<p><strong>ಸುರಪುರ:</strong> ಮುಂಗಾರು ಹಂಗಾಮಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಬೇಕು. ಅಕ್ರಮ ಮಾರಾಟಗಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಮಂಗಳವಾರ ಕೃಷಿ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ಧರ್ಮಣ್ಣ ದೊರೆ ಮಾತನಾಡಿ, ‘ಬಿತ್ತನೆ ಬೀಜ, ರಸಗೊಬ್ಬರಗಳ ಸಮರ್ಪಕ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಮಾರಾಟಗಾರರು ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ತಾಕೀತು ಮಾಡಬೇಕು. ಮೂಲ ರಸೀದಿ ನೀಡುವಂತೆ ಸೂಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಪ್ರತಿ ವರ್ಷ ಕಳಪೆ ಬಿತ್ತನೆ ಬೀಜ, ರಸಗೊಬ್ಬರದ ಹಾವಳಿ ಇದ್ದೇ ಇರುತ್ತದೆ. ಅಂತಹ ಮಾರಾಟಗಾರರ ಪರವಾನಗಿ ಕಾಯಂ ಆಗಿ ರದ್ದುಪಡಿಸಬೇಕು. ಅವರ ಮೇಲೆ ಕಠಿಣ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೃಷಿ ಸಲಕರಣೆಗಳು, ನೀರಾವರಿ ಪೈಪ್ಗಳು, ತಾಡಪಾಲ್ ಇತರ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಶೀಘ್ರದಲ್ಲಿ ರಿಯಾಯತಿ ದರಲ್ಲಿ ರೈತರಿಗೆ ಪೂರೈಸಬೇಕು’ ಎಂದು ಹೇಳಿದರು.</p>.<p>‘ಮಾರಾಟಗಾರರು ಲಿಂಕ್ ನೆಪದಲ್ಲಿ ರಸಗೊಬ್ಬರದ ಜೊತೆಗೆ ಇನ್ನೊಂದು ಗೊಬ್ಬರ ತೆಗೆದುಕೊಳ್ಳುವಂತೆ ಒತ್ತಡ ಹಾಕದಂತೆ ನೋಡಿಕೊಳ್ಳಬೇಕು. ರೈತರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಮಲ್ಲನಗೌಡ ಮಾಲಿಪಾಟೀಲ, ವೆಂಕೋಬ ಮಾಲಿಪಾಟೀಲ, ರಾಮಯ್ಯ ಆಲ್ದಾಳ, ರಫೀಕ ಸುರಪುರ, ಮಲ್ಲಣ್ಣ ದೊರಿ, ಸಿದ್ದು ಯಕ್ತಾಪುರ, ಹುಲಗಪ್ಪ ಕವಡಿಮಟ್ಟಿ, ದೇವು ಕವಡಿಮಟ್ಟಿ, ತಿಮ್ಮಣ್ಣ, ಯಲ್ಲಪ್ಪ ಬಾದ್ಯಾಪುರ, ಭೀಮರಾಯ ಬಾದ್ಯಾಪುರ, ವಿಶ್ವನಾಥ ಹೊಸಮನಿ, ಚಂದ್ರಾಮಗೌಡ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-30-1563823618</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ಮುಂಗಾರು ಹಂಗಾಮಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಬೇಕು. ಅಕ್ರಮ ಮಾರಾಟಗಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಮಂಗಳವಾರ ಕೃಷಿ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ಧರ್ಮಣ್ಣ ದೊರೆ ಮಾತನಾಡಿ, ‘ಬಿತ್ತನೆ ಬೀಜ, ರಸಗೊಬ್ಬರಗಳ ಸಮರ್ಪಕ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಮಾರಾಟಗಾರರು ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ತಾಕೀತು ಮಾಡಬೇಕು. ಮೂಲ ರಸೀದಿ ನೀಡುವಂತೆ ಸೂಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಪ್ರತಿ ವರ್ಷ ಕಳಪೆ ಬಿತ್ತನೆ ಬೀಜ, ರಸಗೊಬ್ಬರದ ಹಾವಳಿ ಇದ್ದೇ ಇರುತ್ತದೆ. ಅಂತಹ ಮಾರಾಟಗಾರರ ಪರವಾನಗಿ ಕಾಯಂ ಆಗಿ ರದ್ದುಪಡಿಸಬೇಕು. ಅವರ ಮೇಲೆ ಕಠಿಣ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕೃಷಿ ಸಲಕರಣೆಗಳು, ನೀರಾವರಿ ಪೈಪ್ಗಳು, ತಾಡಪಾಲ್ ಇತರ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಶೀಘ್ರದಲ್ಲಿ ರಿಯಾಯತಿ ದರಲ್ಲಿ ರೈತರಿಗೆ ಪೂರೈಸಬೇಕು’ ಎಂದು ಹೇಳಿದರು.</p>.<p>‘ಮಾರಾಟಗಾರರು ಲಿಂಕ್ ನೆಪದಲ್ಲಿ ರಸಗೊಬ್ಬರದ ಜೊತೆಗೆ ಇನ್ನೊಂದು ಗೊಬ್ಬರ ತೆಗೆದುಕೊಳ್ಳುವಂತೆ ಒತ್ತಡ ಹಾಕದಂತೆ ನೋಡಿಕೊಳ್ಳಬೇಕು. ರೈತರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಮಲ್ಲನಗೌಡ ಮಾಲಿಪಾಟೀಲ, ವೆಂಕೋಬ ಮಾಲಿಪಾಟೀಲ, ರಾಮಯ್ಯ ಆಲ್ದಾಳ, ರಫೀಕ ಸುರಪುರ, ಮಲ್ಲಣ್ಣ ದೊರಿ, ಸಿದ್ದು ಯಕ್ತಾಪುರ, ಹುಲಗಪ್ಪ ಕವಡಿಮಟ್ಟಿ, ದೇವು ಕವಡಿಮಟ್ಟಿ, ತಿಮ್ಮಣ್ಣ, ಯಲ್ಲಪ್ಪ ಬಾದ್ಯಾಪುರ, ಭೀಮರಾಯ ಬಾದ್ಯಾಪುರ, ವಿಶ್ವನಾಥ ಹೊಸಮನಿ, ಚಂದ್ರಾಮಗೌಡ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-30-1563823618</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>