<p>ಸುರಪುರ: ‘ಶಿಕ್ಷಣ ಈಗ ವ್ಯಾಪಾರೀಕರಣವಾಗಿದೆ. ಅನ್ಯ ಭಾಷೆಯ ವ್ಯಾಮೋಹ ಅಧಿಕವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸದೆ ವಂಚನೆ ಮಾಡುತ್ತಿದ್ದಾರೆ’ ಎಂದು ಸಾಹಿತಿ ಶ್ರೀನಿವಾಸ ಜಾಲವಾದಿ ಹೇಳಿದರು.</p>.<p>ತಾಲ್ಲೂಕಿನ ರುಕ್ಮಾಪುರದ ಭೀಮಬಾಯಿ ನಾರಾಯಣಪ್ಪ ಭಂಡಾರೆ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಇದರಿಂದ ಮಕ್ಕಳು ಸಂಸ್ಕಾರ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಭಾಷೆಯ ಸಂವಹನ ಕೈತಪ್ಪುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕನ್ನಡ ಮಾಧ್ಯಮ ಶಾಲೆಗಳು ಮಾದರಿಯಾಗುತ್ತವೆ’ ಎಂದರು.</p>.<p>ಪ್ರಭು ಕಾಲೇಜಿನ ಪ್ರಾಚಾರ್ಯ ಎಚ್. ವಿರುಪಾಕ್ಷನಾಯಕ ಮಾತನಾಡಿ, ‘ಕಾರ್ಯಕ್ರಮದಲ್ಲಿ ಮಕ್ಕಳಿಂದ ತಂದೆ ತಾಯಿಗಳಿಗೆ, ಪೂಜ್ಯರಿಗೆ, ಶಿಕ್ಷಕರಿಗೆ ಪಾದಪೂಜೆ ಮಾಡಿಸಿದ್ದು ಪ್ರಶಂಸನಾರ್ಹ. ಇದು ಹಿರಿಯರ ಮೇಲೆ ಮಕ್ಕಳಿಗೆ ಗೌರವ ಬೆಳೆಸುವ ಸಂಪ್ರದಾಯ’ ಎಂದರು.</p>.<p>ಗುರುಶಾಂತಮೂರ್ತಿ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನಿಡಿದರು. ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಭಂಡಾರೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಅಶ್ವಿನಿ ಪಾಟೀಲ, ಈರಪ್ಪ ಸಿಂಪಿ, ನಾಗೇಂದ್ರ ಬಣಗಾರ, ಶಿಕ್ಷಕರಾದ ಶಂಕ್ರಮ್ಮ, ಗಿರಿಜಾಬಾಯಿ, ವೀಣಾ, ಮಹಾದೇವಿ ಉಪಸ್ಥಿತರಿದ್ದರು.</p>.<p>ಸಂಗಣ್ಣ ಶಿರಗೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾವತಿ ಬಡಗಾ ಸ್ವಾಗತಿಸಿದರು. ಅರುಣಾಕುಮಾರಿ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶಶಿಕಲಾ ತಮ್ಮಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಶಿಕ್ಷಣ ಈಗ ವ್ಯಾಪಾರೀಕರಣವಾಗಿದೆ. ಅನ್ಯ ಭಾಷೆಯ ವ್ಯಾಮೋಹ ಅಧಿಕವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸದೆ ವಂಚನೆ ಮಾಡುತ್ತಿದ್ದಾರೆ’ ಎಂದು ಸಾಹಿತಿ ಶ್ರೀನಿವಾಸ ಜಾಲವಾದಿ ಹೇಳಿದರು.</p>.<p>ತಾಲ್ಲೂಕಿನ ರುಕ್ಮಾಪುರದ ಭೀಮಬಾಯಿ ನಾರಾಯಣಪ್ಪ ಭಂಡಾರೆ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಇದರಿಂದ ಮಕ್ಕಳು ಸಂಸ್ಕಾರ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಭಾಷೆಯ ಸಂವಹನ ಕೈತಪ್ಪುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕನ್ನಡ ಮಾಧ್ಯಮ ಶಾಲೆಗಳು ಮಾದರಿಯಾಗುತ್ತವೆ’ ಎಂದರು.</p>.<p>ಪ್ರಭು ಕಾಲೇಜಿನ ಪ್ರಾಚಾರ್ಯ ಎಚ್. ವಿರುಪಾಕ್ಷನಾಯಕ ಮಾತನಾಡಿ, ‘ಕಾರ್ಯಕ್ರಮದಲ್ಲಿ ಮಕ್ಕಳಿಂದ ತಂದೆ ತಾಯಿಗಳಿಗೆ, ಪೂಜ್ಯರಿಗೆ, ಶಿಕ್ಷಕರಿಗೆ ಪಾದಪೂಜೆ ಮಾಡಿಸಿದ್ದು ಪ್ರಶಂಸನಾರ್ಹ. ಇದು ಹಿರಿಯರ ಮೇಲೆ ಮಕ್ಕಳಿಗೆ ಗೌರವ ಬೆಳೆಸುವ ಸಂಪ್ರದಾಯ’ ಎಂದರು.</p>.<p>ಗುರುಶಾಂತಮೂರ್ತಿ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನಿಡಿದರು. ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಭಂಡಾರೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಅಶ್ವಿನಿ ಪಾಟೀಲ, ಈರಪ್ಪ ಸಿಂಪಿ, ನಾಗೇಂದ್ರ ಬಣಗಾರ, ಶಿಕ್ಷಕರಾದ ಶಂಕ್ರಮ್ಮ, ಗಿರಿಜಾಬಾಯಿ, ವೀಣಾ, ಮಹಾದೇವಿ ಉಪಸ್ಥಿತರಿದ್ದರು.</p>.<p>ಸಂಗಣ್ಣ ಶಿರಗೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾವತಿ ಬಡಗಾ ಸ್ವಾಗತಿಸಿದರು. ಅರುಣಾಕುಮಾರಿ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶಶಿಕಲಾ ತಮ್ಮಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>