ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ನಾಯ್ಕಲ್‍ನಲ್ಲಿ ಸಿಡಿಲು ಬಡಿದು ರೈತ ಸಾವು

Last Updated 7 ಜುಲೈ 2021, 5:16 IST
ಅಕ್ಷರ ಗಾತ್ರ

ಯಾದಗಿರಿ: ಇಲ್ಲಿಗೆ ಸಮೀಪದ ನಾಯ್ಕಲ್ ಗ್ರಾಮದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ರೈತ ಜುಮೇಲಸಾ ಸಲಾಂಸಾಬ್ ಬೆಂಡೆಬೆಂಬಳಿ (52) ಮೃತಪಟ್ಟಿದ್ದಾರೆ.

ರೈತ ಜುಮೇಲಸಾ ಹಾಗೂ ಪತ್ನಿ ಸಮೇತ ಬೆಳಿಗ್ಗೆ ಜಮೀನಿಗೆ ಹೋಗಿದ್ದರು. ಸಂಜೆ ಮನೆಗೆ ವಾಪಾಸ್ಸಾಗುವ ವೇಳೆ ದಾರಿ ಮಧ್ಯೆ ಜುಮೇಲಸಾ ಅವರಿಗೆ ಸಿಡಿಲು ಬಡಿದಿದೆ. ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮದ ಮುಸ್ಲಿಂ ಮುಖಂಡರಾದ ಗ್ರಾ.ಪಂ ಮಾಜಿ ಅಧ್ಯಕ್ಷ ಖಾಜಾ ಮೈನೋದ್ದೀನ್ ಜೇಮಶೇರಿ, ಇಸ್ಮಾಯಿಲ್‍ಸಾಬ್ ಕುರುಕುಂದಿ, ಜಾವೀದ್ ಕುರುಕುಂದಿ, ಇಸ್ಮಾಯಿಲ್ ಸೌದಗಾರ, ಶಬ್ಬೀರ್ ಗಡ್ಡೆನೋರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT