<p><strong>ಸುರಪುರ</strong>: ‘ಗ್ರಾಮ ಪಂಚಾಯಿತಿಗಳ ಆರ್ಥಿಕ ಸಧೃಢತೆಗೆ ತೆರಿಗೆ ವಸೂಲಾತಿ ಅತ್ಯಂತ ಮುಖ್ಯ. ಜನರ ಮನವೊಲಿಸಿ ಶೇ 100 ರಷ್ಟು ತೆರಿಗೆ ವಸೂಲು ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಓರಡಿಯಾ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.</p>.<p>ತಾಲ್ಲೂಕಿನ ವಾಗಣಗೇರಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಅವರು ಕಡತಗಳನ್ನು ಪರಿಶೀಲಿಸಿ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದರು.</p>.<p>‘ಮನೆ ತೆರಿಗೆ, ನೀರಿನ ತೆರಿಗೆ ಇತರ ತೆರಿಗೆಗಳ ವಸೂಲಾತಿ ಪಟ್ಟಿಯನ್ನು ಪರಿಶೀಲಿಸಿ ಸಾರ್ವಜನಿಕರಲ್ಲಿ ತೆರಿಗೆ ಪಾವತಿ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ನರೇಗಾ ಯೋಜನೆಯಲ್ಲಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಮಸ್ಟರ್ ರೂಲ್, ಕೂಲಿ ಪಾವತಿ ವಿವರ, ತಾಂತ್ರಿಕ ದಾಖಲಾತಿಗಳನ್ನು ಪರಿಶೀಲಿಸಿದರು.</p>.<p>‘ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಮತ್ತು ಪಾರದರ್ಶಕವಾಗಿ ಕೈಗೊಳ್ಳಬೇಕು. ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಮಾಡಬೇಕು’ ಎಂದು ತಿಳಿಸಿದರು.</p>.<p>ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕುಡಿಯುವ ನೀರಿನ ಬಾವಿಗಳನ್ನು ಪರಿಶೀಲಿಸಿ, ನೀರಿನ ಮಟ್ಟ, ಸ್ವಚ್ಛತೆ, ಸರಬರಾಜು ವ್ಯವಸ್ಥೆಯನ್ನು ವೀಕ್ಷಿಸಿದರು. ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.</p>.<p>ಎನ್ಆರ್ಎಲ್ಎಂ ಒಕ್ಕೂಟದ ಪುಸ್ತಕಗಳು, ಸಭಾ ದಾಖಲೆಗಳು, ಹಣಕಾಸು ನಿರ್ವಹಣೆ ಪರಿಶೀಲಿಸಿ, ನಿಯಮಾನುಸಾರ ಮತ್ತು ನವೀಕೃತವಾಗಿ ನಿರ್ವಹಿಸುವಂತೆ ತಿಳಿಸಿದರು. ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವಂತೆ ತಿಳಿಸಿದರು.</p>.<p>ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ, ಹಾಜರಾತಿ, ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಗ್ರಾಮ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ನಿರ್ವಹಣೆ, ಓದುಗರ ಸೌಲಭ್ಯಗಳು, ಕಲಿಕಾ ವಾತಾವರಣದ ಕುರಿತು ಪರಿಶೀಲಿಸಿದರು.</p>.<p>ವಿದ್ಯಾರ್ಥಿಗಳು ಮತ್ತು ಯುವಕರಿಗೆ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.</p>.<p>ನಂತರ ಅರಕೇರಾ ಕೆ. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ತಾಂತ್ರಿಕ ಸಂಯೋಜಕ ಶಿವಯೋಗಿ ಹಿರೇಮಠ, ಪಿಡಿಓ ಪುತ್ರಪ್ಪಗೌಡ, ಉಮರ್, ಐಇಸಿ ಸಂಯೋಜಕ ಮಲ್ಲಿಕಾರ್ಜುನ, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-30-1490626200</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಗ್ರಾಮ ಪಂಚಾಯಿತಿಗಳ ಆರ್ಥಿಕ ಸಧೃಢತೆಗೆ ತೆರಿಗೆ ವಸೂಲಾತಿ ಅತ್ಯಂತ ಮುಖ್ಯ. ಜನರ ಮನವೊಲಿಸಿ ಶೇ 100 ರಷ್ಟು ತೆರಿಗೆ ವಸೂಲು ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಓರಡಿಯಾ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.</p>.<p>ತಾಲ್ಲೂಕಿನ ವಾಗಣಗೇರಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಅವರು ಕಡತಗಳನ್ನು ಪರಿಶೀಲಿಸಿ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದರು.</p>.<p>‘ಮನೆ ತೆರಿಗೆ, ನೀರಿನ ತೆರಿಗೆ ಇತರ ತೆರಿಗೆಗಳ ವಸೂಲಾತಿ ಪಟ್ಟಿಯನ್ನು ಪರಿಶೀಲಿಸಿ ಸಾರ್ವಜನಿಕರಲ್ಲಿ ತೆರಿಗೆ ಪಾವತಿ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>ನರೇಗಾ ಯೋಜನೆಯಲ್ಲಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಮಸ್ಟರ್ ರೂಲ್, ಕೂಲಿ ಪಾವತಿ ವಿವರ, ತಾಂತ್ರಿಕ ದಾಖಲಾತಿಗಳನ್ನು ಪರಿಶೀಲಿಸಿದರು.</p>.<p>‘ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಮತ್ತು ಪಾರದರ್ಶಕವಾಗಿ ಕೈಗೊಳ್ಳಬೇಕು. ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಮಾಡಬೇಕು’ ಎಂದು ತಿಳಿಸಿದರು.</p>.<p>ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕುಡಿಯುವ ನೀರಿನ ಬಾವಿಗಳನ್ನು ಪರಿಶೀಲಿಸಿ, ನೀರಿನ ಮಟ್ಟ, ಸ್ವಚ್ಛತೆ, ಸರಬರಾಜು ವ್ಯವಸ್ಥೆಯನ್ನು ವೀಕ್ಷಿಸಿದರು. ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.</p>.<p>ಎನ್ಆರ್ಎಲ್ಎಂ ಒಕ್ಕೂಟದ ಪುಸ್ತಕಗಳು, ಸಭಾ ದಾಖಲೆಗಳು, ಹಣಕಾಸು ನಿರ್ವಹಣೆ ಪರಿಶೀಲಿಸಿ, ನಿಯಮಾನುಸಾರ ಮತ್ತು ನವೀಕೃತವಾಗಿ ನಿರ್ವಹಿಸುವಂತೆ ತಿಳಿಸಿದರು. ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವಂತೆ ತಿಳಿಸಿದರು.</p>.<p>ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ, ಹಾಜರಾತಿ, ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಗ್ರಾಮ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ನಿರ್ವಹಣೆ, ಓದುಗರ ಸೌಲಭ್ಯಗಳು, ಕಲಿಕಾ ವಾತಾವರಣದ ಕುರಿತು ಪರಿಶೀಲಿಸಿದರು.</p>.<p>ವಿದ್ಯಾರ್ಥಿಗಳು ಮತ್ತು ಯುವಕರಿಗೆ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.</p>.<p>ನಂತರ ಅರಕೇರಾ ಕೆ. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ತಾಂತ್ರಿಕ ಸಂಯೋಜಕ ಶಿವಯೋಗಿ ಹಿರೇಮಠ, ಪಿಡಿಓ ಪುತ್ರಪ್ಪಗೌಡ, ಉಮರ್, ಐಇಸಿ ಸಂಯೋಜಕ ಮಲ್ಲಿಕಾರ್ಜುನ, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-30-1490626200</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>