ಯಾದಗಿರಿ: ಸುರಪುರದ ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಸಚಿವ ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ರಾಜಾ ಮದನಗೋಪಾಲ ನಾಯಕ (70) ಅವರು ನಿಧನರಾಗಿದ್ದಾರೆ.
ರಾಜಾ ಮದನಗೋಪಾಲ ನಾಯಕ ಅವರು ಶಿಕ್ಷಣ, ಸಾಹಿತ್ಯ, ಚಿತ್ರಕಲೆ, ನಾಟಕ ಮುಂತಾದ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಸಗರನಾಡಿನ ಸಾಂಸ್ಕೃತಿಕ ರಾಯಭಾರಿ ಎಂದೇ ಬಿಂಬಿತವಾಗಿದ್ದರು.
1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು. ನಂತರ 1985ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು. ನಂತರ 1989ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.ರಾಯಚೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ 501 ಮತಗಳ ಅಂತರದಿಂದ ಸೋಲುನುಭವಿಸಿದರು.
ಸುರಪುರದ ಕನ್ನಡ ಸಾಹಿತ್ಯ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮತ್ತು ರಿಕ್ರೇಯೆಷನ್ ಕಬ್ಲ್ ಅಧ್ಯಕ್ಷರಾಗಿದ್ದರು.