<p>ಯಾದಗಿರಿ: ‘ಅಲೆಮಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಕಾಲೊನಿಗಳಿಗೆ ಮೂಲಸೌಕರ್ಯ ಒದಗಿಸಲು ವಿಶೇಷ ಗಮನ ನೀಡಬೇಕು. ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಸಮಗ್ರ ಪ್ರಸ್ತಾವನೆ ರೂಪಿಸಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಲೆಮಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳ ಕುಂದುಕೊರತೆ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಅಲೆಮಾರಿ ಸಮುದಾಯದ ಜನಾಂಗದವರಿಗೆ ಮನೆಗಳ ಹಾಗೂ ನಿವೇಶನದ ಅವಶ್ಯಕತೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳನ್ನು ಆದ್ಯತೆ ಮೇಲೆ ಒದಗಿಸಬೇಕು’ ಎಂದರು.</p>.<p>ಕೆಂಭಾವಿಯಲ್ಲಿ ಕೆರೆ ವ್ಯಾಪ್ತಿಯಲ್ಲಿನ ನಿವೇಶನಗಳನ್ನು ಪರಿಶೀಲಿಸಿ, ಬೇರೆ ಕಡೆ ಭೂಮಿ ಲಭ್ಯತೆ ಬಗ್ಗೆ ವರದಿ ಸಲ್ಲಿಸಬೇಕು. ರಾಮಸಮುದ್ರದಲ್ಲಿ ಅಲೆಮಾರಿ ಜನಾಂಗದ ಕಾಲೊನಿಗೆ ತ್ರಿಫೇಸ್ ವಿದ್ಯುತ್ ಲೈನ್ ಒದಗಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು’ ಎಂದು ಸೂಚಿಸಿದರು.</p>.<p>‘ವಲಸೆ ಮತ್ತು ಇನ್ನಿತರ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು. ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು. ಅವರ ಭವಿಷ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ದೊರಕಿಸಿಕೊಡಬೇಕು’ ಎಂದರು.</p>.<p>ಕೆಂಭಾವಿ, ಹುಣಸಗಿ, ವರ್ಕನಳ್ಳಿ, ಗಿರಿನಗರ, ನಾಯ್ಕಲ್, ದೋರನಹಳ್ಳಿ, ಯಾದಗಿರಿ ಹೊಸಳ್ಳಿ ಕ್ರಾಸ್ ವ್ಯಾಪ್ತಿಯಲ್ಲಿ ರಸ್ತೆಗಳ ಮತ್ತು ಮನೆಗಳ ಸಮಸ್ಯೆ ಬಗ್ಗೆ ಸಮುದಾಯವರು ಜಿಲ್ಲಾಧಿಕಾರಿಯ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.</p>.<p>ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಅವರು ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-30-1877084015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಅಲೆಮಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಕಾಲೊನಿಗಳಿಗೆ ಮೂಲಸೌಕರ್ಯ ಒದಗಿಸಲು ವಿಶೇಷ ಗಮನ ನೀಡಬೇಕು. ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಸಮಗ್ರ ಪ್ರಸ್ತಾವನೆ ರೂಪಿಸಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಲೆಮಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳ ಕುಂದುಕೊರತೆ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಅಲೆಮಾರಿ ಸಮುದಾಯದ ಜನಾಂಗದವರಿಗೆ ಮನೆಗಳ ಹಾಗೂ ನಿವೇಶನದ ಅವಶ್ಯಕತೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳನ್ನು ಆದ್ಯತೆ ಮೇಲೆ ಒದಗಿಸಬೇಕು’ ಎಂದರು.</p>.<p>ಕೆಂಭಾವಿಯಲ್ಲಿ ಕೆರೆ ವ್ಯಾಪ್ತಿಯಲ್ಲಿನ ನಿವೇಶನಗಳನ್ನು ಪರಿಶೀಲಿಸಿ, ಬೇರೆ ಕಡೆ ಭೂಮಿ ಲಭ್ಯತೆ ಬಗ್ಗೆ ವರದಿ ಸಲ್ಲಿಸಬೇಕು. ರಾಮಸಮುದ್ರದಲ್ಲಿ ಅಲೆಮಾರಿ ಜನಾಂಗದ ಕಾಲೊನಿಗೆ ತ್ರಿಫೇಸ್ ವಿದ್ಯುತ್ ಲೈನ್ ಒದಗಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು’ ಎಂದು ಸೂಚಿಸಿದರು.</p>.<p>‘ವಲಸೆ ಮತ್ತು ಇನ್ನಿತರ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು. ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು. ಅವರ ಭವಿಷ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ದೊರಕಿಸಿಕೊಡಬೇಕು’ ಎಂದರು.</p>.<p>ಕೆಂಭಾವಿ, ಹುಣಸಗಿ, ವರ್ಕನಳ್ಳಿ, ಗಿರಿನಗರ, ನಾಯ್ಕಲ್, ದೋರನಹಳ್ಳಿ, ಯಾದಗಿರಿ ಹೊಸಳ್ಳಿ ಕ್ರಾಸ್ ವ್ಯಾಪ್ತಿಯಲ್ಲಿ ರಸ್ತೆಗಳ ಮತ್ತು ಮನೆಗಳ ಸಮಸ್ಯೆ ಬಗ್ಗೆ ಸಮುದಾಯವರು ಜಿಲ್ಲಾಧಿಕಾರಿಯ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.</p>.<p>ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಅವರು ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-30-1877084015</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>