<p><strong>ಯಾದಗಿರಿ</strong>: ‘ಗುರುಮಠಕಲ್ ತಾಲ್ಲೂಕಿನ ಚಲ್ಹೇರಿ ಗ್ರಾಮದ ಗಡಿ ವಿವಾದ ಹಾಗೂ ತೆಲಂಗಾಣ ರಾಜ್ಯದಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವಲ್ಲಿನ ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮೇ 13ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಕೆಆರ್ಎಸ್ ಪಕ್ಷದ ಜಿಲ್ಲಾ ಉಸ್ತುವಾರಿ ದೀಪಾ ಮನ್ನೂರ್ ಹೇಳಿದರು.</p>.<p>‘ಚಲ್ಹೇರಿ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಹೊಂದಿಕೊಂಡಿರುವ ದೊಡ್ಡ ಹಳ್ಳದ ಮರಳನ್ನು ತೆಲಂಗಾಣ ರಾಜ್ಯದವರು ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ. ಇದನ್ನು ತಡೆಯುವಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಚಲ್ಹೇರಿ ವ್ಯಾಪ್ತಿಯಲ್ಲಿ ಕರ್ನಾಟಕ-ತೆಲಂಗಾಣ ರಾಜ್ಯಗಳ ಗಡಿ ರೇಖೆ ಗುರುತಿಸಿಲ್ಲ. ತೆಲಂಗಾಣದ ಅಧಿಕಾರಿಗಳು ಗಡಿ ಗುರುತಿಸುವ ಕಾರ್ಯಕ್ಕೆ ಬರುವಂತೆ ಹೇಳಿದರೂ ಯಾದಗಿರಿ ಜಿಲ್ಲೆಯ ಅಧಿಕಾರಿಗಳು ಮುಂದೆ ಬರುತ್ತಿಲ್ಲ ಎಂದು ಅಲ್ಲಿನ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಗಡಿ ಸಮಸ್ಯೆ ಹಾಗೆಯೇ ಉಳಿದುಕೊಂಡಿದ್ದು, ಅಕ್ರಮ ಮರಳು ಸಾಗಾಣಿಕೆಗೂ ಕಾರಣವಾಗಿದೆ. ಈ ಬಗ್ಗೆ ಹೋರಾಟ ಮಾಡಿ ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ನಿಜಲಿಂಗಪ್ಪ ಪೂಜಾರಿ ಮಾತನಾಡಿ, ‘ಅಕ್ರಮ ಮರಳು ಸಾಗಾಣಿಕೆ ಸಂಬಂಧ ಕರ್ನಾಟಕ ಹಾಗೂ ತೆಲಂಗಾಣದ ಅಕ್ರಮ ಮರಳು ಸಾಗಾಣಿಕೆದಾರರ ನಡುವೆ ಹಲವು ಬಾರಿ ಗಲಾಟೆಗಳಾಗಿವೆ. ಆದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ. ಅಪಾರ ಖನಿಜ ಸಂಪತ್ತು ಲೂಟಿಯಾಗುತ್ತಿದೆ’ ಎಂದು ದೂರಿದರು.</p>.<p>‘ಪ್ರತಿಭಟನೆಯಲ್ಲಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೇರಾ ಸಹ ಪಾಲ್ಗೊಳ್ಳುವರು. ಅಕ್ರಮ ತಡೆಯಲು ಆಗದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬೇಕು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಪೂಜಾರಿ ಚಂಡ್ರಿಕಿ, ಕಾರ್ಯದರ್ಶಿ ಶಾಂತಕುಮಾರ, ಯುವ ಘಟಕದ ಅಧ್ಯಕ್ಷ ಚಾಂದ್ ಪಾಷಾ ಮನಗನಾಳ, ಖಾಸಿಂ ಅಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-30-311121245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಗುರುಮಠಕಲ್ ತಾಲ್ಲೂಕಿನ ಚಲ್ಹೇರಿ ಗ್ರಾಮದ ಗಡಿ ವಿವಾದ ಹಾಗೂ ತೆಲಂಗಾಣ ರಾಜ್ಯದಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವಲ್ಲಿನ ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮೇ 13ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಕೆಆರ್ಎಸ್ ಪಕ್ಷದ ಜಿಲ್ಲಾ ಉಸ್ತುವಾರಿ ದೀಪಾ ಮನ್ನೂರ್ ಹೇಳಿದರು.</p>.<p>‘ಚಲ್ಹೇರಿ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಹೊಂದಿಕೊಂಡಿರುವ ದೊಡ್ಡ ಹಳ್ಳದ ಮರಳನ್ನು ತೆಲಂಗಾಣ ರಾಜ್ಯದವರು ಅಕ್ರಮ ಸಾಗಾಣಿಕೆ ಮಾಡುತ್ತಿದ್ದಾರೆ. ಇದನ್ನು ತಡೆಯುವಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಚಲ್ಹೇರಿ ವ್ಯಾಪ್ತಿಯಲ್ಲಿ ಕರ್ನಾಟಕ-ತೆಲಂಗಾಣ ರಾಜ್ಯಗಳ ಗಡಿ ರೇಖೆ ಗುರುತಿಸಿಲ್ಲ. ತೆಲಂಗಾಣದ ಅಧಿಕಾರಿಗಳು ಗಡಿ ಗುರುತಿಸುವ ಕಾರ್ಯಕ್ಕೆ ಬರುವಂತೆ ಹೇಳಿದರೂ ಯಾದಗಿರಿ ಜಿಲ್ಲೆಯ ಅಧಿಕಾರಿಗಳು ಮುಂದೆ ಬರುತ್ತಿಲ್ಲ ಎಂದು ಅಲ್ಲಿನ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಗಡಿ ಸಮಸ್ಯೆ ಹಾಗೆಯೇ ಉಳಿದುಕೊಂಡಿದ್ದು, ಅಕ್ರಮ ಮರಳು ಸಾಗಾಣಿಕೆಗೂ ಕಾರಣವಾಗಿದೆ. ಈ ಬಗ್ಗೆ ಹೋರಾಟ ಮಾಡಿ ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ನಿಜಲಿಂಗಪ್ಪ ಪೂಜಾರಿ ಮಾತನಾಡಿ, ‘ಅಕ್ರಮ ಮರಳು ಸಾಗಾಣಿಕೆ ಸಂಬಂಧ ಕರ್ನಾಟಕ ಹಾಗೂ ತೆಲಂಗಾಣದ ಅಕ್ರಮ ಮರಳು ಸಾಗಾಣಿಕೆದಾರರ ನಡುವೆ ಹಲವು ಬಾರಿ ಗಲಾಟೆಗಳಾಗಿವೆ. ಆದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ. ಅಪಾರ ಖನಿಜ ಸಂಪತ್ತು ಲೂಟಿಯಾಗುತ್ತಿದೆ’ ಎಂದು ದೂರಿದರು.</p>.<p>‘ಪ್ರತಿಭಟನೆಯಲ್ಲಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೇರಾ ಸಹ ಪಾಲ್ಗೊಳ್ಳುವರು. ಅಕ್ರಮ ತಡೆಯಲು ಆಗದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬೇಕು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಪೂಜಾರಿ ಚಂಡ್ರಿಕಿ, ಕಾರ್ಯದರ್ಶಿ ಶಾಂತಕುಮಾರ, ಯುವ ಘಟಕದ ಅಧ್ಯಕ್ಷ ಚಾಂದ್ ಪಾಷಾ ಮನಗನಾಳ, ಖಾಸಿಂ ಅಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-30-311121245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>