<p><strong>ಯಾದಗಿರಿ:</strong> ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ವಿಳಂಬ ಮಾಡದೆ ಸರಬರಾಜು ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.</p>.<p>‘ಈ ವರ್ಷ ಮುಂಗಾರು ಹಂಗಾಮು ಅವಧಿಗಿಂತ ಮೊದಲು ಆರಂಭವಾಗುವ ಮುನ್ಸೂಚನೆ ಇದೆ. ಎಲ್ಲ ತರಹದ ಬಿತ್ತನೆ ಬೀಜ ಮತ್ತು ಗೊಬ್ಬರ ಕೊರತೆ ಆಗದಂತೆ ತಾಲ್ಲೂಕು ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಬೇಕು. ಅವುಗಳನ್ನು ರೈತರಿಗೆ ಪೂರೈಸಿ ಅನುಕೂಲ ಮಾಡಿಕೊಡಬೇಕು’ ಎಂದು ಕೋರಿದ್ದಾರೆ.</p>.<p>‘ಯಾವುದೇ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿರಬಾರದು. ಅಕ್ರಮವಾಗಿ ಬೇರೆ ರಾಜ್ಯದಿಂದ ಬರುವ ಕಳಪೆ ಬೀಜಗಳ ಬಗ್ಗೆ ನಿಗಾ ಇಡಬೇಕು. ಕೃತಕ ಅಭಾವ ಸೃಷ್ಟಿ ಮಾಡಿ ತೊಂದರೆ ಆಗದಂತೆ ಗೊಬ್ಬರ ಮತ್ತು ಬೀಜದ ಅಂಗಡಿಯ ಮಾಲೀಕರಿಗೆ ಮನದಟ್ಟು ಮಾಡಬೇಕು’ಎಂದಿದ್ದಾರೆ.</p>.<p>‘ಕೃತಕ ಅಭಾವ ಸೃಷ್ಟಿಸುವ ಯಾವುದೇ ಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ಮಾರಾಟಗಾರರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು. ಈ ಸಂಬಂಧ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಉಪ ನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡಬೇಕು. ಜೊತೆಗೆ ಎಫ್ಐಡಿ ಮೇಲೆ ಗೊಬ್ಬರ ಕೊಡುವುದನ್ನು ಕೈಬಿಡಬೇಕು’ ಎಂದು ಹೇಳಿದ್ದಾರೆ.</p>.<p>ಈ ವೇಳೆ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ಜಿಲ್ಲಾಧ್ಯಕ್ಷ ಶರಣಗೌಡ ಮಂದರವಾಡ, ಮುಖಂಡರಾದ ಮಲ್ಲಣ್ಣ ನಾಯಕ, ಹಣಮಂತ ಗೋಡಿಕಾರ, ಫಕೀರ್ ಅಹಮದ್, ಬಾಲಾಜಿ ವಡಗೇರಾ, ದೇವು ವಡಗೇರಾ, ಮಹಾದೇವ ಕಿರಿ ಐಯಾಳ, ಮಲ್ಲಣ್ಣ ಮಡಿವಾಳ, ಯಂಕಪ್ಪ ಕೊಕ್ಕೆನೋರು, ಶಿವಪ್ಪ ಎಮ್ಮೇರು, ಮಹಾದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ವಿಳಂಬ ಮಾಡದೆ ಸರಬರಾಜು ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.</p>.<p>‘ಈ ವರ್ಷ ಮುಂಗಾರು ಹಂಗಾಮು ಅವಧಿಗಿಂತ ಮೊದಲು ಆರಂಭವಾಗುವ ಮುನ್ಸೂಚನೆ ಇದೆ. ಎಲ್ಲ ತರಹದ ಬಿತ್ತನೆ ಬೀಜ ಮತ್ತು ಗೊಬ್ಬರ ಕೊರತೆ ಆಗದಂತೆ ತಾಲ್ಲೂಕು ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಬೇಕು. ಅವುಗಳನ್ನು ರೈತರಿಗೆ ಪೂರೈಸಿ ಅನುಕೂಲ ಮಾಡಿಕೊಡಬೇಕು’ ಎಂದು ಕೋರಿದ್ದಾರೆ.</p>.<p>‘ಯಾವುದೇ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿರಬಾರದು. ಅಕ್ರಮವಾಗಿ ಬೇರೆ ರಾಜ್ಯದಿಂದ ಬರುವ ಕಳಪೆ ಬೀಜಗಳ ಬಗ್ಗೆ ನಿಗಾ ಇಡಬೇಕು. ಕೃತಕ ಅಭಾವ ಸೃಷ್ಟಿ ಮಾಡಿ ತೊಂದರೆ ಆಗದಂತೆ ಗೊಬ್ಬರ ಮತ್ತು ಬೀಜದ ಅಂಗಡಿಯ ಮಾಲೀಕರಿಗೆ ಮನದಟ್ಟು ಮಾಡಬೇಕು’ಎಂದಿದ್ದಾರೆ.</p>.<p>‘ಕೃತಕ ಅಭಾವ ಸೃಷ್ಟಿಸುವ ಯಾವುದೇ ಗೊಬ್ಬರ, ಬಿತ್ತನೆ ಬೀಜ, ಕೀಟನಾಶಕ ಮಾರಾಟಗಾರರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು. ಈ ಸಂಬಂಧ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಉಪ ನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡಬೇಕು. ಜೊತೆಗೆ ಎಫ್ಐಡಿ ಮೇಲೆ ಗೊಬ್ಬರ ಕೊಡುವುದನ್ನು ಕೈಬಿಡಬೇಕು’ ಎಂದು ಹೇಳಿದ್ದಾರೆ.</p>.<p>ಈ ವೇಳೆ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ, ಜಿಲ್ಲಾಧ್ಯಕ್ಷ ಶರಣಗೌಡ ಮಂದರವಾಡ, ಮುಖಂಡರಾದ ಮಲ್ಲಣ್ಣ ನಾಯಕ, ಹಣಮಂತ ಗೋಡಿಕಾರ, ಫಕೀರ್ ಅಹಮದ್, ಬಾಲಾಜಿ ವಡಗೇರಾ, ದೇವು ವಡಗೇರಾ, ಮಹಾದೇವ ಕಿರಿ ಐಯಾಳ, ಮಲ್ಲಣ್ಣ ಮಡಿವಾಳ, ಯಂಕಪ್ಪ ಕೊಕ್ಕೆನೋರು, ಶಿವಪ್ಪ ಎಮ್ಮೇರು, ಮಹಾದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>