<p><strong>ಯಾದಗಿರಿ:</strong> ‘ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ, ಸಾರ್ವಜನಿಕರ ಕೆಲಸವಿದ್ದರೂ ಮಧ್ಯವರ್ತಿಗಳ ಮೂಲಕ ಬಾರದೆ ನೇರವಾಗಿ ಭೇಟಿಯಾದರೆ ತಕ್ಷಣವೇ ಸ್ಪಂದಿಸಲಾಗುವುದು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಲ್ಲಿ ಮಂಜೂರಾದ ₹40 ಲಕ್ಷ ವೆಚ್ಚದ 33 ಎಲೆಕ್ಟ್ರಾನಿಕ್ ತ್ರಿಚಕ್ರ ವಾಹನಗಳನ್ನು ಅಂಗವಿಕಲ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.</p>.<p>‘ಜನರು ಅಭಿವೃದ್ಧಿ ಕೆಲಸಗಳನ್ನು ಮಾಡಲು ಆಯ್ಕೆ ಮಾಡಿದ್ದು, ಮೂರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಅಂಗವಿಕಲರು ಯಾವುದರಲ್ಲೂ ಕಡಿಮೆಯಿಲ್ಲ. ಅವರಿಗೆ ಅವಕಾಶ ನೀಡಿದಾಗ ಸಾಧಕರಾಗುತ್ತಾರೆ ಅವರು ಕೂಡ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ವಿತರಣೆ ಮಾಡಲಾದ ವಾಹನಗಳನ್ನು ಯಾವುದೇ ಕಾರಣಕ್ಕೂ ಬೇರೆಯವರಿಗೆ ನೀಡುವುದು, ಮಾರಾಟ ಮಾಡುವುದಾಗಲಿ ಮಾಡಬಾರದು. ಇದು, ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕರ ಕಲ್ಯಾಣ ಅಧಿಕಾರಿ ಶರಣಪ್ಪ ಪಾಟೀಲ, ಪ್ರಮುಖರಾದ ನಾಗಮ್ಮ, ಮಲ್ಲಿಕಾರ್ಜುನ ಈಟೆ, ಶರಣಗೌಡ ಬಲಕಲ, ಖಾಜಾ ಮೈನುದ್ದೀನ್ ಮಿರ್ಚಿ, ಶರಣಬಸವ ಕೂರಕುಂದ, ತಿಮ್ಮಣ್ಣ ನಾಯಕ, ಜಲಾಲ್ ಬಬುಲಾದ್, ಬಾಪುಗೌಡ ಮೆಚನೂರು, ಅಶೋಕ್ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ, ಸಾರ್ವಜನಿಕರ ಕೆಲಸವಿದ್ದರೂ ಮಧ್ಯವರ್ತಿಗಳ ಮೂಲಕ ಬಾರದೆ ನೇರವಾಗಿ ಭೇಟಿಯಾದರೆ ತಕ್ಷಣವೇ ಸ್ಪಂದಿಸಲಾಗುವುದು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಲ್ಲಿ ಮಂಜೂರಾದ ₹40 ಲಕ್ಷ ವೆಚ್ಚದ 33 ಎಲೆಕ್ಟ್ರಾನಿಕ್ ತ್ರಿಚಕ್ರ ವಾಹನಗಳನ್ನು ಅಂಗವಿಕಲ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು.</p>.<p>‘ಜನರು ಅಭಿವೃದ್ಧಿ ಕೆಲಸಗಳನ್ನು ಮಾಡಲು ಆಯ್ಕೆ ಮಾಡಿದ್ದು, ಮೂರು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಅಂಗವಿಕಲರು ಯಾವುದರಲ್ಲೂ ಕಡಿಮೆಯಿಲ್ಲ. ಅವರಿಗೆ ಅವಕಾಶ ನೀಡಿದಾಗ ಸಾಧಕರಾಗುತ್ತಾರೆ ಅವರು ಕೂಡ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ವಿತರಣೆ ಮಾಡಲಾದ ವಾಹನಗಳನ್ನು ಯಾವುದೇ ಕಾರಣಕ್ಕೂ ಬೇರೆಯವರಿಗೆ ನೀಡುವುದು, ಮಾರಾಟ ಮಾಡುವುದಾಗಲಿ ಮಾಡಬಾರದು. ಇದು, ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕರ ಕಲ್ಯಾಣ ಅಧಿಕಾರಿ ಶರಣಪ್ಪ ಪಾಟೀಲ, ಪ್ರಮುಖರಾದ ನಾಗಮ್ಮ, ಮಲ್ಲಿಕಾರ್ಜುನ ಈಟೆ, ಶರಣಗೌಡ ಬಲಕಲ, ಖಾಜಾ ಮೈನುದ್ದೀನ್ ಮಿರ್ಚಿ, ಶರಣಬಸವ ಕೂರಕುಂದ, ತಿಮ್ಮಣ್ಣ ನಾಯಕ, ಜಲಾಲ್ ಬಬುಲಾದ್, ಬಾಪುಗೌಡ ಮೆಚನೂರು, ಅಶೋಕ್ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>