<p>ಯಾದಗಿರಿ: ಪರವಾನಗಿ ಪಡೆದ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ, ಅವರ ಸೇವೆಯನ್ನು ಕಾಯಂ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಪರವಾನಗಿ ಭೂಮಾಪಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಭೂಮಾಪನ ಇಲಾಖೆಯ ಕೆಲಸಗಳು ಸ್ಥಗಿತವಾಗಿವೆ. ಜಮೀನಿನ ಅಳತೆ, ಫಾರಂ 10, ಪಹಣಿ ಅನ್ವಯ ಭೂಮಿ ಹದ್ದುಬಸ್ತು ಸೇರಿ ಇತರೆ ಅರ್ಜಿಗಳ ವಿಲೇವಾರಿಗೆ ಅಡ್ಡಿಯಾಗುತ್ತಿದೆ ಎಂದರು.</p>.<p>ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದು, ಅವರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸರ್ಕಾರ ತಕ್ಷಣವೇ ಅವರ ಬೇಡಿಕೆ ಈಡೇರಿಸಿ, ಜಮೀನಿನ ಅಳತೆಯ ವಹಿವಾಟಿನ ಕಾರ್ಯಗಳಿಗೆ ಅನುಕೂಲ ಮಾಡಿಕೊಡಬೇಕು. ವಿಳಂಬ ಮಾಡಿದರೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಂಘದ ಉತ್ತರ ಕರ್ನಾಟಕ ಅಧ್ಯಕ್ಷ ದೇವಿಂದ್ರಪ್ಪಗೌಡ, ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹುಕಾರ, ಕಲ್ಯಾಣ ಕರ್ನಾಟಕ ಉಪಾಧ್ಯಕ್ಷ ಎಂ.ಡಿ.ಮೊಹಮ್ಮದ್ ಚಿಂತಕುಂಟಾ, ಪ್ರಮುಖರಾದ ಸಾಹೇಬಗೌಡ ನಾಲ್ವಡಿಗಿ, ಕೃಷ್ಣ ವೀರಶೆಟ್ಟಿ, ಭೀಮಶೇಪ್ಪ ನಕ್ಕ, ಭಾಸ್ಕರರೆಡ್ಡಿ, ವಿಶ್ವನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-30-293057856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಪರವಾನಗಿ ಪಡೆದ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ, ಅವರ ಸೇವೆಯನ್ನು ಕಾಯಂ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಪರವಾನಗಿ ಭೂಮಾಪಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಭೂಮಾಪನ ಇಲಾಖೆಯ ಕೆಲಸಗಳು ಸ್ಥಗಿತವಾಗಿವೆ. ಜಮೀನಿನ ಅಳತೆ, ಫಾರಂ 10, ಪಹಣಿ ಅನ್ವಯ ಭೂಮಿ ಹದ್ದುಬಸ್ತು ಸೇರಿ ಇತರೆ ಅರ್ಜಿಗಳ ವಿಲೇವಾರಿಗೆ ಅಡ್ಡಿಯಾಗುತ್ತಿದೆ ಎಂದರು.</p>.<p>ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದು, ಅವರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸರ್ಕಾರ ತಕ್ಷಣವೇ ಅವರ ಬೇಡಿಕೆ ಈಡೇರಿಸಿ, ಜಮೀನಿನ ಅಳತೆಯ ವಹಿವಾಟಿನ ಕಾರ್ಯಗಳಿಗೆ ಅನುಕೂಲ ಮಾಡಿಕೊಡಬೇಕು. ವಿಳಂಬ ಮಾಡಿದರೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಂಘದ ಉತ್ತರ ಕರ್ನಾಟಕ ಅಧ್ಯಕ್ಷ ದೇವಿಂದ್ರಪ್ಪಗೌಡ, ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹುಕಾರ, ಕಲ್ಯಾಣ ಕರ್ನಾಟಕ ಉಪಾಧ್ಯಕ್ಷ ಎಂ.ಡಿ.ಮೊಹಮ್ಮದ್ ಚಿಂತಕುಂಟಾ, ಪ್ರಮುಖರಾದ ಸಾಹೇಬಗೌಡ ನಾಲ್ವಡಿಗಿ, ಕೃಷ್ಣ ವೀರಶೆಟ್ಟಿ, ಭೀಮಶೇಪ್ಪ ನಕ್ಕ, ಭಾಸ್ಕರರೆಡ್ಡಿ, ವಿಶ್ವನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-30-293057856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>