<p><strong>ಯಾದಗಿರಿ: </strong>ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ಅವರು ಅಧಿಕಾರ ಪದಗ್ರಹಣ ವಹಿಸಿಕೊಂಡ ಸಮಾರಂಭವನ್ನು ನಗರದ ಐದು ಕಡೆ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ನಗರದ ವಾರ್ಡ್ ಸಂಖ್ಯೆ 23 ರಲ್ಲಿನ ವೀರಶೈವ ಕಲ್ಯಾಣ ಮಂಟಪದ ಹತ್ತಿರದ ಬಯಲು ವೇದಿಕೆ ಬಳಿ ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಅವಿನಾಶ ಜಗನ್ನಾಥ ನೇತೃತ್ವದಲ್ಲಿ ಬೃಹತ್ತಾಕಾರದ ಎಲ್ಇಡಿ ಪರದೆಯ ಮೇಲೆ ಅಧಿಕಾರದ ಪದಗ್ರಹಣ ಸಮಾರಂಭ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ನಾಗರಿಕರು ಸೇರಿದಂತೆ 300ಕ್ಕೂ ಹೆಚ್ಚು ಜನ ಪಾಲ್ಗೊಂಡು ಕಾರ್ಯಕ್ರಮ ವೀಕ್ಷಿಸಿದರು.</p>.<p>ಈ ವೇಳೆ ನಗರಸಭೆ ಸದಸ್ಯರಾದ ನಿರ್ಮಲಾ ಜಗನ್ನಾಥ, ವೆಂಕಟರೆಡ್ಡಿ ವನಿಕೇರಿ, ಕಾಂಗ್ರೆಸ್ ಮುಖಂಡರಾದ ಶರಣಗೌಡ ಮಾಲಿಪಾಟೀಲ, ವಿಶ್ವನಾಥ ಠಾಣಗುಂದಿ, ಭೀಮಣಗೌಡ ಬೀರಾದಾರ, ಶಿವುಗೌಡ ಪಗಲಾಪುರ, ನಾಗರಾಜ ಜೀವಣಗಿ, ಇರ್ಫಾನ್ ಬಾದಲ್, ಮಲ್ಲೇಶಿ ನಾಯಕ, ವಿನೋದ ಕುಮಾರ, ಬಾಬು, ಗುರು, ಮಲ್ಲು ಇದ್ದರು.</p>.<p><strong>ವಾರ್ಡ್ ಸಂಖ್ಯೆ 30:</strong> ನಗರದ ವಾರ್ಡ್ ಸಂಖ್ಯೆ 30ರಲ್ಲಿ ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ ಅವರ ನಿವಾಸದ ಬಳಿಯ ಬಯಲು ವೇದಿಕೆಯಲ್ಲಿ ಆನ್ ಲೈನ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.</p>.<p>ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶಾಲವಾದ ಎಲ್ಇಡಿ ಪರದೆಯ ಮೇಲೆ ಡಿ.ಕೆ. ಶಿವಕುಮಾರ ಪದಗ್ರಹಣ ಕಾರ್ಯಕ್ರಮವನ್ನು ವಾರ್ಡ್ನ ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು.</p>.<p>ಅಲ್ಲದೆ ಪಕ್ಷದ ಕಚೇರಿ, ಅಂಬೇಡ್ಕರ್ ವೃತ್ತ, ಕೋಟಗಾರವಾಡದಲ್ಲಿಯೂ ನೇರ ಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ರಜಾಕ್, ಕಾರ್ಯದರ್ಶಿ ಪ್ರಭಾಕರ ಜಿ. ಯರಗೋಳ, ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಪವನಕುಮಾರ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ ನಾಯ್ಕಲ್, ರಂಜಿತ್, ಶಶಿ ಪೂಜಾರಿ, ಫೈಜಲ್, ಇರ್ಫಾನ್ ಸೇರಿದಂತೆ ಸುಮಾರು 100 ಜನ ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ಅವರು ಅಧಿಕಾರ ಪದಗ್ರಹಣ ವಹಿಸಿಕೊಂಡ ಸಮಾರಂಭವನ್ನು ನಗರದ ಐದು ಕಡೆ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ನಗರದ ವಾರ್ಡ್ ಸಂಖ್ಯೆ 23 ರಲ್ಲಿನ ವೀರಶೈವ ಕಲ್ಯಾಣ ಮಂಟಪದ ಹತ್ತಿರದ ಬಯಲು ವೇದಿಕೆ ಬಳಿ ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಅವಿನಾಶ ಜಗನ್ನಾಥ ನೇತೃತ್ವದಲ್ಲಿ ಬೃಹತ್ತಾಕಾರದ ಎಲ್ಇಡಿ ಪರದೆಯ ಮೇಲೆ ಅಧಿಕಾರದ ಪದಗ್ರಹಣ ಸಮಾರಂಭ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ನಾಗರಿಕರು ಸೇರಿದಂತೆ 300ಕ್ಕೂ ಹೆಚ್ಚು ಜನ ಪಾಲ್ಗೊಂಡು ಕಾರ್ಯಕ್ರಮ ವೀಕ್ಷಿಸಿದರು.</p>.<p>ಈ ವೇಳೆ ನಗರಸಭೆ ಸದಸ್ಯರಾದ ನಿರ್ಮಲಾ ಜಗನ್ನಾಥ, ವೆಂಕಟರೆಡ್ಡಿ ವನಿಕೇರಿ, ಕಾಂಗ್ರೆಸ್ ಮುಖಂಡರಾದ ಶರಣಗೌಡ ಮಾಲಿಪಾಟೀಲ, ವಿಶ್ವನಾಥ ಠಾಣಗುಂದಿ, ಭೀಮಣಗೌಡ ಬೀರಾದಾರ, ಶಿವುಗೌಡ ಪಗಲಾಪುರ, ನಾಗರಾಜ ಜೀವಣಗಿ, ಇರ್ಫಾನ್ ಬಾದಲ್, ಮಲ್ಲೇಶಿ ನಾಯಕ, ವಿನೋದ ಕುಮಾರ, ಬಾಬು, ಗುರು, ಮಲ್ಲು ಇದ್ದರು.</p>.<p><strong>ವಾರ್ಡ್ ಸಂಖ್ಯೆ 30:</strong> ನಗರದ ವಾರ್ಡ್ ಸಂಖ್ಯೆ 30ರಲ್ಲಿ ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ ಅವರ ನಿವಾಸದ ಬಳಿಯ ಬಯಲು ವೇದಿಕೆಯಲ್ಲಿ ಆನ್ ಲೈನ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.</p>.<p>ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶಾಲವಾದ ಎಲ್ಇಡಿ ಪರದೆಯ ಮೇಲೆ ಡಿ.ಕೆ. ಶಿವಕುಮಾರ ಪದಗ್ರಹಣ ಕಾರ್ಯಕ್ರಮವನ್ನು ವಾರ್ಡ್ನ ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು.</p>.<p>ಅಲ್ಲದೆ ಪಕ್ಷದ ಕಚೇರಿ, ಅಂಬೇಡ್ಕರ್ ವೃತ್ತ, ಕೋಟಗಾರವಾಡದಲ್ಲಿಯೂ ನೇರ ಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ರಜಾಕ್, ಕಾರ್ಯದರ್ಶಿ ಪ್ರಭಾಕರ ಜಿ. ಯರಗೋಳ, ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಪವನಕುಮಾರ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ ನಾಯ್ಕಲ್, ರಂಜಿತ್, ಶಶಿ ಪೂಜಾರಿ, ಫೈಜಲ್, ಇರ್ಫಾನ್ ಸೇರಿದಂತೆ ಸುಮಾರು 100 ಜನ ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>