ಯಾದಗಿರಿ: ಸಿಡಿಲು ಬಡಿತಕ್ಕೆ ಕೊಟ್ಟಿಗೆಯಲ್ಲಿದ್ದ ಎತ್ತುಗಳ ಸಾವು

ಯರಗೋಳ (ಯಾದಗಿರಿ ಜಿಲ್ಲೆ): ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಿಡಿಲು ಬಡಿದು ಎರಡು ಎತ್ತುಗಳು ಸಾವನ್ನಪ್ಪಿವೆ. ಸುಮಾರು ಒಂದೂವರೆ ಲಕ್ಷ ಮೌಲ್ಯದ ಎತ್ತುಗಳು ಎಂದು ಅಂದಾಜಿಸಲಾಗಿದೆ.
ರೈತ ಹಣಮಂತ ನಾಗಪ್ಪ ಚಿಕ್ಕಬಾನರ ಅವರಿಗೆ ಸೇರಿದ ಎರಡು ಎತ್ತುಗಳು ಕೊಟ್ಟಿಗೆಯಲ್ಲಿ ಸಾವನ್ನಪ್ಪಿವೆ.
ಗ್ರಾಮದ ಮಲಕಪ್ಪನಳ್ಳಿ ರಸ್ತೆಯ ಬಳಿ ಇರುವ ಹೊಲದಲ್ಲಿ ಎತ್ತುಗಳು ಇದ್ದವು.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳಾದ ರಾಜು ಬಾಗೋಡಿ, ಶೇಖ ಹಜರತ್, ಪಶು ಇಲಾಖೆಯ ಮಲ್ಲಿಕಾರ್ಜುನ ಸುಬೇದಾರ್ ಭೇಟಿ ನೀಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.