ಅಧಿಕ ಮಳೆ, ಆಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ 1,526 ಹೆಕ್ಟೇರ್ ಪ್ರದೇಶ ಹಾಳಾಗಿತ್ತು. ಇಲ್ಲಿಯವರೆಗೆ ಕೆಲ ರೈತರಿಗೆ ಪರಿಹಾರವೇ ಬಂದಿಲ್ಲ ಎನ್ನುವ ಆರೋಪವೂ ಇದೆ. ಜಿಲ್ಲೆಯಲ್ಲಿ ಅಧಿಕ ಮಳೆ, ಪ್ರವಾಹದಿಂದ 6,500 ಹೆಕ್ಟೇರ್ಗೂ ಹೆಚ್ಚು ಬೆಳೆ, 2,900 ಮನೆಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಹಲವಾರು ರೈತರಿಗೆ ಪರಿಹಾರದ ಹಣ ಬಂದಿಲ್ಲ.