲು ಹಾಗೂ ಪರಿಸರ ಸಾಕ್ಷರತೆ ಮೂಡಿಸಲು ಭೂಮಿ ದಿನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಭೂಮಿಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದರು.</p>.<p>ಪ್ರತಿಯೊಬ್ಬರು ಒಂದು ಸಸಿ ನೆಟ್ಟು ಅದನ್ನು ಬೆಳೆಸುವ ಸಂಕಲ್ಪದೊಂದಿಗೆ ಭೂಮಿಗೆ ಹಸಿರು ಹೊದಿಕೆ ಹಾಕುವ ಕೆಲಸ ಮಾಡಬೇಕಾಗಿದೆ. ಭೂಮಿ ನಮ್ಮನ್ನು ರಕ್ಷಿಸುತ್ತದೆ. ನಾವು ಅದನ್ನು ರಕ್ಷಿಸಬೇಕು ಎಂದು ಅವರು<br />ತಿಳಿಸಿದರು.</p>.<p>ಭೂಮಿಯನ್ನು ಆರೈಕೆ ಮಾಡಿ ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಆರೋಗ್ಯಕರ ಭೂಮಿಯನ್ನು ಹಸ್ತಾಂತ ರಿಸುವ ಅಗತ್ಯವಿದೆ. ಕೈಗಾರಿಕರಣ, ಅರಣ್ಯ ನಾಶ, ಗಣಿಗಾರಿಕೆಯಿಂದಾಗಿ ಭೂಮಿಯ ತಾಪಮಾನ ಮಾನವ ಸಹಿಸಲಾರದಷ್ಟು ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ನಮ್ಮ ದುರಾಸೆ ಪರಿಸರ ಅಸಮ ತೋಲನಕ್ಕೆ ಕಾರಣವಾಗಿದೆ. ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರು ಗಿಡ-ಮರ ಬೆಳೆಸಬೇಕು ಎಂದರು.</p>.<p>ವಕೀಲರ ಸಂಘದ ಉಪಾಧ್ಯಕ್ಷ ಮಾನಪ್ಪ ಕವಡಿಮಟ್ಟಿ, ಎಪಿಪಿ ರಾಘವೇಂದ್ರ ಜಹಗೀರದಾರ, ಪ್ಯಾನಲ್ ವಕೀಲರಾದ ಸಂತೋಷ್ ಗಾರಂಪಳ್ಳಿ, ಮಧುಸೂಧನ್ ಮುಂದಡಾ, ಮಲ್ಲಣ್ಣ ಭೋವಿ, ಸಿಬ್ಬಂದಿ ಇತರರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>