<p>ಯಾದಗಿರಿ: ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 35 ಕುರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.</p>.<p>ತಾಲ್ಲೂಕಿನ ಬಂದಳ್ಳಿ ಗ್ರಾಮದ ಸಿದ್ದಪ್ಪ ಮಾಳಪ್ಪ ಅವರಿಗೆ ಸೇರಿದ 25 ಹಾಗೂ ಈಶಪ್ಪ ಗುಂಜಲಪ್ಪ ಅವರಿಗೆ ಸೇರಿದ 10 ಕುರಿಗಳು ಕುರಿಗಳು ಕಳುವಾಗಿವೆ.</p>.<p>ಈಶಪ್ಪ ಅವರು ಹೊಲದಲ್ಲಿನ ಶೆಡ್ನಲ್ಲಿ ಕುರಿಗಳನ್ನು ಇರಿಸಿದ್ದರು. ರಾತ್ರಿ ವೇಳೆ ಶೆಡ್ಗೆ ನುಗ್ಗಿದ ಕಳ್ಳರು ₹ 2.50 ಲಕ್ಷ ಮೌಲ್ಯದ 25 ಕುರಿಗಳನ್ನು ಕದ್ದೊಯ್ದಿದ್ದಾರೆ. ಇದೇ ಮಾದರಿಯಲ್ಲಿ ಈಶಪ್ಪ ಅವರಿಗೆ ಸೇರಿದ ₹ 1.20 ಲಕ್ಷ ಮೌಲ್ಯದ ಕುರಿಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಜಿಲ್ಲೆಯಲ್ಲಿ ಕುರಿಗಳ ಕಳವು ಹೆಚ್ಚಾಗುತ್ತಿದೆ. ಇದರಿಂದ ಕುರಿಗಾಹಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕುರಿ ಕಳ್ಳರನ್ನು ಹಿಡಿದು ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-30-977086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 35 ಕುರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.</p>.<p>ತಾಲ್ಲೂಕಿನ ಬಂದಳ್ಳಿ ಗ್ರಾಮದ ಸಿದ್ದಪ್ಪ ಮಾಳಪ್ಪ ಅವರಿಗೆ ಸೇರಿದ 25 ಹಾಗೂ ಈಶಪ್ಪ ಗುಂಜಲಪ್ಪ ಅವರಿಗೆ ಸೇರಿದ 10 ಕುರಿಗಳು ಕುರಿಗಳು ಕಳುವಾಗಿವೆ.</p>.<p>ಈಶಪ್ಪ ಅವರು ಹೊಲದಲ್ಲಿನ ಶೆಡ್ನಲ್ಲಿ ಕುರಿಗಳನ್ನು ಇರಿಸಿದ್ದರು. ರಾತ್ರಿ ವೇಳೆ ಶೆಡ್ಗೆ ನುಗ್ಗಿದ ಕಳ್ಳರು ₹ 2.50 ಲಕ್ಷ ಮೌಲ್ಯದ 25 ಕುರಿಗಳನ್ನು ಕದ್ದೊಯ್ದಿದ್ದಾರೆ. ಇದೇ ಮಾದರಿಯಲ್ಲಿ ಈಶಪ್ಪ ಅವರಿಗೆ ಸೇರಿದ ₹ 1.20 ಲಕ್ಷ ಮೌಲ್ಯದ ಕುರಿಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಜಿಲ್ಲೆಯಲ್ಲಿ ಕುರಿಗಳ ಕಳವು ಹೆಚ್ಚಾಗುತ್ತಿದೆ. ಇದರಿಂದ ಕುರಿಗಾಹಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕುರಿ ಕಳ್ಳರನ್ನು ಹಿಡಿದು ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-30-977086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>