ಯಾದಗಿರಿ: ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರಿಗೆ ಗೃಹ ದಿಗ್ಬಂಧನದಲ್ಲಿ ಇರುವಂತೆ ಸೂಚನೆ ನೀಡಿದರೂ ಸರ್ಕಾರದ ಆದೇಶ ಪಾಲಿಸದೆ ಹೊರಗಡೆ ತಿರುಗಾಡುವುದು ಕಂಡುಬಂದಿದ್ದು, ಜಿಲ್ಲೆಯ ಕೆಂಭಾವಿ ಲಕ್ಷ್ಮಿ ನಗರ, ಏವೂರು ತಾಂಡಾ (ಬಿ) ಹಾಗೂ ಹೈಯ್ಯಾಳ (ಕೆ) ಗ್ರಾಮಗಳ ವ್ಯಕ್ತಿಗಳ ವಿರುದ್ಧ ಮೂರು ಪ್ರಕರಣ ದಾಖಲಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.