<p><strong>ಯಾದಗಿರಿ</strong>: ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್–19 ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 941ಕ್ಕೆ ಏರಿಕೆಯಾಗಿದೆ.</p>.<p class="Subhead">ಗುರುಮಠಕಲ್ ಹರಿಜನವಾಡದ 50 ವರ್ಷದ ಪುರುಷ (ಪಿ-14,671), ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದ 40 ವರ್ಷದ ಪುರುಷ (ಪಿ-14,672) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಪಿ-14,671ರ ವ್ಯಕ್ತಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮತ್ತೊಬ್ಬರು ತೆಲಂಗಾಣ ರಾಜ್ಯದ ಹೈದರಾಬಾದ್ನಿಂದ ಜಿಲ್ಲೆಗೆ ಬಂದಿದ್ದಾರೆ.</p>.<p class="Subhead"><strong>14 ಜನ ಗುಣಮುಖ:</strong>ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 941 ವ್ಯಕ್ತಿಗಳ ಪೈಕಿ ಮಂಗಳವಾರ ಮತ್ತೆ 14 ಜನ ಗುಣಮುಖರಾಗಿದ್ದಾರೆ. ಜೂನ್ 30ರವರೆಗೆ 837 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 103 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾಹಿತಿ ನೀಡಿದ್ದಾರೆ.</p>.<p>ಜಿಲ್ಲೆಯಲ್ಲಿ 80 ಕಂಟೇನ್ಮೆಂಟ್ ಝೋನ್ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೇನ್ಮೆಂಟ್ ಝೋನ್ಗಳನ್ನು ತೆರವುಗೊಳಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 32 ಜನ, ಶಹಾಪುರ, ಸುರಪುರ, ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್ಲ್ಲಿ 73 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್–19 ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 941ಕ್ಕೆ ಏರಿಕೆಯಾಗಿದೆ.</p>.<p class="Subhead">ಗುರುಮಠಕಲ್ ಹರಿಜನವಾಡದ 50 ವರ್ಷದ ಪುರುಷ (ಪಿ-14,671), ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದ 40 ವರ್ಷದ ಪುರುಷ (ಪಿ-14,672) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಪಿ-14,671ರ ವ್ಯಕ್ತಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮತ್ತೊಬ್ಬರು ತೆಲಂಗಾಣ ರಾಜ್ಯದ ಹೈದರಾಬಾದ್ನಿಂದ ಜಿಲ್ಲೆಗೆ ಬಂದಿದ್ದಾರೆ.</p>.<p class="Subhead"><strong>14 ಜನ ಗುಣಮುಖ:</strong>ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 941 ವ್ಯಕ್ತಿಗಳ ಪೈಕಿ ಮಂಗಳವಾರ ಮತ್ತೆ 14 ಜನ ಗುಣಮುಖರಾಗಿದ್ದಾರೆ. ಜೂನ್ 30ರವರೆಗೆ 837 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 103 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾಹಿತಿ ನೀಡಿದ್ದಾರೆ.</p>.<p>ಜಿಲ್ಲೆಯಲ್ಲಿ 80 ಕಂಟೇನ್ಮೆಂಟ್ ಝೋನ್ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೇನ್ಮೆಂಟ್ ಝೋನ್ಗಳನ್ನು ತೆರವುಗೊಳಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 32 ಜನ, ಶಹಾಪುರ, ಸುರಪುರ, ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್ಲ್ಲಿ 73 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>