<p><strong>ಯಾದಗಿರಿ</strong>: ಬಾಕಿಯಿರುವ ಗೌರವಧನ, ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಬಾಕಿಗಳನ್ನು ಶೀಘ್ರ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಎಐಯುಟಿಯುಸಿ ಜಿಲ್ಲಾ ಘಟಕದಿಂದ ಮಂಗಳವಾರ ಡಿಎಚ್ಒ ಡಾ.ಮಹೇಶ ಬಿರಾದರ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಕಳೆದ ಎರಡು ತಿಂಗಳು ಬಾಕಿ ಇರುವ ರಾಜ್ಯ ಸರ್ಕಾರದ ಮಾಸಿಕ ₹5 ಸಾವಿರ ನಿಶ್ಚಿತ ಗೌರವಧನ, ಎರಡು ತಿಂಗಳಿಂದ ಬಾಕಿ ಇರುವ ತಂಡ ಆಧರಿತ ಪ್ರೋತ್ಸಾಹ ಧನ ₹1 ಸಾವಿರ, ಮೂರು ತಿಂಗಳಿಂದ ಬಾಕಿ ಇರುವ ಕೇಂದ್ರದ ಇನ್ಸೆಂಟಿವ್ ಪ್ರೋತ್ಸಾಹ ಧನ, ಒಂದು ವರ್ಷದಿಂದ ಬಾಕಿ ಇರುವ ಎನ್ಸಿಡಿ ಪ್ರೋತ್ಸಾಹ ಧನ ಶೀಘ್ರ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ತಿಂಗಳು ಪಿಎಚ್ಸಿಯಲ್ಲಿ, ಎರಡು ತಿಂಗಳಿಗೆ ಒಮ್ಮೆ ತಾಲ್ಲೂಕಿನಲ್ಲಿ, ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಆಶಾ ಯೂನಿಯನ್ ಪದಾಧಿಕಾರಿಗಳ ಜೊತೆಗೆ ಆಶಾ ಕುಂದು ಕೊರತೆ ಸಭೆಗಳನ್ನು ಕರೆಯಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷೆ ಡಿ.ಉಮಾದೇವಿ, ಉಪಾಧ್ಯಕ್ಷರಾದ ಪುಷ್ಪಲತಾ, ಅಮೃತ, ಕಾರ್ಯದರ್ಶಿಗಳಾದ ಅಶ್ವಿನಿ, ಸರಸ್ವತಿ ಸೇರಿದಂತೆ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-856728968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಬಾಕಿಯಿರುವ ಗೌರವಧನ, ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಬಾಕಿಗಳನ್ನು ಶೀಘ್ರ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಎಐಯುಟಿಯುಸಿ ಜಿಲ್ಲಾ ಘಟಕದಿಂದ ಮಂಗಳವಾರ ಡಿಎಚ್ಒ ಡಾ.ಮಹೇಶ ಬಿರಾದರ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಕಳೆದ ಎರಡು ತಿಂಗಳು ಬಾಕಿ ಇರುವ ರಾಜ್ಯ ಸರ್ಕಾರದ ಮಾಸಿಕ ₹5 ಸಾವಿರ ನಿಶ್ಚಿತ ಗೌರವಧನ, ಎರಡು ತಿಂಗಳಿಂದ ಬಾಕಿ ಇರುವ ತಂಡ ಆಧರಿತ ಪ್ರೋತ್ಸಾಹ ಧನ ₹1 ಸಾವಿರ, ಮೂರು ತಿಂಗಳಿಂದ ಬಾಕಿ ಇರುವ ಕೇಂದ್ರದ ಇನ್ಸೆಂಟಿವ್ ಪ್ರೋತ್ಸಾಹ ಧನ, ಒಂದು ವರ್ಷದಿಂದ ಬಾಕಿ ಇರುವ ಎನ್ಸಿಡಿ ಪ್ರೋತ್ಸಾಹ ಧನ ಶೀಘ್ರ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ತಿಂಗಳು ಪಿಎಚ್ಸಿಯಲ್ಲಿ, ಎರಡು ತಿಂಗಳಿಗೆ ಒಮ್ಮೆ ತಾಲ್ಲೂಕಿನಲ್ಲಿ, ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಆಶಾ ಯೂನಿಯನ್ ಪದಾಧಿಕಾರಿಗಳ ಜೊತೆಗೆ ಆಶಾ ಕುಂದು ಕೊರತೆ ಸಭೆಗಳನ್ನು ಕರೆಯಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾ ಅಧ್ಯಕ್ಷೆ ಡಿ.ಉಮಾದೇವಿ, ಉಪಾಧ್ಯಕ್ಷರಾದ ಪುಷ್ಪಲತಾ, ಅಮೃತ, ಕಾರ್ಯದರ್ಶಿಗಳಾದ ಅಶ್ವಿನಿ, ಸರಸ್ವತಿ ಸೇರಿದಂತೆ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-856728968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>