ತಾಲ್ಲೂಕಿನ ವಜ್ಜಲ ಗ್ರಾಮದ ಉದ್ಯಮಿ ಎಸ್.ಪಿ. ದಯಾನಂದ ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಹತ್ತು ವರ್ಷಗಳ ಹಿಂದೆ ಹುಣಸಗಿ–ವಜ್ಜಲ ಮುಖ್ಯ ರಸ್ತೆಯಲ್ಲಿ ತಮ್ಮ ತಾಯಿ ಸುಶೀಲಮ್ಮ ಪಟ್ಟಣಶೆಟ್ಟಿ ಅವರ ನೆನಪಿಗಾಗಿ ದೇವಸ್ಥಾನ ನಿರ್ಮಿಸಿದ್ದಾರೆ. ಅವರ ಮೂರ್ತಿಯನ್ನೂ ಅಲ್ಲಿ ಪ್ರತಿಷ್ಠಾಪಿಸಿದ್ದು, ಇಲ್ಲಿ ನಿತ್ಯ ಪೂಜೆ ನಡೆಯುತ್ತಿದೆ.