<p><strong>ಯಾದಗಿರಿ:</strong> ಗುರುಮಠಕಲ್ ತಾಲ್ಲೂಕಿನ ಚಲ್ಹೇರಿ ಗ್ರಾಮದ ಗಡಿ ವಿವಾದ ಹಾಗೂ ತೆಲಂಗಾಣ ರಾಜ್ಯದಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೆಆರ್ಎಸ್ ಪಕ್ಷದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬುಧವಾರ ಪ್ರತಿಭಟನೆ ಮಾಡಿದರು.</p>.<p>‘ಗಡಿಭಾಗದ ತೆಲಂಗಾಣ ಸರ್ಕಾರದಿಂದ ಅಕ್ರಮ ಮರಳು ದಂಧೆ ತಡೆಗಟ್ಟಲು ವಿಫಲರಾದ ಮತ್ತು ಕರ್ತವ್ಯ ಲೋಪ ಎಸಗಿರುವ ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು’ ಎಂದರು.</p>.<p>‘ಗಡಿಭಾಗದಲ್ಲಿ ಕಳೆದ ದೀರ್ಘಕಾಲದಿಂದ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ. ಈ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗಡಿ ಭಾಗದಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಬೆಲೆ ಸಿಕ್ಕಿಲ್ಲ. ಜಿಲ್ಲಾ ಕ್ರೀಡಾಂಗಣದ ಕಳಪೆ ಕಾಮಗಾರಿ ಬಗ್ಗೆ ಧರಣಿ ಕುಳಿತರೂ ಕ್ರಮವಾಗಿಲ್ಲ’ ಎಂದು ಹೇಳಿದರು.</p>.<p>‘ಹಳಿಗೇರಾ, ವರ್ಕನಳ್ಳಿ, ಮಸ್ಕನಳ್ಳಿ ಗ್ರಾಮಗಳ ಸೀಮೆಯಲ್ಲಿ ಗಣಿಗಾರಿಕೆ, ಬ್ಲಾಸ್ಟಿಂಗ್ನಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ರೈತರ ಬೆಳೆಗಳು ಸಹ ನಾಶವಾಗುತ್ತಿದ್ದು, ರಸ್ತೆಗಳು ಹಾಳಾಗಿವೆ. ಇದನ್ನು ತಡೆಗಟ್ಟಲು ಸಹ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ದೂರಿದರು.</p>.<p>‘ಯಾದಗಿರಿ ಮತ್ತು ತೆಲಂಗಾಣ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಈ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಂಡು ದಂಡ ವಿಧಿಸಬೇಕು. ಚಲ್ಹೇರಿ ಗ್ರಾಮದ ಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿ, ಚೆಕ್ ಪೋಸ್ಟ್ ಮಾಡಬೇಕು’ ಎಂದು ಕೋರಿದರು.</p>.<p>ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ದೀಪಾ ಮನ್ನೂರ್, ಮುಖಂಡರಾದ ಎಸ್.ನಿಜಲಿಂಗಪ್ಪ ಪೂಜಾರಿ, ಜಗನ್ನಾಥ ಎಸ್.ಚಿಂತನಹಳ್ಳಿ, ಚಾಂದ್ ಪಾಷಾ ಮನಗನಾಳ, ಹಣಮಂತ ದೊರೆ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-30-1358625257</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಗುರುಮಠಕಲ್ ತಾಲ್ಲೂಕಿನ ಚಲ್ಹೇರಿ ಗ್ರಾಮದ ಗಡಿ ವಿವಾದ ಹಾಗೂ ತೆಲಂಗಾಣ ರಾಜ್ಯದಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೆಆರ್ಎಸ್ ಪಕ್ಷದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬುಧವಾರ ಪ್ರತಿಭಟನೆ ಮಾಡಿದರು.</p>.<p>‘ಗಡಿಭಾಗದ ತೆಲಂಗಾಣ ಸರ್ಕಾರದಿಂದ ಅಕ್ರಮ ಮರಳು ದಂಧೆ ತಡೆಗಟ್ಟಲು ವಿಫಲರಾದ ಮತ್ತು ಕರ್ತವ್ಯ ಲೋಪ ಎಸಗಿರುವ ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು’ ಎಂದರು.</p>.<p>‘ಗಡಿಭಾಗದಲ್ಲಿ ಕಳೆದ ದೀರ್ಘಕಾಲದಿಂದ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ. ಈ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗಡಿ ಭಾಗದಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಬೆಲೆ ಸಿಕ್ಕಿಲ್ಲ. ಜಿಲ್ಲಾ ಕ್ರೀಡಾಂಗಣದ ಕಳಪೆ ಕಾಮಗಾರಿ ಬಗ್ಗೆ ಧರಣಿ ಕುಳಿತರೂ ಕ್ರಮವಾಗಿಲ್ಲ’ ಎಂದು ಹೇಳಿದರು.</p>.<p>‘ಹಳಿಗೇರಾ, ವರ್ಕನಳ್ಳಿ, ಮಸ್ಕನಳ್ಳಿ ಗ್ರಾಮಗಳ ಸೀಮೆಯಲ್ಲಿ ಗಣಿಗಾರಿಕೆ, ಬ್ಲಾಸ್ಟಿಂಗ್ನಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ರೈತರ ಬೆಳೆಗಳು ಸಹ ನಾಶವಾಗುತ್ತಿದ್ದು, ರಸ್ತೆಗಳು ಹಾಳಾಗಿವೆ. ಇದನ್ನು ತಡೆಗಟ್ಟಲು ಸಹ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ದೂರಿದರು.</p>.<p>‘ಯಾದಗಿರಿ ಮತ್ತು ತೆಲಂಗಾಣ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಈ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಂಡು ದಂಡ ವಿಧಿಸಬೇಕು. ಚಲ್ಹೇರಿ ಗ್ರಾಮದ ಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿ, ಚೆಕ್ ಪೋಸ್ಟ್ ಮಾಡಬೇಕು’ ಎಂದು ಕೋರಿದರು.</p>.<p>ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ದೀಪಾ ಮನ್ನೂರ್, ಮುಖಂಡರಾದ ಎಸ್.ನಿಜಲಿಂಗಪ್ಪ ಪೂಜಾರಿ, ಜಗನ್ನಾಥ ಎಸ್.ಚಿಂತನಹಳ್ಳಿ, ಚಾಂದ್ ಪಾಷಾ ಮನಗನಾಳ, ಹಣಮಂತ ದೊರೆ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-30-1358625257</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>