<p>ಯಾದಗಿರಿ: ‘ಮಾಹಿತಿ ಹಕ್ಕು ಕಾಯ್ದೆಯಡಿ ದೂರುಗಳನ್ನು ಸಲ್ಲಿಸಿ, ಆ ನಂತರ ಅವುಗಳನ್ನು ವಾಪಸ್ ಪಡೆಯಲಾಗಿದೆ ಎಂಬ ಕಾರಣಕ್ಕೆ ದೂರುದಾರರಿಗೆ ಜಿ. ಪಂ ಸಿಇಒ ವಸೂಲಾತಿ ನೋಟಿಸ್ ಜಾರಿ ಮಾಡಿರುವುದು ಖಂಡನೀಯ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಮಹಿಳಾ ಸಂಯೋಜಕಿ ಗಿರಿಜಾ ಹೇಳಿದರು.</p>.<p>‘ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದ ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಸಾವಿರಾರು ದೂರುಗಳನ್ನು ನೀಡಲಾಗಿದೆ. ಅವುಗಳ ಬಗ್ಗೆ ತನಿಖೆ ಮಾಡದೆ ಬಾಕಿ ಇರಿಸಿಕೊಂಡು ದೂರುದಾರರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು ಸರಿಯಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವಸೂಲಾತಿ ನೋಟಿಸ್ ನೀಡಿದ ಸಂಬಂಧ ರಾಜ್ಯ ಮಟ್ಟದ ನಾಯಕರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಆರಂಭಿಸಲಾಗುವುದು’ ಎಂದರು.</p>.<p>ಸಮಿತಿಯ ತಾಲ್ಲೂಕು ಸಂಯೋಜಕ ಲಕ್ಷ್ಮಣ ಆರ್.ಹಳಿಸಗರ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಹಾಯಕರೊಬ್ಬರಿಗೆ ವೇತನ ಪಾವತಿಯಾಗಿಲ್ಲ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ’ ಎಂದು ಆರೋಪಿಸಿದರು.</p>.<p>‘ಪ್ರಭಾವಿ ನಾಯಕರು, ಅಧಿಕಾರಿಗಳ ಒತ್ತಡ, ಜೀವ ಬೆದರಿಕೆ ಮತ್ತು ಮನವೊಲಿಕೆಯಿಂದಾಗಿ ಕೆಲ ದೂರುಗಳನ್ನು ವಾಪಸ್ ಪಡೆಯಬೇಕಾಯಿತು. ಆದರೆ, ಆ ನಂತರ ಮತ್ತೆ ದೂರು ಸಲ್ಲಿಸಿ ತನಿಖೆಗೆ ಒತ್ತಾಯಿಸಲಾಗಿದೆ’ ಎಂದರು.</p>.<p>ರಾಯಪ್ಪ ಸಾಲಿಮನಿ, ಚಂದ್ರಶೇಖರ ನಾಟೇಕಾರ್, ಚಂದ್ರಶೇಖರ ಹುಲಿಮನಿ, ವಿಶ್ವರಾಧ್ಯಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-30-1447751451</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಮಾಹಿತಿ ಹಕ್ಕು ಕಾಯ್ದೆಯಡಿ ದೂರುಗಳನ್ನು ಸಲ್ಲಿಸಿ, ಆ ನಂತರ ಅವುಗಳನ್ನು ವಾಪಸ್ ಪಡೆಯಲಾಗಿದೆ ಎಂಬ ಕಾರಣಕ್ಕೆ ದೂರುದಾರರಿಗೆ ಜಿ. ಪಂ ಸಿಇಒ ವಸೂಲಾತಿ ನೋಟಿಸ್ ಜಾರಿ ಮಾಡಿರುವುದು ಖಂಡನೀಯ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಮಹಿಳಾ ಸಂಯೋಜಕಿ ಗಿರಿಜಾ ಹೇಳಿದರು.</p>.<p>‘ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದ ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಸಾವಿರಾರು ದೂರುಗಳನ್ನು ನೀಡಲಾಗಿದೆ. ಅವುಗಳ ಬಗ್ಗೆ ತನಿಖೆ ಮಾಡದೆ ಬಾಕಿ ಇರಿಸಿಕೊಂಡು ದೂರುದಾರರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು ಸರಿಯಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವಸೂಲಾತಿ ನೋಟಿಸ್ ನೀಡಿದ ಸಂಬಂಧ ರಾಜ್ಯ ಮಟ್ಟದ ನಾಯಕರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಆರಂಭಿಸಲಾಗುವುದು’ ಎಂದರು.</p>.<p>ಸಮಿತಿಯ ತಾಲ್ಲೂಕು ಸಂಯೋಜಕ ಲಕ್ಷ್ಮಣ ಆರ್.ಹಳಿಸಗರ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಹಾಯಕರೊಬ್ಬರಿಗೆ ವೇತನ ಪಾವತಿಯಾಗಿಲ್ಲ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸಿಲ್ಲ’ ಎಂದು ಆರೋಪಿಸಿದರು.</p>.<p>‘ಪ್ರಭಾವಿ ನಾಯಕರು, ಅಧಿಕಾರಿಗಳ ಒತ್ತಡ, ಜೀವ ಬೆದರಿಕೆ ಮತ್ತು ಮನವೊಲಿಕೆಯಿಂದಾಗಿ ಕೆಲ ದೂರುಗಳನ್ನು ವಾಪಸ್ ಪಡೆಯಬೇಕಾಯಿತು. ಆದರೆ, ಆ ನಂತರ ಮತ್ತೆ ದೂರು ಸಲ್ಲಿಸಿ ತನಿಖೆಗೆ ಒತ್ತಾಯಿಸಲಾಗಿದೆ’ ಎಂದರು.</p>.<p>ರಾಯಪ್ಪ ಸಾಲಿಮನಿ, ಚಂದ್ರಶೇಖರ ನಾಟೇಕಾರ್, ಚಂದ್ರಶೇಖರ ಹುಲಿಮನಿ, ವಿಶ್ವರಾಧ್ಯಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-30-1447751451</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>