ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ ನಗರಸಭೆ: ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ

ಕಾಂಗ್ರೆಸ್‌, ಬಿಜೆಪಿಯಲ್ಲಿ ಮಹಿಳಾ ಮಣಿಗಳ ದಂಡು, ಪಕ್ಷೇತರರ ಮೇಲೆ ಅವಲಂಬನೆ
Published : 31 ಆಗಸ್ಟ್ 2024, 6:17 IST
Last Updated : 31 ಆಗಸ್ಟ್ 2024, 6:17 IST
ಫಾಲೋ ಮಾಡಿ
Comments
ಕಳೆದ ಬಾರಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಈ ಬಾರಿ ಶಾಸಕರು ಪಕ್ಷದ ಹೈಕಮಾಂಡ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ನೀಡಿದರೆ ಸ್ಪರ್ಧೆ ಖಚಿತ
ನಿರ್ಮಲಾ ಭೋಜರಾಜ ಜಗನ್ನಾಥ ವಾರ್ಡ್‌ ಸಂಖ್ಯೆ 23ರ ಸದಸ್ಯೆ
ಈಗಾಗಲೇ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದು ಉಳಿದ ಅವಧಿಗೆ ಅಧ್ಯಕ್ಷ ಸ್ಥಾನ ನೀಡಲು ಸಂಬಂಧಿಸಿದವರ ಗಮನಕ್ಕೆ ತರಲಾಗಿದೆ
ಮಹಾದೇವಮ್ಮ ಬೀರನೂರ ವಾರ್ಡ್‌ ಸಂಖ್ಯೆ 10ರ ಸದಸ್ಯೆ
ಬಹುಮತ ಇಲ್ಲದಿದ್ದರೂ ಕಾಂಗ್ರೆಸ್‌ ಕಸರತ್ತು
31 ವಾರ್ಡ್‌ ಸದಸ್ಯರು ಶಾಸಕರು ಸಂಸದರು ಸೇರಿ 33 ಸಂಖ್ಯೆ ಆಗಲಿದ್ದು 17 ನಂಬರ್‌ ಮ್ಯಾಜಿಕ್‌ ನಂಬರ್‌ ಆಗಿದೆ. ಕಾಂಗ್ರೆಸ್‌ 12 ಬಿಜೆಪಿ 16 ಸದಸ್ಯರು ಜೆಡಿಎಸ್‌ 2 1 ಪಕ್ಷೇತರರು ಇದ್ದಾರೆ. ಇದರಲ್ಲಿ ಜೆಡಿಎಸ್‌ ಮತ್ತು ಪಕ್ಷೇತರ ಸದಸ್ಯರು ಯಾರಿಗೆ ಮತ ನೀಡುವರೋ ಅವರಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ. ಅಲ್ಲದೇ ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಸದಸ್ಯರೊಬ್ಬರು ಕಾಂಗ್ರೆಸ್‌ ಪ‍ರವಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ನಮ್ಮ ಜೊತೆ ಅವರು ಗುರುತಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಹೇಳಿಕೊಳ್ಳುತ್ತಾರೆ. ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಾಗಿದ್ದರಿಂದ ಇಲ್ಲಿಯೂ ಮೈತ್ರಿ ಮುಂದುವರಿದಿದ್ದು ನಾವೇ ಅಧಿಕಾರ ನಡೆಸುತ್ತಿದ್ದೇವೆ ಎಂದು ಮೈತ್ರಿ ಪಕ್ಷಗಳ ಭರವಸೆಯಾಗಿದೆ. ಇನ್ನೊಂದೆಡೆ ಜೆಡಿಎಸ್‌ನ ಮಹಾದೇವಮ್ಮ ಬೀರನೂರ ಅವರು ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟು ತಮ್ಮನ್ನೇ ಆಯ್ಕೆ ಮಾಡಬೇಕು ಎನ್ನುವ ತಂತ್ರಗಾರಿಕೆಯನ್ನು ಪಕ್ಷದಲ್ಲಿ ತೋರ್ಪಡಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.
ಎಂಎಲ್‌ಸಿ ಮತಕ್ಕಾಗಿ ಅರ್ಜಿ
ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿಯವರು ಯಾದಗಿರಿ ಜಿಲ್ಲೆಯನ್ನು ನೋಡಲ್‌ ಜಿಲ್ಲೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು ತಮಗೆ ಮತ ಚಲಾಯಿಸಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‌ನ ಸದಸ್ಯರೊಬ್ಬರು ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಎಂಎಲ್‌ಸಿ ಮತ ಗಣನೆಗೆ ಬಂದರೆ ಬಿಜೆಪಿ ಬಹುಮತ ದಕ್ಕಲಿದೆ. ಆದರೆ ಅರ್ಜಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವಿಚಾರಣೆಗೆ ಬಂದು ಯಾವ ನಿರ್ಣಯ ಕೈಗೊಳ್ಳಲಾಗುತ್ತಿದೆ ಎನ್ನುವುದರ ಮೇಲೆ ಅವಲಂಬಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT