<p>ಕೆಂಭಾವಿ: ‘ಜಗದ ಜನರು ಜಗದ ಕರ್ತೃ ಜಗದೀಶನ ಜಪಿಸುವ ಮಹದಾಸೆ ಇಟ್ಟುಕೊಂಡು ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಮುನ್ನಡೆಸುತ್ತಿರುವ ಚನ್ನಬಸವ ಶಿವಾಚಾರ್ಯರ ಕಾರ್ಯ ಸ್ತುತ್ಯಾರ್ಹ’ ಎಂದು ಯಾದಗಿರಿಯ ಮಲ್ಲಿಕಾರ್ಜುನ ಶಾಸ್ತ್ರಿ ಹೇಳಿದರು.</p>.<p>ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರುಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಶುಕ್ರವಾರ ಸಂಜೆ ಜರುಗಿದ ಮಾಸಿಕ ಹುಣ್ಣಿಮೆಯ ಶಿವಾನುಭವ, ಸಂಗೀತ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದರು.</p>.<p>‘ಬಡವರ ಸೇವೆಯಲ್ಲಿ, ರೋಗಿಯ ಆರೈಕೆಯಲ್ಲಿ, ಮಾತಾಪಿತರ ಸನ್ನಿಧಿಯಲ್ಲಿ ಹೀಗೆ ಜಗದಗಲ, ಮುಗಿಲಗಲ, ಪ್ರತಿಯೊಂದು ವಸ್ತುವಿನಲ್ಲಿ ದೇವರಿದ್ದಾನೆ. ಭಗವಂತನ ಸಾಕ್ಷಾತ್ಕಾರಕ್ಕೆ ಬಡತನ ಅಡ್ಡಿಯಾಗದು’ ಎಂದು ಹೇಳಿದರು.</p>.<p>‘ಹಿರೇಮಠ ಸಂಸ್ಥಾನದಲ್ಲಿ ಜರುಗುವ ಮಾಸಿಕ ಹುಣ್ಣಿಮೆಯ ಶಿವಾನುಭವ ಮತ್ತು ಸಂಗೀತ ಗೋಷ್ಠಿ ಸಂಸಾರದಿಂದ ಸದ್ಗತಿ ಹೊಂದಲು ಪ್ರೇರಣೆ ನೀಡುತ್ತದೆ. ಸದ್ಭಕ್ತರು ಹುಣ್ಣಿಮೆಯ ಸತ್ಸಂಗದ ಸದುಪಯೋಗ ಪಡಿಸಿಕೊಂಡು ಸನ್ಮಾರ್ಗದಲ್ಲಿ ನಡೆದು ಸದ್ಗುರುವಿನ ಕೃಪೆಗೆ ಪಾತ್ರರಾಗಿ’ ಎಂದು ನುಡಿದರು.</p>.<p>ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಮಾತನಾಡಿ, ‘ದಂಡ ವಿಧಿಸುವ ಅಧಿಕಾರ ಇದ್ದರೂ ದಂಡ ವಿಧಿಸದ ದಯಾಳುವೇ ಗುರು. ದೇವ ಸ್ವರೂಪರು, ಲಿಂಗಾಂಗ ಸಾಮರಸ್ಯದ ಸಾಧು ಸಂತರು, ದಾಸ ಶ್ರೇಷ್ಠರು, ಮಹಾತ್ಮರು, ಶಿವಶರಣರು ಇವರೆಲ್ಲರು ತೋರಿದ ಮಾರ್ಗದಲ್ಲಿ ಸಾಗಿದರೆ ಬದುಕು ಸಾರ್ಥಕ’ ಎಂದು ಹೇಳಿದರು.</p>.<p>ಸೋಮನಾಥ ಯಾಳಗಿ, ಯಮನೇಶ ಯಾಳಗಿ ಹಾಗೂ ಶಶಿಧರ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಪ್ರಮುಖರಾದ ನಿಂಗನಗೌಡ ದೇಸಾಯಿ, ನಿಜಗುಣ ವಿಶ್ವಕರ್ಮ ಸೇರಿದಂತೆ ಮಹಿಳೆಯರು, ಮಕ್ಕಳು, ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಉಪಸ್ಥಿತರಿದ್ದರು. ಯಂಕನಗೌಡ ಪಾಟೀಲ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-30-604883546</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಭಾವಿ: ‘ಜಗದ ಜನರು ಜಗದ ಕರ್ತೃ ಜಗದೀಶನ ಜಪಿಸುವ ಮಹದಾಸೆ ಇಟ್ಟುಕೊಂಡು ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಮುನ್ನಡೆಸುತ್ತಿರುವ ಚನ್ನಬಸವ ಶಿವಾಚಾರ್ಯರ ಕಾರ್ಯ ಸ್ತುತ್ಯಾರ್ಹ’ ಎಂದು ಯಾದಗಿರಿಯ ಮಲ್ಲಿಕಾರ್ಜುನ ಶಾಸ್ತ್ರಿ ಹೇಳಿದರು.</p>.<p>ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರುಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಶುಕ್ರವಾರ ಸಂಜೆ ಜರುಗಿದ ಮಾಸಿಕ ಹುಣ್ಣಿಮೆಯ ಶಿವಾನುಭವ, ಸಂಗೀತ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದರು.</p>.<p>‘ಬಡವರ ಸೇವೆಯಲ್ಲಿ, ರೋಗಿಯ ಆರೈಕೆಯಲ್ಲಿ, ಮಾತಾಪಿತರ ಸನ್ನಿಧಿಯಲ್ಲಿ ಹೀಗೆ ಜಗದಗಲ, ಮುಗಿಲಗಲ, ಪ್ರತಿಯೊಂದು ವಸ್ತುವಿನಲ್ಲಿ ದೇವರಿದ್ದಾನೆ. ಭಗವಂತನ ಸಾಕ್ಷಾತ್ಕಾರಕ್ಕೆ ಬಡತನ ಅಡ್ಡಿಯಾಗದು’ ಎಂದು ಹೇಳಿದರು.</p>.<p>‘ಹಿರೇಮಠ ಸಂಸ್ಥಾನದಲ್ಲಿ ಜರುಗುವ ಮಾಸಿಕ ಹುಣ್ಣಿಮೆಯ ಶಿವಾನುಭವ ಮತ್ತು ಸಂಗೀತ ಗೋಷ್ಠಿ ಸಂಸಾರದಿಂದ ಸದ್ಗತಿ ಹೊಂದಲು ಪ್ರೇರಣೆ ನೀಡುತ್ತದೆ. ಸದ್ಭಕ್ತರು ಹುಣ್ಣಿಮೆಯ ಸತ್ಸಂಗದ ಸದುಪಯೋಗ ಪಡಿಸಿಕೊಂಡು ಸನ್ಮಾರ್ಗದಲ್ಲಿ ನಡೆದು ಸದ್ಗುರುವಿನ ಕೃಪೆಗೆ ಪಾತ್ರರಾಗಿ’ ಎಂದು ನುಡಿದರು.</p>.<p>ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಮಾತನಾಡಿ, ‘ದಂಡ ವಿಧಿಸುವ ಅಧಿಕಾರ ಇದ್ದರೂ ದಂಡ ವಿಧಿಸದ ದಯಾಳುವೇ ಗುರು. ದೇವ ಸ್ವರೂಪರು, ಲಿಂಗಾಂಗ ಸಾಮರಸ್ಯದ ಸಾಧು ಸಂತರು, ದಾಸ ಶ್ರೇಷ್ಠರು, ಮಹಾತ್ಮರು, ಶಿವಶರಣರು ಇವರೆಲ್ಲರು ತೋರಿದ ಮಾರ್ಗದಲ್ಲಿ ಸಾಗಿದರೆ ಬದುಕು ಸಾರ್ಥಕ’ ಎಂದು ಹೇಳಿದರು.</p>.<p>ಸೋಮನಾಥ ಯಾಳಗಿ, ಯಮನೇಶ ಯಾಳಗಿ ಹಾಗೂ ಶಶಿಧರ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಪ್ರಮುಖರಾದ ನಿಂಗನಗೌಡ ದೇಸಾಯಿ, ನಿಜಗುಣ ವಿಶ್ವಕರ್ಮ ಸೇರಿದಂತೆ ಮಹಿಳೆಯರು, ಮಕ್ಕಳು, ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಉಪಸ್ಥಿತರಿದ್ದರು. ಯಂಕನಗೌಡ ಪಾಟೀಲ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-30-604883546</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>