<p><strong>ಯಾದಗಿರಿ:</strong> ‘ಡಾ.ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಹಲವು ನಾಯಕರು ವಕೀಲರಾಗಿ ದೇಶ ಕಟ್ಟುವ ಕೆಲಸ ಮಾಡಿದ್ದರು. ಹೀಗಾಗಿ, ವಕೀಲರ ಸೇವೆಯು ಸರ್ವಶ್ರೇಷ್ಠವಾದದ್ದು’ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.</p>.<p>ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಲೋಕಾಯುಕ್ತ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಮತ್ತು ವಿಶೇಷಚೇತನರ ಇಲಾಖೆ. ಜಿಲ್ಲಾ ನ್ಯಾಯವಾದಿಗಳ ಸಂಘ ಯಾದಗಿರಿ ಹಾಗೂ ತಾಲ್ಲೂಕು ನ್ಯಾಯವಾದಿಗಳ ಸಂಘಗಳ ವತಿಯಿಂದ ಆಯೋಜಿಸಿದ್ದ ನ್ಯಾಯಾಂಗ ಅಧಿಕಾರಿಗಳು ಹಾಗೂ ವಕೀಲರ ಜೊತೆ ಸಭೆ ಮತ್ತು ಸಂವಾದ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಕೀಲ ವೃತ್ತಿಯ ಈ ಹಿಂದಿನದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ವಕೀಲರ ಮೇಲಿದೆ. ಭಾರತದ ಸಂವಿಧಾನದಲ್ಲಿ ಹೆಣ್ಣಾಗಲಿ, ಗಂಡಾಗಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. 6ರಿಂದ 14 ವರ್ಷದ ಮಕ್ಕಳಿಗೆ ಕೆಲಸ ಕೊಡುವ ಹಾಗಿಲ್ಲ. ಅವರಿಗೆ ದುಡಿಮೆಗೆ ಕಳಿಸುವಂತಿಲ್ಲ. ಮಗುವಿನ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂಬುದಾಗಿದೆ. ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ ಸೌಲಭ್ಯಗಳನ್ನು ನೀಡಬೇಕಿದೆ’ ಎಂದರು.</p>.<p>‘ಲೋಕಾಯುಕ್ತ ಕಾಯ್ದೆಯ ಬಗ್ಗೆ ವಕೀಲರಿ ತಿಳಿಯಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಕೀಲರು ಲೋಕಾಯುಕ್ತ ಕಾಯ್ದೆಯ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ಜನರಿಗೆ ಅವುಗಳ ಬಗ್ಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.</p>.<p>‘ಶೇ 75 ರಿಂದ 80ಪ್ರತಿಶತ ಭ್ರಷ್ಟ ಸಮಾಜದಲ್ಲಿ ಬದುಕುತ್ತಿದ್ದೆವೆ. ಲೋಕಾಯುಕ್ತ ವ್ಯಾಪ್ತಿಯಲ್ಲಿ ಯಾವುದು ಮಾಡಬೇಕು ಮತ್ತು ಯಾವುದು ಮಾಡಬಾರದು ಎನ್ನುವ ನಮ್ಮದೇಯಾದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಆಕಾಶದಿಂದ ಬಿದ್ದ ನೀರು ಸಮುದ್ರ ಸೇರಬೇಕು ಹಾಗೂ ಹುಟ್ಟಿದ ಮನುಷ್ಯ ಒಂದು ದಿನ ಸಾಯಲೆಬೇಕು ಇರುವಷ್ಟು ದಿನ ನಾವು ಪ್ರಾಮಾಣಿಕವಾಗಿ ಒಂದಿಷ್ಟು ಒಳ್ಳೆಯ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ‘ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಜಿಲ್ಲೆಯಲ್ಲಿ ಎರಡು ದಿನಗಳ ಮಿಂಚಿನ ಸಂಚಾರ ಮಾಡಿ ಅಧಿಕಾರಿಗಳು ಮತ್ತು ಜನರಲ್ಲಿ ಲೋಕಾಯುಕ್ತ ಮಹತ್ವ ತಿಳಿಸುವ ಕೆಲಸ ಮಾಡಿದ್ದಾರೆ. ಈ ನ್ಯಾಯಾಲಯದ ಹೊಸ ಕಟ್ಟಡದ ಜಾಗದಲ್ಲಿ ಫಣೀಂದ್ರ ಅವರ ಕೊಡುಗೆಯೂ ಇದೆ’ ಎಂದು ಸ್ಮರಿಸಿದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಎಸ್. ಪಾಟೀಲ ಮಾತನಾಡಿದರು. ಉಪಲೋಕಾಯುಕ್ತರು ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ, ವಕೀಲರ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ, ಜಿಲ್ಲಾ ಹಿರಿಯ ನಾಗರೀಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಶಾಹಪುರ ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಸಂತೋಷ, ಸುರಪುರ ತಾ. ವಕೀಲರ ಸಂಘದ ಅಧ್ಯಕ್ಷ ಹನೂರ್ ಬಸವರಾಜ ಸೇರಿದಂತೆ ವಕೀಲರು, ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-30-846085358</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಡಾ.ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಹಲವು ನಾಯಕರು ವಕೀಲರಾಗಿ ದೇಶ ಕಟ್ಟುವ ಕೆಲಸ ಮಾಡಿದ್ದರು. ಹೀಗಾಗಿ, ವಕೀಲರ ಸೇವೆಯು ಸರ್ವಶ್ರೇಷ್ಠವಾದದ್ದು’ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.</p>.<p>ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಲೋಕಾಯುಕ್ತ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಮತ್ತು ವಿಶೇಷಚೇತನರ ಇಲಾಖೆ. ಜಿಲ್ಲಾ ನ್ಯಾಯವಾದಿಗಳ ಸಂಘ ಯಾದಗಿರಿ ಹಾಗೂ ತಾಲ್ಲೂಕು ನ್ಯಾಯವಾದಿಗಳ ಸಂಘಗಳ ವತಿಯಿಂದ ಆಯೋಜಿಸಿದ್ದ ನ್ಯಾಯಾಂಗ ಅಧಿಕಾರಿಗಳು ಹಾಗೂ ವಕೀಲರ ಜೊತೆ ಸಭೆ ಮತ್ತು ಸಂವಾದ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಕೀಲ ವೃತ್ತಿಯ ಈ ಹಿಂದಿನದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ವಕೀಲರ ಮೇಲಿದೆ. ಭಾರತದ ಸಂವಿಧಾನದಲ್ಲಿ ಹೆಣ್ಣಾಗಲಿ, ಗಂಡಾಗಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. 6ರಿಂದ 14 ವರ್ಷದ ಮಕ್ಕಳಿಗೆ ಕೆಲಸ ಕೊಡುವ ಹಾಗಿಲ್ಲ. ಅವರಿಗೆ ದುಡಿಮೆಗೆ ಕಳಿಸುವಂತಿಲ್ಲ. ಮಗುವಿನ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂಬುದಾಗಿದೆ. ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ ಸೌಲಭ್ಯಗಳನ್ನು ನೀಡಬೇಕಿದೆ’ ಎಂದರು.</p>.<p>‘ಲೋಕಾಯುಕ್ತ ಕಾಯ್ದೆಯ ಬಗ್ಗೆ ವಕೀಲರಿ ತಿಳಿಯಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಕೀಲರು ಲೋಕಾಯುಕ್ತ ಕಾಯ್ದೆಯ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ಜನರಿಗೆ ಅವುಗಳ ಬಗ್ಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.</p>.<p>‘ಶೇ 75 ರಿಂದ 80ಪ್ರತಿಶತ ಭ್ರಷ್ಟ ಸಮಾಜದಲ್ಲಿ ಬದುಕುತ್ತಿದ್ದೆವೆ. ಲೋಕಾಯುಕ್ತ ವ್ಯಾಪ್ತಿಯಲ್ಲಿ ಯಾವುದು ಮಾಡಬೇಕು ಮತ್ತು ಯಾವುದು ಮಾಡಬಾರದು ಎನ್ನುವ ನಮ್ಮದೇಯಾದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಆಕಾಶದಿಂದ ಬಿದ್ದ ನೀರು ಸಮುದ್ರ ಸೇರಬೇಕು ಹಾಗೂ ಹುಟ್ಟಿದ ಮನುಷ್ಯ ಒಂದು ದಿನ ಸಾಯಲೆಬೇಕು ಇರುವಷ್ಟು ದಿನ ನಾವು ಪ್ರಾಮಾಣಿಕವಾಗಿ ಒಂದಿಷ್ಟು ಒಳ್ಳೆಯ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ‘ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಜಿಲ್ಲೆಯಲ್ಲಿ ಎರಡು ದಿನಗಳ ಮಿಂಚಿನ ಸಂಚಾರ ಮಾಡಿ ಅಧಿಕಾರಿಗಳು ಮತ್ತು ಜನರಲ್ಲಿ ಲೋಕಾಯುಕ್ತ ಮಹತ್ವ ತಿಳಿಸುವ ಕೆಲಸ ಮಾಡಿದ್ದಾರೆ. ಈ ನ್ಯಾಯಾಲಯದ ಹೊಸ ಕಟ್ಟಡದ ಜಾಗದಲ್ಲಿ ಫಣೀಂದ್ರ ಅವರ ಕೊಡುಗೆಯೂ ಇದೆ’ ಎಂದು ಸ್ಮರಿಸಿದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಎಸ್. ಪಾಟೀಲ ಮಾತನಾಡಿದರು. ಉಪಲೋಕಾಯುಕ್ತರು ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ, ವಕೀಲರ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ, ಜಿಲ್ಲಾ ಹಿರಿಯ ನಾಗರೀಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಶಾಹಪುರ ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಸಂತೋಷ, ಸುರಪುರ ತಾ. ವಕೀಲರ ಸಂಘದ ಅಧ್ಯಕ್ಷ ಹನೂರ್ ಬಸವರಾಜ ಸೇರಿದಂತೆ ವಕೀಲರು, ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-30-846085358</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>