ಚೆಕ್ಪೋಸ್ಟ್ ಮಾತ್ರವಲ್ಲದೇ ಪ್ರತಿ 100 ಮೀಟರ್ ಅಂತರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಇಬ್ಬರು ಡಿವೈಎಸ್ಪಿ, 15 ಸಿಪಿಐ, 30 ಪಿಎಸ್ಐ ಹಾಗೂ 350ಕ್ಕೂ ಅಧಿಕ ಪೊಲೀಸ್ ಕಾನ್ಸ್ಟೆಬಲ್ ಮತ್ತು ಹೆಡ್ ಕಾನ್ಸ್ಟೆಬಲ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ವಿವಿಧ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಮ್ಮ ಜಿಲ್ಲೆಯಿಂದ ಭಕ್ತರು ಬರದಂತೆ ತಡೆಯಲು ಮನವಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.
ಧ್ವನಿವರ್ಧಕ ಬಳಸಿ ಸಾರ್ವಜನಿಕವಾಗಿ ಜಾತ್ರೆ ನಿಷೇಧದ ಕುರಿತು ಪ್ರಕಟಣೆ ಹೊರಡಿಸಿ ಎಂದು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಸೂಚಿಸಿದರು.