ಉಪ ಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡುವ ಮುನ್ನ ಸಭೆ ನಡೆಸಿದ್ದ ಜಿಲ್ಲಾಧಿಕಾರಿ, ಜಿಲ್ಲೆಯ ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಆದರೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿತನ ತೋರಿದ್ದರು. ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರೂ ಇಲ್ಲಿಯವರೆಗೂ ಸಮಜಾಯಿಷಿ ನೀಡಿಲ್ಲ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಲಾಖೆಯ ಮೇಲಧಿಕಾರಿಗಳಿಗೆ ಶಿಫಾರಸು ಮಾಡಿದ್ದರು.