<p>ಯಾದಗಿರಿ: ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರ ಸಹಕಾರ ಹಾಗೂ ಶಿಕ್ಷಕರ ಸತತ ಪ್ರಯತ್ನದ ಫಲವಾಗಿ ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ’ ಎಂದು ಡಿಡಿಪಿಐ ಚನ್ನಬಸಪ್ಪ ಮುಧೋಳ ಹೇಳಿದರು.</p>.<p>ನಗರದ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಸಪ್ನ ಮೈದಾನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಘಟಕ, ಗುರುಮಠಕಲ್ ಹಾಗೂ ಯಾದಗಿರಿ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಮುಂದಿನ ದಿನಗಳಲ್ಲಿ ಶಿಕ್ಷಕರ ಯಾವುದೇ ಕೆಲಸ ಇದ್ದರೂ ಬಾಕಿ ಉಳಿಯದ ಹಾಗೆ ಬಗೆಹರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಸಂಘದ ನೂತನ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ ಮಾತನಾಡಿ, ‘ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಲಿ ಅವರ ನೇತೃತ್ವದಲ್ಲಿ ಶಿಕ್ಷಕರ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಜಿಲ್ಲೆಯಲ್ಲಿಯೂ ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ’ ಎಂದರು.</p>.<p>‘ಪದವಿ ಪಡೆದ ಶಿಕ್ಷಕರಿಗೆ ವೇತನ ಬಡ್ತಿ ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಬೇಡಿಕೆ ಈಡೇರಿಕೆಗೆ ಶ್ರಮಿಸಲಾಗುವುದು. ಶಿಕ್ಷಕರ ಯಾವುದೇ ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.</p>.<p>ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ ಮಾತನಾಡಿದರು. ನೂತನ ಪದಾಧಿಕಾರಿಗಳು ಮಹಾತ್ಮಾ ಗಾಂಧಿ, ಕನಕದಾಸ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ನೂತನ ಪದಾಧಿಕಾರಿಗಳು: ರಾಘವೇಂದ್ರ ಅಳ್ಳಳ್ಳಿ (ಜಿಲ್ಲಾ ಅಧ್ಯಕ್ಷ), ದೇವರಾಜ್ ಪಾಟೀಲ (ಜಿಲ್ಲಾ ಪ್ರಧಾನ ಕಾರ್ಯದರ್ಶಿ), ನಿಂಗಪ್ಪ ಅಂಗಡಿ (ಖಜಾಂಚಿ), ಪಂಪನಗೌಡ ಪಾಟೀಲ (ಉಪಾಧ್ಯಕ್ಷ), ಉಮಾದೇವಿ (ಉಪಾಧ್ಯಕ್ಷೆ, ಮಹಿಳಾ ವಿಭಾಗ), ಯಾದಗಿರಿ ತಾಲ್ಲೂಕು ಅಧ್ಯಕ್ಷರಾಗಿ ಹಣಮಾ ನಾಯಕ್, ಬಸಿರ್ ಅಹಮದ್ (ಪ್ರಧಾನ ಕಾರ್ಯದರ್ಶಿ), ಮೃತ್ಯುಂಜಯ (ಉಪಾಧ್ಯಕ್ಷ), ಶಾಂತಮ್ಮ (ಉಪಾಧ್ಯಕ್ಷೆ, ಮಹಿಳಾ ವಿಭಾಗ), ಕುಮಾರ್ ರವಿಚಂದ್ರ (ಖಜಾಂಚಿ), ಸಂಗೀತಾ (ಸಂಘಟನಾ ಕಾರ್ಯದರ್ಶಿ), ಬಸವರಾಜ ಕೆರುಟಿಗಿ, ಸುಭಾಷರೆಡ್ಡಿ ಪೊಲೀಸ್ ಪಾಟೀಲ (ನಿರ್ದೇಶಕರು) ಹಾಗೂ ಗುರುಮಠಕಲ್ ತಾಲ್ಲೂಕು ಅಧ್ಯಕ್ಷರಾಗಿ ನಾರಾಯಣ ರೆಡ್ಡಿ ಪೊಲೀಸ್ ಪಾಟೀಲ, ಮಾಲಿನಿ (ಪ್ರಧಾನ ಕಾರ್ಯದರ್ಶಿ) ಚಂದ್ರಕಾಂತ್ (ಖಜಾಂಚಿ) ಹಾಗೂ ನಾಗರೆಡ್ಡಿ ಮಾಲಿ ಪಾಟೀಲ (ಉಪಾಧ್ಯಕ್ಷ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-30-1630627124</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರ ಸಹಕಾರ ಹಾಗೂ ಶಿಕ್ಷಕರ ಸತತ ಪ್ರಯತ್ನದ ಫಲವಾಗಿ ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ’ ಎಂದು ಡಿಡಿಪಿಐ ಚನ್ನಬಸಪ್ಪ ಮುಧೋಳ ಹೇಳಿದರು.</p>.<p>ನಗರದ ಸರ್ಕಾರಿ ಕನ್ಯಾ ಪ್ರೌಢಶಾಲೆಯ ಸಪ್ನ ಮೈದಾನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಘಟಕ, ಗುರುಮಠಕಲ್ ಹಾಗೂ ಯಾದಗಿರಿ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಮುಂದಿನ ದಿನಗಳಲ್ಲಿ ಶಿಕ್ಷಕರ ಯಾವುದೇ ಕೆಲಸ ಇದ್ದರೂ ಬಾಕಿ ಉಳಿಯದ ಹಾಗೆ ಬಗೆಹರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಸಂಘದ ನೂತನ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ ಮಾತನಾಡಿ, ‘ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಲಿ ಅವರ ನೇತೃತ್ವದಲ್ಲಿ ಶಿಕ್ಷಕರ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಜಿಲ್ಲೆಯಲ್ಲಿಯೂ ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ’ ಎಂದರು.</p>.<p>‘ಪದವಿ ಪಡೆದ ಶಿಕ್ಷಕರಿಗೆ ವೇತನ ಬಡ್ತಿ ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಬೇಡಿಕೆ ಈಡೇರಿಕೆಗೆ ಶ್ರಮಿಸಲಾಗುವುದು. ಶಿಕ್ಷಕರ ಯಾವುದೇ ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.</p>.<p>ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ ಮಾತನಾಡಿದರು. ನೂತನ ಪದಾಧಿಕಾರಿಗಳು ಮಹಾತ್ಮಾ ಗಾಂಧಿ, ಕನಕದಾಸ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ನೂತನ ಪದಾಧಿಕಾರಿಗಳು: ರಾಘವೇಂದ್ರ ಅಳ್ಳಳ್ಳಿ (ಜಿಲ್ಲಾ ಅಧ್ಯಕ್ಷ), ದೇವರಾಜ್ ಪಾಟೀಲ (ಜಿಲ್ಲಾ ಪ್ರಧಾನ ಕಾರ್ಯದರ್ಶಿ), ನಿಂಗಪ್ಪ ಅಂಗಡಿ (ಖಜಾಂಚಿ), ಪಂಪನಗೌಡ ಪಾಟೀಲ (ಉಪಾಧ್ಯಕ್ಷ), ಉಮಾದೇವಿ (ಉಪಾಧ್ಯಕ್ಷೆ, ಮಹಿಳಾ ವಿಭಾಗ), ಯಾದಗಿರಿ ತಾಲ್ಲೂಕು ಅಧ್ಯಕ್ಷರಾಗಿ ಹಣಮಾ ನಾಯಕ್, ಬಸಿರ್ ಅಹಮದ್ (ಪ್ರಧಾನ ಕಾರ್ಯದರ್ಶಿ), ಮೃತ್ಯುಂಜಯ (ಉಪಾಧ್ಯಕ್ಷ), ಶಾಂತಮ್ಮ (ಉಪಾಧ್ಯಕ್ಷೆ, ಮಹಿಳಾ ವಿಭಾಗ), ಕುಮಾರ್ ರವಿಚಂದ್ರ (ಖಜಾಂಚಿ), ಸಂಗೀತಾ (ಸಂಘಟನಾ ಕಾರ್ಯದರ್ಶಿ), ಬಸವರಾಜ ಕೆರುಟಿಗಿ, ಸುಭಾಷರೆಡ್ಡಿ ಪೊಲೀಸ್ ಪಾಟೀಲ (ನಿರ್ದೇಶಕರು) ಹಾಗೂ ಗುರುಮಠಕಲ್ ತಾಲ್ಲೂಕು ಅಧ್ಯಕ್ಷರಾಗಿ ನಾರಾಯಣ ರೆಡ್ಡಿ ಪೊಲೀಸ್ ಪಾಟೀಲ, ಮಾಲಿನಿ (ಪ್ರಧಾನ ಕಾರ್ಯದರ್ಶಿ) ಚಂದ್ರಕಾಂತ್ (ಖಜಾಂಚಿ) ಹಾಗೂ ನಾಗರೆಡ್ಡಿ ಮಾಲಿ ಪಾಟೀಲ (ಉಪಾಧ್ಯಕ್ಷ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-30-1630627124</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>