<p><strong>ಯಾದಗಿರಿ</strong>: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ಡೌನ್ ನಿಯಮಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಪಾಲನೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಅನಾವಶ್ಯಕವಾಗಿ ಓಡಾಡುವ ಜನರಿಗೆ ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ- ವಹಿವಾಟು ಮಾಡುತ್ತಿದ್ದರೆ ಅಂಥ ಅಂಗಡಿ ಮಾಲೀಕರ ವಿರುದ್ಧ ದಂಡದ ಜೊತೆಗೆ ಕಟ್ಟಿನ ಕ್ರಮಕೈಗೊಳ್ಳಬೇಕೆಂದು ಹೇಳಿದರು.</p>.<p>ವೈಯಕ್ತಿಕ ಸ್ವಚ್ಛತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಕೊರೊನಾ ಹರಡುವಿಕೆ ತಡೆಯುವ ಕುರಿತು ಜಿಲ್ಲೆಯ ಜನರಲ್ಲಿ ವ್ಯಾಪಾಕ ಜಾಗೃತಿ ಮೂಡಿಸಬೇಕು. ಈ ಮೂಲಕ ಕೊರೊನಾ ಎರಡನೇ ಅಲೆಯಿಂದ ಮುಕ್ತಿ ಪಡೆಯಬೇಕಾಗಿದೆ ಎಂದರು.</p>.<p>ಬೆಡ್, ಆಕ್ಸಿಜನ್ ವ್ಯವಸ್ಥೆಗೆ ಸೂಚನೆ:ಕೋವಿಡ್ ಎರಡನೇ ಅಲೆ ಸೋಂಕು ರಾಜ್ಯದಲ್ಲಿ ವೇಗವಾಗಿ ಹರಡುತ್ತಿದೆ. ಹಲವಾರು ಮಂದಿ ಈ ಸೋಂಕಿಗೆ ಬಲಿಯಾಗುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.</p>.<p>ಕೋವಿಡ್- 19 ಸೋಂಕನ್ನು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಯ್ದು ಕೊಳ್ಳುವನಿಟ್ಟಿನಲ್ಲಿ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಅಧಿಕಾರಿಗಳು ಎಚ್ಚರವಹಿಸಬೇಕು. ಒಂದು ವೇಳೆ ತೊಂದರೆ ಕಂಡುಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಆಮ್ಲಜನಕ ಘಟಕಕ್ಕೆ ಭೇಟಿ: ನಗರದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಆಮ್ಲಜನಕ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಆಕ್ಸಿಜನ್ ಕೊರತೆ ಇಲ್ಲ ಎಂದರು.</p>.<p>ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಹಿರಿಯ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲೆಯ ತಹಶೀಲ್ದಾರರು, ನಗರಸಭೆಯ ಪೌರಾಯುಕ್ತರು, ಪುರಸಭೆಗಳ ಮುಖ್ಯಾಧಿಕಾರಿ ಸೇರಿದಂತೆ ಸಂಬಂಧಿಸಿದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ಡೌನ್ ನಿಯಮಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಪಾಲನೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಅನಾವಶ್ಯಕವಾಗಿ ಓಡಾಡುವ ಜನರಿಗೆ ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ- ವಹಿವಾಟು ಮಾಡುತ್ತಿದ್ದರೆ ಅಂಥ ಅಂಗಡಿ ಮಾಲೀಕರ ವಿರುದ್ಧ ದಂಡದ ಜೊತೆಗೆ ಕಟ್ಟಿನ ಕ್ರಮಕೈಗೊಳ್ಳಬೇಕೆಂದು ಹೇಳಿದರು.</p>.<p>ವೈಯಕ್ತಿಕ ಸ್ವಚ್ಛತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಕೊರೊನಾ ಹರಡುವಿಕೆ ತಡೆಯುವ ಕುರಿತು ಜಿಲ್ಲೆಯ ಜನರಲ್ಲಿ ವ್ಯಾಪಾಕ ಜಾಗೃತಿ ಮೂಡಿಸಬೇಕು. ಈ ಮೂಲಕ ಕೊರೊನಾ ಎರಡನೇ ಅಲೆಯಿಂದ ಮುಕ್ತಿ ಪಡೆಯಬೇಕಾಗಿದೆ ಎಂದರು.</p>.<p>ಬೆಡ್, ಆಕ್ಸಿಜನ್ ವ್ಯವಸ್ಥೆಗೆ ಸೂಚನೆ:ಕೋವಿಡ್ ಎರಡನೇ ಅಲೆ ಸೋಂಕು ರಾಜ್ಯದಲ್ಲಿ ವೇಗವಾಗಿ ಹರಡುತ್ತಿದೆ. ಹಲವಾರು ಮಂದಿ ಈ ಸೋಂಕಿಗೆ ಬಲಿಯಾಗುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.</p>.<p>ಕೋವಿಡ್- 19 ಸೋಂಕನ್ನು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಯ್ದು ಕೊಳ್ಳುವನಿಟ್ಟಿನಲ್ಲಿ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.</p>.<p>ಅಧಿಕಾರಿಗಳು ಎಚ್ಚರವಹಿಸಬೇಕು. ಒಂದು ವೇಳೆ ತೊಂದರೆ ಕಂಡುಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಆಮ್ಲಜನಕ ಘಟಕಕ್ಕೆ ಭೇಟಿ: ನಗರದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಆಮ್ಲಜನಕ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಆಕ್ಸಿಜನ್ ಕೊರತೆ ಇಲ್ಲ ಎಂದರು.</p>.<p>ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಹಿರಿಯ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲೆಯ ತಹಶೀಲ್ದಾರರು, ನಗರಸಭೆಯ ಪೌರಾಯುಕ್ತರು, ಪುರಸಭೆಗಳ ಮುಖ್ಯಾಧಿಕಾರಿ ಸೇರಿದಂತೆ ಸಂಬಂಧಿಸಿದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>