<p><strong>ಯಾದಗಿರಿ</strong>: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಾವು ವೇಗವಾಗಿದ್ದು, ಶತಕದ ಸಮೀಪದ ಬಂದಿದೆ. ಮೇ 5ರ ತನಕ ಜಿಲ್ಲೆಯಲ್ಲಿ 96 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ.</p>.<p>ಕೋವಿಡ್ ಮೊದಲ ಅಲೆಯಲ್ಲಿ ವಯಸ್ಸಾದವರು, ಅನಾರೋಗ್ಯಕ್ಕೆ ಒಳಗಾದವರು ಸೋಂಕಿನಿಂದ ಮೃತಪಡುತ್ತಿದ್ದರು. ಆದರೆ, ಈಗ ಯುವಕರು, ಸಣ್ಣವಯಸ್ಸಿನವರು ಕೋವಿಡ್ಗೆ ತುತ್ತಾಗುತ್ತಿದ್ದಾರೆ.</p>.<p class="Subhead">ಎಲ್ಲೆಲ್ಲಿ ಹೆಚ್ಚು ಸಾವು?: ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಹೆಚ್ಚು ಸಾವುಗಳು ಕೋವಿಡ್ನಿಂದ ಸಂಭವಿಸಿವೆ. ಈಗಾಗಲೇ 32 ಜನ ವಿವಿಧ ವಯೋಮಾನದವರು ಕೋವಿಡ್ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದು ಆ ತಾಲ್ಲೂಕಿನ ಜನತೆಗೆ ಭಯಹುಟ್ಟಿಸುವಂತಾಗಿದೆ.</p>.<p>2020ರ ಮೇ 12ರಂದು ಜಿಲ್ಲೆಯಲ್ಲಿ ಕೋವಿಡ್ ಮೊದಲ ಬಾರಿಗೆ ಪತ್ತೆಯಾಯಿತು. ಆ ನಂತರ ಮೇ 20ರಂದು ಗುರುಮಠಕಲ್ ತಾಲ್ಲೂಕಿನ ವೃದ್ಧೆಯೊಬ್ಬರು ಮುಂಬೈನಿಂದ ಯರಗೋಳ ಚೆಕ್ಪೋಸ್ಟ್ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಅಂದಿನಿಂದ ಆರಂಭವಾದ ಕೋವಿಡ್ ಮರಣಗಳು ನವೆಂಬರ್ ವರೆಗೆ ನಿಯಂತ್ರಣದಲ್ಲಿದ್ದವು. ಆದರೆ, ಎರಡನೇ ಅಲೆ ಪ್ರಾರಂಭವಾದಲಿಂದ 30ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.</p>.<p>‘ಕೋವಿಡ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು, ಜಿಲ್ಲೆಯಲ್ಲಿ ಆಮ್ಲಜನಕ ಸಿಲಿಂಡರ್ ಹಾಗೂ ಹಾಸಿಗೆಗಳ ಕೊರತೆಯಾಗಿದೆ. ಸೂಕ್ತ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಇದು ಮುಂದೆ<br />ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಜಿಲ್ಲಾಡಳಿತ ಶೀಘ್ರ ಎಚ್ಚೆತ್ತುಕೊಂಡರೆ ಅಪಾಯಪಟ್ಟವನ್ನು ಕಡಿಮೆ ಮಾಡಬಹುದು’ ಎಂದು ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಅವಿನಾಶ ಜಗನ್ನಾಥ ಹೇಳುತ್ತಾರೆ.</p>.<p>‘ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 132 ಆಮ್ಲಜನಕ ಸಿಲಿಂಡರ್ ವ್ಯವಸ್ಥೆಯ ಹಾಸಿಗೆ, 16 ವೆಂಟಿಲೇಟರ್ ಬೆಡ್ಗಳಿವೆ. ಎಲ್ಲವೂ ಭರ್ತಿಯಾಗಿವೆ. 15 ಐಸಿಯು ಬೆಡ್ಗಳು ಕಾರ್ಯಾಚರಣೆ ಮಾಡುತ್ತಿತ್ತು. ಒಂದು ದುರಸ್ತಿಗೆ ಬಂದಿದೆ. ಈಗ ಲಾಕ್ಡೌನ್ ಇರುವುದರಿಂದ ಹೆಚ್ಚುವರಿ<br />ಬೆಡ್ಗಳನ್ನು ಹೊಂದಿಸಲು ಆಗುತ್ತಿಲ್ಲ ಎಂದು ಅಸಹಾಯಕತೆ ತೋರ್ಪಡಿಸುತ್ತಾರೆ’ ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಚಿಕಿತ್ಸಕ ಎಸ್.ಬಿ.ಹಿರೇಮಠ ಹೇಳುತ್ತಾರೆ.</p>.<p>***</p>.<p>ಜಿಲ್ಲೆಯಲ್ಲಿ ಸಂಭವಿಸಿದ ಸಾವುಗಳ ವಿವರ</p>.<p>ತಾಲ್ಲೂಕು; ಸಾವುಗಳು</p>.<p>ಯಾದಗಿರಿ;28</p>.<p>ಗುರುಮಠಕಲ್;13</p>.<p>ಶಹಾಪುರ;32</p>.<p>ವಡಗೇರಾ;8</p>.<p>ಸುರಪುರ;12</p>.<p>ಹುಣಸಗಿ;03</p>.<p>ಒಟ್ಟು;96</p>.<p>**</p>.<p>ಸಾವು ಪ್ರಕರಣ ಮುಚ್ಚಿಡುತ್ತಿರುವ ಜಿಲ್ಲಾಡಳಿತ: ಆರೋಪ</p>.<p>ಇಲ್ಲಿಂದ ಬೇರೆ ಜಿಲ್ಲೆಗೆ ಕೋವಿಡ್ ರೋಗಿಗಳನ್ನು ಸ್ಥಳಾಂತರ ಮಾಡಿ ಅಲ್ಲಿ ಅವರು ಅಸುನೀಗಿದರೆ ಜಿಲ್ಲೆಯೂ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಇದರಿಂದ ಎಷ್ಟೊ ರೋಗಿಗಳ ಸಾವನ್ನು ಜಿಲ್ಲಾಡಳಿತ ಲೆಕ್ಕದಲ್ಲಿ ಸೇರಿಸಿಕೊಂಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ.</p>.<p>ಜಿಲ್ಲೆಯಲ್ಲಿ ಆಮ್ಲಜನಕ ಬೆಡ್ಗಳ ಕೊರತೆಯಾಗಿದೆ. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳಲು ಶಿಫಾರಸು ಮಾಡಲಾಗುತ್ತಿದೆ. ಹಣ ಇದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಸಾವಿರಾರು ರೂಪಾಯಿ ವೆಚ್ಚ ಮಾಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಬಡವರು ಎಲ್ಲಿಗೆ ತೆರಳಬೇಕು ಎನ್ನುವುದು ಜನ ಸಾಮಾನ್ಯರ ಪ್ರಶ್ನೆಯಾಗಿದೆ.</p>.<p>***</p>.<p>ಹಿರಿಯ ನಾಗರಿಕರು ಕೋವಿಡ್ ಕೈ ಮೀರಿದ ಮೇಲೆ ಆಸ್ಪತ್ರೆಗೆ ಬರುತ್ತಿದ್ದಾರೆ. ಶ್ವಾಸಕೋಶ ಸಮಸ್ಯೆ ಇದ್ದವರು ಶೀಘ್ರವೇ ಮರಣಕ್ಕೆ ತುತ್ತಾಗುತ್ತಿದ್ದಾರೆ<br />ಎಸ್.ಬಿ.ಹಿರೇಮಠ,ಜಿಲ್ಲಾ ಚಿಕಿತ್ಸಕ, ಜಿಲ್ಲಾಸ್ಪತ್ರೆ</p>.<p>***</p>.<p>ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಬೆಡ್ಗಳ ಕೊರತೆ ಇದೆ. ಜಿಲ್ಲಾಡಳಿತ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕೋವಿಡ್ ಕೇರ್ ಸೆಂಟರ್ ಹೆಚ್ಚುಮಾಡಲಿ<br />ಅವಿನಾಶ ಜಗನ್ನಾಥ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಾವು ವೇಗವಾಗಿದ್ದು, ಶತಕದ ಸಮೀಪದ ಬಂದಿದೆ. ಮೇ 5ರ ತನಕ ಜಿಲ್ಲೆಯಲ್ಲಿ 96 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ.</p>.<p>ಕೋವಿಡ್ ಮೊದಲ ಅಲೆಯಲ್ಲಿ ವಯಸ್ಸಾದವರು, ಅನಾರೋಗ್ಯಕ್ಕೆ ಒಳಗಾದವರು ಸೋಂಕಿನಿಂದ ಮೃತಪಡುತ್ತಿದ್ದರು. ಆದರೆ, ಈಗ ಯುವಕರು, ಸಣ್ಣವಯಸ್ಸಿನವರು ಕೋವಿಡ್ಗೆ ತುತ್ತಾಗುತ್ತಿದ್ದಾರೆ.</p>.<p class="Subhead">ಎಲ್ಲೆಲ್ಲಿ ಹೆಚ್ಚು ಸಾವು?: ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಹೆಚ್ಚು ಸಾವುಗಳು ಕೋವಿಡ್ನಿಂದ ಸಂಭವಿಸಿವೆ. ಈಗಾಗಲೇ 32 ಜನ ವಿವಿಧ ವಯೋಮಾನದವರು ಕೋವಿಡ್ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದು ಆ ತಾಲ್ಲೂಕಿನ ಜನತೆಗೆ ಭಯಹುಟ್ಟಿಸುವಂತಾಗಿದೆ.</p>.<p>2020ರ ಮೇ 12ರಂದು ಜಿಲ್ಲೆಯಲ್ಲಿ ಕೋವಿಡ್ ಮೊದಲ ಬಾರಿಗೆ ಪತ್ತೆಯಾಯಿತು. ಆ ನಂತರ ಮೇ 20ರಂದು ಗುರುಮಠಕಲ್ ತಾಲ್ಲೂಕಿನ ವೃದ್ಧೆಯೊಬ್ಬರು ಮುಂಬೈನಿಂದ ಯರಗೋಳ ಚೆಕ್ಪೋಸ್ಟ್ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಅಂದಿನಿಂದ ಆರಂಭವಾದ ಕೋವಿಡ್ ಮರಣಗಳು ನವೆಂಬರ್ ವರೆಗೆ ನಿಯಂತ್ರಣದಲ್ಲಿದ್ದವು. ಆದರೆ, ಎರಡನೇ ಅಲೆ ಪ್ರಾರಂಭವಾದಲಿಂದ 30ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.</p>.<p>‘ಕೋವಿಡ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು, ಜಿಲ್ಲೆಯಲ್ಲಿ ಆಮ್ಲಜನಕ ಸಿಲಿಂಡರ್ ಹಾಗೂ ಹಾಸಿಗೆಗಳ ಕೊರತೆಯಾಗಿದೆ. ಸೂಕ್ತ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಇದು ಮುಂದೆ<br />ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಜಿಲ್ಲಾಡಳಿತ ಶೀಘ್ರ ಎಚ್ಚೆತ್ತುಕೊಂಡರೆ ಅಪಾಯಪಟ್ಟವನ್ನು ಕಡಿಮೆ ಮಾಡಬಹುದು’ ಎಂದು ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಅವಿನಾಶ ಜಗನ್ನಾಥ ಹೇಳುತ್ತಾರೆ.</p>.<p>‘ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 132 ಆಮ್ಲಜನಕ ಸಿಲಿಂಡರ್ ವ್ಯವಸ್ಥೆಯ ಹಾಸಿಗೆ, 16 ವೆಂಟಿಲೇಟರ್ ಬೆಡ್ಗಳಿವೆ. ಎಲ್ಲವೂ ಭರ್ತಿಯಾಗಿವೆ. 15 ಐಸಿಯು ಬೆಡ್ಗಳು ಕಾರ್ಯಾಚರಣೆ ಮಾಡುತ್ತಿತ್ತು. ಒಂದು ದುರಸ್ತಿಗೆ ಬಂದಿದೆ. ಈಗ ಲಾಕ್ಡೌನ್ ಇರುವುದರಿಂದ ಹೆಚ್ಚುವರಿ<br />ಬೆಡ್ಗಳನ್ನು ಹೊಂದಿಸಲು ಆಗುತ್ತಿಲ್ಲ ಎಂದು ಅಸಹಾಯಕತೆ ತೋರ್ಪಡಿಸುತ್ತಾರೆ’ ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಚಿಕಿತ್ಸಕ ಎಸ್.ಬಿ.ಹಿರೇಮಠ ಹೇಳುತ್ತಾರೆ.</p>.<p>***</p>.<p>ಜಿಲ್ಲೆಯಲ್ಲಿ ಸಂಭವಿಸಿದ ಸಾವುಗಳ ವಿವರ</p>.<p>ತಾಲ್ಲೂಕು; ಸಾವುಗಳು</p>.<p>ಯಾದಗಿರಿ;28</p>.<p>ಗುರುಮಠಕಲ್;13</p>.<p>ಶಹಾಪುರ;32</p>.<p>ವಡಗೇರಾ;8</p>.<p>ಸುರಪುರ;12</p>.<p>ಹುಣಸಗಿ;03</p>.<p>ಒಟ್ಟು;96</p>.<p>**</p>.<p>ಸಾವು ಪ್ರಕರಣ ಮುಚ್ಚಿಡುತ್ತಿರುವ ಜಿಲ್ಲಾಡಳಿತ: ಆರೋಪ</p>.<p>ಇಲ್ಲಿಂದ ಬೇರೆ ಜಿಲ್ಲೆಗೆ ಕೋವಿಡ್ ರೋಗಿಗಳನ್ನು ಸ್ಥಳಾಂತರ ಮಾಡಿ ಅಲ್ಲಿ ಅವರು ಅಸುನೀಗಿದರೆ ಜಿಲ್ಲೆಯೂ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಇದರಿಂದ ಎಷ್ಟೊ ರೋಗಿಗಳ ಸಾವನ್ನು ಜಿಲ್ಲಾಡಳಿತ ಲೆಕ್ಕದಲ್ಲಿ ಸೇರಿಸಿಕೊಂಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ.</p>.<p>ಜಿಲ್ಲೆಯಲ್ಲಿ ಆಮ್ಲಜನಕ ಬೆಡ್ಗಳ ಕೊರತೆಯಾಗಿದೆ. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳಲು ಶಿಫಾರಸು ಮಾಡಲಾಗುತ್ತಿದೆ. ಹಣ ಇದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಸಾವಿರಾರು ರೂಪಾಯಿ ವೆಚ್ಚ ಮಾಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಬಡವರು ಎಲ್ಲಿಗೆ ತೆರಳಬೇಕು ಎನ್ನುವುದು ಜನ ಸಾಮಾನ್ಯರ ಪ್ರಶ್ನೆಯಾಗಿದೆ.</p>.<p>***</p>.<p>ಹಿರಿಯ ನಾಗರಿಕರು ಕೋವಿಡ್ ಕೈ ಮೀರಿದ ಮೇಲೆ ಆಸ್ಪತ್ರೆಗೆ ಬರುತ್ತಿದ್ದಾರೆ. ಶ್ವಾಸಕೋಶ ಸಮಸ್ಯೆ ಇದ್ದವರು ಶೀಘ್ರವೇ ಮರಣಕ್ಕೆ ತುತ್ತಾಗುತ್ತಿದ್ದಾರೆ<br />ಎಸ್.ಬಿ.ಹಿರೇಮಠ,ಜಿಲ್ಲಾ ಚಿಕಿತ್ಸಕ, ಜಿಲ್ಲಾಸ್ಪತ್ರೆ</p>.<p>***</p>.<p>ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಬೆಡ್ಗಳ ಕೊರತೆ ಇದೆ. ಜಿಲ್ಲಾಡಳಿತ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕೋವಿಡ್ ಕೇರ್ ಸೆಂಟರ್ ಹೆಚ್ಚುಮಾಡಲಿ<br />ಅವಿನಾಶ ಜಗನ್ನಾಥ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>