<p><strong>ಯಾದಗಿರಿ:</strong> ನಗರಸಭೆಯಿಂದ ಅನುಮತಿ ಪಡೆಯದೇ ಶುದ್ಧ ಕುಡಿಯುವ ನೀರಿನ ಘಟಕ ನಡೆಸುತ್ತಿದ್ದ ಘಟಕಗಳ ಮೇಲೆ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ನೇತೃತ್ವದಲ್ಲಿ ಶುಕ್ರವಾರ ದಾಳಿ ಮಾಡಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.</p>.<p>ಅಜೀಜ್ ಕಾಲೊನಿಯ ಮೆಟ್ರೋ, ಸಹರಾ ಕಾಲೊನಿ ಬಳಿಯಿರುವ ನಿಬ್ರಾಸ್ ಮಿನರಲ್ ವಾಟರ್ ಘಟಕದ ಮೇಲೆ ದಾಳಿ ಮಾಡುವ ಮೂಲಕ ಅಕ್ರಮ ದಂಧೆ ಬಯಲಿಗೆ ಎಳೆದಿದ್ದಾರೆ.</p>.<p>ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ನೀರಿನ ದಂಧೆಗೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದಾಗಿಯೇ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಅವರು ದಾಳಿಯನ್ನು ರಹಸ್ಯವಾಗಿ ಇಟ್ಟು ಅಧಿಕಾರಿಗಳ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ. ಇನ್ನೂ ಅಕ್ರಮ ನೀರಿನ ದಂಧೆ ನಡೆಸುವವರಿಗೆ ನೇರವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.</p>.<p>ಶುದ್ಧ ನೀರಿನ ಘಟಕದಲ್ಲಿ ಅವಧಿ ಮೀರಿದ ನೀರಿನ ಪಾಕೀಟ್, ರಸಾಯನಿಕಗಳನ್ನು ಕಂಡು ಅಧ್ಯಕ್ಷ ಸೇರಿದಂತೆ ನಗರಸಭೆ ಅಧಿಕಾರಿಗಳು ದಂಗಾಗಿದ್ದಾರೆ. ಹಲವಾರು ವರ್ಷಗಳಿಂದ ಈ ಧಂದೆ ನಡೆಸುತ್ತಿರುವುದು ದಾಳಿ ವೇಳೆ ಬಯಲಾಗಿದೆ.</p>.<p>ಘಟಕದ ಮಾಲಿಕರನ್ನು ಈ ಬಗ್ಗೆ ಪ್ರಶ್ನಿಸಿದರೆ ಸರಿಯಾದ ಅಧ್ಯಕ್ಷರಿಗೆ ಸರಿಯಾದ ಉತ್ತರ ನೀಡಿಲ್ಲ. ಇದರಿಂದ ಕೋಪಗೊಂಡ ಅಂಬಿಗೇರ ಎಲ್ಲ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ಲಾಸ್ಟಿಕ್ ವಶಪಡಿಸಿಕೊಂಡು ನಗರಸಭೆಯ ಕಸದ ವಾಹನ, ಟ್ರ್ಯಾಕ್ಟರ್ನಲ್ಲಿ ಸಾಗಿಸಲಾಯಿತು.</p>.<p>ಅನುಮತಿ ಪಡೆಯದೇ ಆರಂಭ: ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ನಗರಸಭೆಯಿಂದ ಅನುಮತಿ ಪಡೆಯಬೇಕು. ನೀರು ಮಾರಾಟ ಮಾಡುವವರು ಕಡ್ಡಾಯವಾಗಿ ಐಎಸ್ಐ ಮಾರ್ಕ್ ಹೊಂದಿರಬೇಕು. ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಿದೆ. ಆದರೆ, ಆದರೆ ಇದ್ಯಾವುದು ಇಲ್ಲದಿರುವುದು ದಾಳಿ ವೇಳೆ ಮಾಡಿರುವ ತನಿಖೆಯಲ್ಲಿ ತಿಳಿದು ಬಂದಿದೆ. ಅಕ್ರಮವಾಗಿ ಈ ಪರಿಯಾಗಿ ದಂಧೆ ಬೆಳೆಯಲು ಮೊದಲಿನಿಂದಲೂ ನಿರ್ಲಕ್ಷ್ಯತನ ಮಾಡಿರುವುದೇ ಮೂಲ ಕಾರಣವಾಗಿದೆ. ಹೀಗಾಗಿಯೇ ಇದರ ಬಗ್ಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರು ದಿಟ್ಟವಾಗಿ ದಾಳಿ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ದಾಳಿಗೆ ಬೆಚ್ಚಿ ಬಿದ್ದಿರುವ ಅಕ್ರಮವಾಗಿ ದಂಧೆ ನಡೆಸುವವರು ಕಂಗಾಲು ಆಗಿದ್ದಾರೆ.</p>.<p>ದಾಳಿ ವೇಳೆ ಪರಿಸರ ಎಂಜಿನಿಯರ್ ಸಲೀಂ, ನಗರಸಭೆ ಎಸ್ಐ ಸುರೇಶ್ ಇದ್ದರು.</p>.<p>***</p>.<p>ಅನುಮತಿ ಪಡೆಯದೇ ಹಲವಾರು ವರ್ಷಗಳಿಂದ ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ. ಕ್ರಿಮಿನಲ್ ಕೇಸ್ ದಾಖಲಿಸುವ ಚಿಂತನೆಯಿದೆ.<br /><em><strong>–ಸುರೇಶ ಅಂಬಿಗೇರ, ನಗರಸಭೆ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರಸಭೆಯಿಂದ ಅನುಮತಿ ಪಡೆಯದೇ ಶುದ್ಧ ಕುಡಿಯುವ ನೀರಿನ ಘಟಕ ನಡೆಸುತ್ತಿದ್ದ ಘಟಕಗಳ ಮೇಲೆ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ನೇತೃತ್ವದಲ್ಲಿ ಶುಕ್ರವಾರ ದಾಳಿ ಮಾಡಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.</p>.<p>ಅಜೀಜ್ ಕಾಲೊನಿಯ ಮೆಟ್ರೋ, ಸಹರಾ ಕಾಲೊನಿ ಬಳಿಯಿರುವ ನಿಬ್ರಾಸ್ ಮಿನರಲ್ ವಾಟರ್ ಘಟಕದ ಮೇಲೆ ದಾಳಿ ಮಾಡುವ ಮೂಲಕ ಅಕ್ರಮ ದಂಧೆ ಬಯಲಿಗೆ ಎಳೆದಿದ್ದಾರೆ.</p>.<p>ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ನೀರಿನ ದಂಧೆಗೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದಾಗಿಯೇ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಅವರು ದಾಳಿಯನ್ನು ರಹಸ್ಯವಾಗಿ ಇಟ್ಟು ಅಧಿಕಾರಿಗಳ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ. ಇನ್ನೂ ಅಕ್ರಮ ನೀರಿನ ದಂಧೆ ನಡೆಸುವವರಿಗೆ ನೇರವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.</p>.<p>ಶುದ್ಧ ನೀರಿನ ಘಟಕದಲ್ಲಿ ಅವಧಿ ಮೀರಿದ ನೀರಿನ ಪಾಕೀಟ್, ರಸಾಯನಿಕಗಳನ್ನು ಕಂಡು ಅಧ್ಯಕ್ಷ ಸೇರಿದಂತೆ ನಗರಸಭೆ ಅಧಿಕಾರಿಗಳು ದಂಗಾಗಿದ್ದಾರೆ. ಹಲವಾರು ವರ್ಷಗಳಿಂದ ಈ ಧಂದೆ ನಡೆಸುತ್ತಿರುವುದು ದಾಳಿ ವೇಳೆ ಬಯಲಾಗಿದೆ.</p>.<p>ಘಟಕದ ಮಾಲಿಕರನ್ನು ಈ ಬಗ್ಗೆ ಪ್ರಶ್ನಿಸಿದರೆ ಸರಿಯಾದ ಅಧ್ಯಕ್ಷರಿಗೆ ಸರಿಯಾದ ಉತ್ತರ ನೀಡಿಲ್ಲ. ಇದರಿಂದ ಕೋಪಗೊಂಡ ಅಂಬಿಗೇರ ಎಲ್ಲ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ಲಾಸ್ಟಿಕ್ ವಶಪಡಿಸಿಕೊಂಡು ನಗರಸಭೆಯ ಕಸದ ವಾಹನ, ಟ್ರ್ಯಾಕ್ಟರ್ನಲ್ಲಿ ಸಾಗಿಸಲಾಯಿತು.</p>.<p>ಅನುಮತಿ ಪಡೆಯದೇ ಆರಂಭ: ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ನಗರಸಭೆಯಿಂದ ಅನುಮತಿ ಪಡೆಯಬೇಕು. ನೀರು ಮಾರಾಟ ಮಾಡುವವರು ಕಡ್ಡಾಯವಾಗಿ ಐಎಸ್ಐ ಮಾರ್ಕ್ ಹೊಂದಿರಬೇಕು. ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಿದೆ. ಆದರೆ, ಆದರೆ ಇದ್ಯಾವುದು ಇಲ್ಲದಿರುವುದು ದಾಳಿ ವೇಳೆ ಮಾಡಿರುವ ತನಿಖೆಯಲ್ಲಿ ತಿಳಿದು ಬಂದಿದೆ. ಅಕ್ರಮವಾಗಿ ಈ ಪರಿಯಾಗಿ ದಂಧೆ ಬೆಳೆಯಲು ಮೊದಲಿನಿಂದಲೂ ನಿರ್ಲಕ್ಷ್ಯತನ ಮಾಡಿರುವುದೇ ಮೂಲ ಕಾರಣವಾಗಿದೆ. ಹೀಗಾಗಿಯೇ ಇದರ ಬಗ್ಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರು ದಿಟ್ಟವಾಗಿ ದಾಳಿ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ದಾಳಿಗೆ ಬೆಚ್ಚಿ ಬಿದ್ದಿರುವ ಅಕ್ರಮವಾಗಿ ದಂಧೆ ನಡೆಸುವವರು ಕಂಗಾಲು ಆಗಿದ್ದಾರೆ.</p>.<p>ದಾಳಿ ವೇಳೆ ಪರಿಸರ ಎಂಜಿನಿಯರ್ ಸಲೀಂ, ನಗರಸಭೆ ಎಸ್ಐ ಸುರೇಶ್ ಇದ್ದರು.</p>.<p>***</p>.<p>ಅನುಮತಿ ಪಡೆಯದೇ ಹಲವಾರು ವರ್ಷಗಳಿಂದ ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ. ಕ್ರಿಮಿನಲ್ ಕೇಸ್ ದಾಖಲಿಸುವ ಚಿಂತನೆಯಿದೆ.<br /><em><strong>–ಸುರೇಶ ಅಂಬಿಗೇರ, ನಗರಸಭೆ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>