<p>ಯಾದಗಿರಿ: ಡಾ.ಭೀಮಣ್ಣ ಮೇಟಿ ಫೌಂಡೇಶನ್ ಹಾಗೂ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯಲ್ಲಿ ಏಪ್ರಿಲ್ 5ರಂದು ಶಿಕ್ಷಕರ ಹುದ್ದೆಗಳಿಗೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಿರುವುದಾಗಿ ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ತಿಳಿಸಿದರು.</p>.<p>ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಡಿಡಿಯು ಸಿಬಿಎಸ್ಸಿ ಶಾಲೆಯಲ್ಲಿ ಏ.5 ರಂದು ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೆ ಮೇಳ ಜರುಗಲಿದೆ ಎಂದರು.</p>.<p>ಮೇಳದ ಮೂಲಕ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಹಂತದ ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯಶಿಕ್ಷಕರು, ಶಿಕ್ಷಕರು, ವಾರ್ಡನ್, ಗುಮಾಸ್ತ, ಸಿಪಾಯಿ, ಆಯಾ, ಡ್ರೈವರ್ಗಳು, ಸೆಕ್ಯೂರಿಟಿ ಗಾರ್ಡ್ ಮುಂತಾದವುಗಳ ಹುದ್ದೆಗೆ ನೇಮಕಾತಿ ಜರುಗಲಿದೆ.</p>.<p>ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ನೌಕರರು ಹಾಗೂ ನಿರುದ್ಯೋಗಿ ಯುವಕರು ಇದರ ಲಾಭ ಪಡೆಯುವಂತೆ ಕೋರಿದರು. ಉದ್ಯೋಗ ಮೇಳ ಉಚಿತವಾಗಿದ್ದು, ಮೇಳಕ್ಕೆ ಬರುವಾಗ ಅರ್ಹತೆಯ ದಾಕಲೆಗಳು ಮತ್ತು ವಿವರಗಳನ್ನು ತರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೋಧನಾ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.</p>.<p>ಹೆಚ್ಚಿನ ಮಾಹಿತಿಗೆ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದರು. ಗೋಪಾಲ ಕೃಷ್ಣ, ರಾಜೇಶ, ವೆಂಕಟೇಶ ಪೂಜಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-30-1927197032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಡಾ.ಭೀಮಣ್ಣ ಮೇಟಿ ಫೌಂಡೇಶನ್ ಹಾಗೂ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯಲ್ಲಿ ಏಪ್ರಿಲ್ 5ರಂದು ಶಿಕ್ಷಕರ ಹುದ್ದೆಗಳಿಗೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಿರುವುದಾಗಿ ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ತಿಳಿಸಿದರು.</p>.<p>ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಡಿಡಿಯು ಸಿಬಿಎಸ್ಸಿ ಶಾಲೆಯಲ್ಲಿ ಏ.5 ರಂದು ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೆ ಮೇಳ ಜರುಗಲಿದೆ ಎಂದರು.</p>.<p>ಮೇಳದ ಮೂಲಕ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಹಂತದ ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯಶಿಕ್ಷಕರು, ಶಿಕ್ಷಕರು, ವಾರ್ಡನ್, ಗುಮಾಸ್ತ, ಸಿಪಾಯಿ, ಆಯಾ, ಡ್ರೈವರ್ಗಳು, ಸೆಕ್ಯೂರಿಟಿ ಗಾರ್ಡ್ ಮುಂತಾದವುಗಳ ಹುದ್ದೆಗೆ ನೇಮಕಾತಿ ಜರುಗಲಿದೆ.</p>.<p>ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ನೌಕರರು ಹಾಗೂ ನಿರುದ್ಯೋಗಿ ಯುವಕರು ಇದರ ಲಾಭ ಪಡೆಯುವಂತೆ ಕೋರಿದರು. ಉದ್ಯೋಗ ಮೇಳ ಉಚಿತವಾಗಿದ್ದು, ಮೇಳಕ್ಕೆ ಬರುವಾಗ ಅರ್ಹತೆಯ ದಾಕಲೆಗಳು ಮತ್ತು ವಿವರಗಳನ್ನು ತರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೋಧನಾ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.</p>.<p>ಹೆಚ್ಚಿನ ಮಾಹಿತಿಗೆ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದರು. ಗೋಪಾಲ ಕೃಷ್ಣ, ರಾಜೇಶ, ವೆಂಕಟೇಶ ಪೂಜಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-30-1927197032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>