<p>ವಡಗೇರಾ: ‘ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯಿಂದ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪ್ರಾಂಜಲವಾದ ಮನಸ್ಸಿನಿಂದ ಮಾಡಿದಾಗ ಮಾತ್ರ ಅದು ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ’ ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ವಡಗೇರಾ ತಾಲ್ಲೂಕಿನ ಗುರುಸುಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ದೇವಸ್ಥಾನದಿಂದ ಮುಖ್ಯರಸ್ತೆಯವರೆಗೆ ₹ 2 ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಾನು ಹಂತಹಂತವಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ, ನಿಮ್ಮೆಲ್ಲರ ಸಹಕಾರದಿಂದ ಹೊಸ ಕಾಯಕಲ್ಪ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘‘ಈಗಾಗಲೇ ನಗರದಲ್ಲಿ ಜನರ ಬೇಡಿಕೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಮತಕ್ಷೇತ್ರದ ಎಲ್ಲಾ ಹೋಬಳಿಗಳ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದು ತಿಳಿಸಿದರು.</p>.<p>ದೇವಸ್ಥಾನದ ಕಾರ್ಯದರ್ಶಿ ಮಲ್ಲಿಕಾರ್ಜುನಸ್ವಾಮಿ ಹೊಸಮಠ ಮಾತನಾಡಿ, ‘ದೇವಸ್ಥಾನದ ರಕ್ಷಣೆಗೆ ತಡೆಗೋಡೆ ಕಾಮಗಾರಿ ಮಳೆಗಾಲದೊಳಗೆ ಮುಗಿಸಲು ಶಾಸಕರು ಅನುದಾನ ನೀಡಬೇಕು ಎಂದರು, ಜತೆಗೆ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು.</p>.<p>ಲೋಕೋಪಯೋಗಿ ಎಂಜಿನಿಯರ್ ರಮೇಶ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಿದ್ದಣ್ಣಗೌಡ ಹಿರೇಗೌಡ, ಶರಣಭೂಪಾಲರಡ್ಡಿ, ಮಲ್ಲಿಕಾರ್ಜುನರಡ್ಡಿ ನಾಯ್ಕಲ್, ಬಸರಾಜಪ್ಪಗೌಡ ಶಾಂತವೀರ, ಖಾಜಾಮೈನುದ್ದೀನ್ ಮಿರ್ಚಿ ನಾಯ್ಕಲ್, ಶಿವರಾಜಪ್ಪಗೌಡ, ಗುತ್ತಿಗೆದಾರ ಶಿವಬಸವರಡ್ಡಿ ನಾಯ್ಕಲ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೂಗೂರೆಡ್ಡಿ ಬೆಂಡೆಬೆಂಬಳಿ, ಸಹಾಯಕ ಎಂಜಿನಿಯರ್ ದೇವದಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-30-1727011145</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ‘ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯಿಂದ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪ್ರಾಂಜಲವಾದ ಮನಸ್ಸಿನಿಂದ ಮಾಡಿದಾಗ ಮಾತ್ರ ಅದು ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ’ ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ವಡಗೇರಾ ತಾಲ್ಲೂಕಿನ ಗುರುಸುಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ದೇವಸ್ಥಾನದಿಂದ ಮುಖ್ಯರಸ್ತೆಯವರೆಗೆ ₹ 2 ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಾನು ಹಂತಹಂತವಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ, ನಿಮ್ಮೆಲ್ಲರ ಸಹಕಾರದಿಂದ ಹೊಸ ಕಾಯಕಲ್ಪ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘‘ಈಗಾಗಲೇ ನಗರದಲ್ಲಿ ಜನರ ಬೇಡಿಕೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಮತಕ್ಷೇತ್ರದ ಎಲ್ಲಾ ಹೋಬಳಿಗಳ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದು ತಿಳಿಸಿದರು.</p>.<p>ದೇವಸ್ಥಾನದ ಕಾರ್ಯದರ್ಶಿ ಮಲ್ಲಿಕಾರ್ಜುನಸ್ವಾಮಿ ಹೊಸಮಠ ಮಾತನಾಡಿ, ‘ದೇವಸ್ಥಾನದ ರಕ್ಷಣೆಗೆ ತಡೆಗೋಡೆ ಕಾಮಗಾರಿ ಮಳೆಗಾಲದೊಳಗೆ ಮುಗಿಸಲು ಶಾಸಕರು ಅನುದಾನ ನೀಡಬೇಕು ಎಂದರು, ಜತೆಗೆ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು.</p>.<p>ಲೋಕೋಪಯೋಗಿ ಎಂಜಿನಿಯರ್ ರಮೇಶ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಿದ್ದಣ್ಣಗೌಡ ಹಿರೇಗೌಡ, ಶರಣಭೂಪಾಲರಡ್ಡಿ, ಮಲ್ಲಿಕಾರ್ಜುನರಡ್ಡಿ ನಾಯ್ಕಲ್, ಬಸರಾಜಪ್ಪಗೌಡ ಶಾಂತವೀರ, ಖಾಜಾಮೈನುದ್ದೀನ್ ಮಿರ್ಚಿ ನಾಯ್ಕಲ್, ಶಿವರಾಜಪ್ಪಗೌಡ, ಗುತ್ತಿಗೆದಾರ ಶಿವಬಸವರಡ್ಡಿ ನಾಯ್ಕಲ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೂಗೂರೆಡ್ಡಿ ಬೆಂಡೆಬೆಂಬಳಿ, ಸಹಾಯಕ ಎಂಜಿನಿಯರ್ ದೇವದಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-30-1727011145</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>