<p>ಯಾದಗಿರಿ: ‘ಕಾಯಕವೇ ಕೈಲಾಸ ಎಂದು ವಿಶ್ವಕ್ಕೆ ಸಾರುವುದರ ಜೊತೆಗೆ ಸಮಾನತೆಗಾಗಿ ಹೋರಾಡಿದ ಮಹಾನ್ ಕ್ರಾಂತಿ ಪುರುಷ ಬಸವಣ್ಣ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು.</p>.<p>ನಗರದ ಕರವೇ ಕಾರ್ಯಾಲಯದಲ್ಲಿ ಬಸವಣ್ಣ ಜಯಂತಿ ಆಚರಿಸಿ ಮಾತನಾಡಿದ ಅವರು, ‘ಬಸವಣ್ಣನವರು ಸಮಗ್ರ ಕ್ರಾಂತಿಯ ಯುಗಪುರುಷ. ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದರು. ಕೇವಲ ವಚನಕಾರರಲ್ಲದೆ ಶ್ರೇಷ್ಠ ಆರ್ಥಿಕ ತಜ್ಞರು, ವಿಚಾರವಾಧಿ ಹಾಗೂ ಸಮಾನತಾವಾದಿ ಆಗಿದ್ದರು’ ಎಂದು ಹೇಳಿದರು.</p>.<p>‘ಬಸವಣ್ಣರು 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಮುಂಚೂಣಿಯಾಗಿದ್ದು, ಸಮಾನತೆ, ಶ್ರಮದ ಗೌರವ, ಮತ್ತು ಭಕ್ತಿಯ ಮೂಲಕ ಜೀವನವನ್ನು ಉನ್ನತ ಮಟ್ಟಕ್ಕೆ ತರುವ ಸಂದೇಶವನ್ನು ನೀಡಿದ್ದಾರೆ. ಅವರ ವಚನ ಸಾಹಿತ್ಯ ಇಂದಿಗೂ ಮಾನವೀಯ ಮೌಲ್ಯಗಳನ್ನು ಸಾರುತ್ತಿದೆ’ ಎಂದರು.</p>.<p>ಮುಖಂಡರಾದ ಮಲ್ಲು ಮಾಳಿಕೇರಿ, ಸಂತೋಷಕುಮಾರ ನಿರ್ಮಲಕರ್, ವಿಶ್ವರಾಜ ಪಾಟೀಲ, ಅಶೋಕನಾಯಕ, ರವಿ ಜಮ್ಮಾರ್, ಚೇತನ ಮಡಿವಾಳ, ಶರಣು ಹಬ್ಬಳ್ಳಿ, ನಾಗರಾಜ ಪಿಲ್ಲಿ, ವಿಶ್ವ ಯಾದಗಿರಿ, ರಮೇಶ.ಡಿ.ನಾಯಕ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-30-1727204667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಕಾಯಕವೇ ಕೈಲಾಸ ಎಂದು ವಿಶ್ವಕ್ಕೆ ಸಾರುವುದರ ಜೊತೆಗೆ ಸಮಾನತೆಗಾಗಿ ಹೋರಾಡಿದ ಮಹಾನ್ ಕ್ರಾಂತಿ ಪುರುಷ ಬಸವಣ್ಣ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು.</p>.<p>ನಗರದ ಕರವೇ ಕಾರ್ಯಾಲಯದಲ್ಲಿ ಬಸವಣ್ಣ ಜಯಂತಿ ಆಚರಿಸಿ ಮಾತನಾಡಿದ ಅವರು, ‘ಬಸವಣ್ಣನವರು ಸಮಗ್ರ ಕ್ರಾಂತಿಯ ಯುಗಪುರುಷ. ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದರು. ಕೇವಲ ವಚನಕಾರರಲ್ಲದೆ ಶ್ರೇಷ್ಠ ಆರ್ಥಿಕ ತಜ್ಞರು, ವಿಚಾರವಾಧಿ ಹಾಗೂ ಸಮಾನತಾವಾದಿ ಆಗಿದ್ದರು’ ಎಂದು ಹೇಳಿದರು.</p>.<p>‘ಬಸವಣ್ಣರು 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಮುಂಚೂಣಿಯಾಗಿದ್ದು, ಸಮಾನತೆ, ಶ್ರಮದ ಗೌರವ, ಮತ್ತು ಭಕ್ತಿಯ ಮೂಲಕ ಜೀವನವನ್ನು ಉನ್ನತ ಮಟ್ಟಕ್ಕೆ ತರುವ ಸಂದೇಶವನ್ನು ನೀಡಿದ್ದಾರೆ. ಅವರ ವಚನ ಸಾಹಿತ್ಯ ಇಂದಿಗೂ ಮಾನವೀಯ ಮೌಲ್ಯಗಳನ್ನು ಸಾರುತ್ತಿದೆ’ ಎಂದರು.</p>.<p>ಮುಖಂಡರಾದ ಮಲ್ಲು ಮಾಳಿಕೇರಿ, ಸಂತೋಷಕುಮಾರ ನಿರ್ಮಲಕರ್, ವಿಶ್ವರಾಜ ಪಾಟೀಲ, ಅಶೋಕನಾಯಕ, ರವಿ ಜಮ್ಮಾರ್, ಚೇತನ ಮಡಿವಾಳ, ಶರಣು ಹಬ್ಬಳ್ಳಿ, ನಾಗರಾಜ ಪಿಲ್ಲಿ, ವಿಶ್ವ ಯಾದಗಿರಿ, ರಮೇಶ.ಡಿ.ನಾಯಕ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-30-1727204667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>