<p><strong>ವಡಗೇರಾ</strong>: ದಾನಗಳಲ್ಲಿ ಶ್ರೇಷ್ಠ ದಾನ ನೇತ್ರ ದಾನ. ಪ್ರತಿಯೊಬ್ಬರು ತಮ್ಮ ಕಣ್ಣುಗಳನ್ನು ದಾನ ಮಾಡುವದರಿಂದ ಬೇರೆಯವರ ಜೀವನಕ್ಕೆ ಬೆಳಕಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಜಗನ್ನಾಥರಡ್ಡಿ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ಆಶಾ ಕಿರಣ ದೃಷ್ಟಿ ಕೇಂದ್ರದ ವತಿಯಿಂದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರ ಕಣ್ಣುಗಳನ್ನು ರಕ್ಷಿಸಲು ರಾಜ್ಯ ಸರ್ಕಾರವು ಆಶಾ ಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆಗಳನ್ನು ಹಾಗೂ ಕನ್ನಡಕಗಳನ್ನು ವಿತರಿಸುವದರ ಜತೆಗೆ ಕುರುಡುತನಕ್ಕೆ ಚಿಕಿತ್ಸೆನೀಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.</p>.<p>ದೂರ ದೃಷ್ಟಿ ಹಾಗೂ ಸಮೀಪ ದೃಷ್ಟಿ ದೋಷಗಳಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುತ್ತಿದೆ ಹಾಗೆಯೆ ಕಣ್ಣಿನಲ್ಲಿ ಪೊರೆ ಇರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.</p>.<p>40 ವರ್ಷಕ್ಕೆ ತಲುಪಿರುವ ಪ್ರತಿಯೊಬ್ಬರು ಕಾಲ ಕಾಲಕ್ಕೆ ವೈದ್ಯರನ್ನು ಕಂಡು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಕೊಳ್ಳಬೇಕು ಇದರಿಂದ ಮುಂಬರುವ ಕುರುಡುತನವನ್ನು ಹಾಗೂ ಇನ್ನಿತರ ಕಣ್ಣಿನ ರೋಗಗಳಿಂದ ಮುಕ್ತಿಯನ್ನು ಹೊಂದಲು ಸಾದ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.</p>.<p>ನೇತ್ರ ತಜ್ಷರಾದ ಶ್ರೀನಿವಾಸ ಮಾತನಾಡಿ ಅಂಧತ್ವ ಮುಕ್ತ ರಾಜ್ಯವನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ದೃಷ್ಟಿ ದೋಷವಿರುವ ಎಲ್ಲಾ ಹಿರಿಯ ನಾಗರಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಆಶಾ ಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>150 ಜನ ಹಿರಿಯ ನಾಗರಿಕರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ವೆಂಕಟೇಶ, ಮೇಘನಾಥ ಬೆಳ್ಳಿ, ಸಕ್ರೆಪ್ಪ, ಬಸಪ್ಪ ಸಜ್ಜನ, ಫಲಾನುಭವಿಗಳು, ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ದಾನಗಳಲ್ಲಿ ಶ್ರೇಷ್ಠ ದಾನ ನೇತ್ರ ದಾನ. ಪ್ರತಿಯೊಬ್ಬರು ತಮ್ಮ ಕಣ್ಣುಗಳನ್ನು ದಾನ ಮಾಡುವದರಿಂದ ಬೇರೆಯವರ ಜೀವನಕ್ಕೆ ಬೆಳಕಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಜಗನ್ನಾಥರಡ್ಡಿ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ಆಶಾ ಕಿರಣ ದೃಷ್ಟಿ ಕೇಂದ್ರದ ವತಿಯಿಂದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿ ಅವರು ಮಾತನಾಡಿದರು.</p>.<p>ಪ್ರತಿಯೊಬ್ಬರ ಕಣ್ಣುಗಳನ್ನು ರಕ್ಷಿಸಲು ರಾಜ್ಯ ಸರ್ಕಾರವು ಆಶಾ ಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆಗಳನ್ನು ಹಾಗೂ ಕನ್ನಡಕಗಳನ್ನು ವಿತರಿಸುವದರ ಜತೆಗೆ ಕುರುಡುತನಕ್ಕೆ ಚಿಕಿತ್ಸೆನೀಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.</p>.<p>ದೂರ ದೃಷ್ಟಿ ಹಾಗೂ ಸಮೀಪ ದೃಷ್ಟಿ ದೋಷಗಳಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುತ್ತಿದೆ ಹಾಗೆಯೆ ಕಣ್ಣಿನಲ್ಲಿ ಪೊರೆ ಇರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.</p>.<p>40 ವರ್ಷಕ್ಕೆ ತಲುಪಿರುವ ಪ್ರತಿಯೊಬ್ಬರು ಕಾಲ ಕಾಲಕ್ಕೆ ವೈದ್ಯರನ್ನು ಕಂಡು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಕೊಳ್ಳಬೇಕು ಇದರಿಂದ ಮುಂಬರುವ ಕುರುಡುತನವನ್ನು ಹಾಗೂ ಇನ್ನಿತರ ಕಣ್ಣಿನ ರೋಗಗಳಿಂದ ಮುಕ್ತಿಯನ್ನು ಹೊಂದಲು ಸಾದ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.</p>.<p>ನೇತ್ರ ತಜ್ಷರಾದ ಶ್ರೀನಿವಾಸ ಮಾತನಾಡಿ ಅಂಧತ್ವ ಮುಕ್ತ ರಾಜ್ಯವನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ದೃಷ್ಟಿ ದೋಷವಿರುವ ಎಲ್ಲಾ ಹಿರಿಯ ನಾಗರಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಆಶಾ ಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>150 ಜನ ಹಿರಿಯ ನಾಗರಿಕರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ವೆಂಕಟೇಶ, ಮೇಘನಾಥ ಬೆಳ್ಳಿ, ಸಕ್ರೆಪ್ಪ, ಬಸಪ್ಪ ಸಜ್ಜನ, ಫಲಾನುಭವಿಗಳು, ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>