<p><strong>ಯಾದಗಿರಿ</strong>: ತಾಲ್ಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ. </p><p>ಕಿಶನ್ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24), ಸುನಿಬಾಯಿ ರಾಠೋಡ (30), ನೇನು ನಿಂಗಪ್ಪ ಜಾಧವ (18) ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ತಾಂಡಾದ ಜಮೀನಿನಲ್ಲಿ ಈರುಳ್ಳಿ ಸಸಿ ನಾಟಿ ಮಾಡುತ್ತಿರುವ ವೇಳೆ ಮಳೆ ಬಂದಿದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ಜಮೀನಿನಲ್ಲಿರುವ ದುರುಗಮ್ಮ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ.</p><p>ಮೌನೇಶ ಉನ್ನಪ್ಪ, ಗಣೇಶ ಮೌನೇಶ, ದರ್ಶನ ಕಿಶನ್ ಸಿಡಿಲಿನಿಂದ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಯಾದಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. </p><p>ಧಾರಾಕಾರ ಮಳೆ</p><p>ನಗರದಲ್ಲಿ ಸೋಮವಾರ ಮಧ್ಯಾಹ್ನ ಸುಮಾರು ಅರ್ಧ ಗಂಟೆ ಧಾರಾಕಾರ ಮಳೆ ಸುರಿಯಿತು.</p><p>ನಗರದ ರೈಲ್ವೆ ಸ್ಟೇಷನ್ನಿಂದ ಹಳೆ ಬಸ್ ನಿಲ್ದಾಣಕ್ಕೆ ತೆರಳುವ ರಸ್ತೆಯ ಎರಡು ಬದಿಗಳಲ್ಲಿ ಇರುವ ಚರಂಡಿಯ ನೀರು ಮನೆಗಳಲ್ಲಿ ನುಗ್ಗಿತು. ಇದರಿಂದ ನಿವಾಸಿಗಳು ಪರದಾಡಿದರು. ಇನ್ನೂ ಹತ್ತಿಕುಣಿ ಕ್ರಾಸ್ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ತಾಲ್ಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ. </p><p>ಕಿಶನ್ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24), ಸುನಿಬಾಯಿ ರಾಠೋಡ (30), ನೇನು ನಿಂಗಪ್ಪ ಜಾಧವ (18) ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p><p>ತಾಂಡಾದ ಜಮೀನಿನಲ್ಲಿ ಈರುಳ್ಳಿ ಸಸಿ ನಾಟಿ ಮಾಡುತ್ತಿರುವ ವೇಳೆ ಮಳೆ ಬಂದಿದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ಜಮೀನಿನಲ್ಲಿರುವ ದುರುಗಮ್ಮ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ.</p><p>ಮೌನೇಶ ಉನ್ನಪ್ಪ, ಗಣೇಶ ಮೌನೇಶ, ದರ್ಶನ ಕಿಶನ್ ಸಿಡಿಲಿನಿಂದ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಯಾದಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. </p><p>ಧಾರಾಕಾರ ಮಳೆ</p><p>ನಗರದಲ್ಲಿ ಸೋಮವಾರ ಮಧ್ಯಾಹ್ನ ಸುಮಾರು ಅರ್ಧ ಗಂಟೆ ಧಾರಾಕಾರ ಮಳೆ ಸುರಿಯಿತು.</p><p>ನಗರದ ರೈಲ್ವೆ ಸ್ಟೇಷನ್ನಿಂದ ಹಳೆ ಬಸ್ ನಿಲ್ದಾಣಕ್ಕೆ ತೆರಳುವ ರಸ್ತೆಯ ಎರಡು ಬದಿಗಳಲ್ಲಿ ಇರುವ ಚರಂಡಿಯ ನೀರು ಮನೆಗಳಲ್ಲಿ ನುಗ್ಗಿತು. ಇದರಿಂದ ನಿವಾಸಿಗಳು ಪರದಾಡಿದರು. ಇನ್ನೂ ಹತ್ತಿಕುಣಿ ಕ್ರಾಸ್ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>