‘ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್ ಗೇಟ್ ಎತ್ತದಿದ್ದರಿಂದ ಬೆಳೆ ಹಾನಿಯಾಗಿರುವ ಮಾಹಿತಿ ಇದೆ.ಇದನ್ನು ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ನೆರೆ ಪೀಡಿತ ಗ್ರಾಮಗಳಲ್ಲಿ ನರೇಗಾದ ವತಿಯಿಂದ ಜಿಲ್ಲಾಧಿಕಾರಿ ಗ್ರಾಮಸ್ಥರಿಗೆ ಉದ್ಯೋಗ ನೀಡಬೇಕು. ಇಷ್ಟು ದಿನ ಯಾರೂ ಜಿಲ್ಲೆ ಬಗ್ಗೆ ಗಮನ ಹರಿಸಿಲ್ಲ. ಈಗ ನಾನು ಗಮನಹರಿಸಿ ಬೇರೆ ಜಿಲ್ಲೆಗಳಂತೆ ಅಭಿವೃದ್ಧಿ ಮಾಡುತ್ತೇನೆ’ ಎಂದು ತಿಳಿಸಿದರು.