<p><strong>ವಡಗೇರಾ</strong>: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬವು ಮೇ ತಿಂಗಳ ಅಂತ್ಯದ ಒಳಗೆ, ಜಾಬ್ ಕಾರ್ಡ್ಗಳನ್ನು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ ದೇವರಮನಿ ರವರ ಅಧ್ಯಕ್ಷತೆಯಲ್ಲಿ ನಡೆದ ನರೇಗಾ ಸಿಬ್ಬಂದಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ 17 ಗ್ರಾಪಂಯ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳು, ಗ್ರಾಮದ ಕೂಲಿ ಕಾರ್ಮಿಕರ ಮನೆ ಮನೆಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು ಹಾಗೆಯೆ ಪ್ರತಿ ಗ್ರಾಪಂಗಳಿಗೆ ನಿಗದಿಪಡಿಸಿದ ಮಾನವ ದಿನಗಳ ಗುರಿಯನ್ನು ಸಾಧಿಸಬೇಕು. ಯಾವುದೇ ಕಾರಣಕ್ಕೂ ಉದಾಸಿನತೆಯನ್ನು ಸಹಿಸುವುದಿಲ್ಲ’ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಬ್ಬಂದಿ ಕಾರ್ಮಿಕರಿಂದ ಕೂಲಿ ಬೇಡಿಕೆ ಪಡೆದು, ನಿರಂತರ ಕೂಲಿ ಕೆಲಸ ಒದಗಿಸುವುದು, ನರೇಗಾ ಯೋಜನೆಯಡಿ ಕೆಲಸ ಮಾಡುವ ಪ್ರತಿಯೊಬ್ಬ ಗಂಡು-ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ, ದಿನಕ್ಕೆ ಒಬ್ಬರಿಗೆ ₹370 ಕೂಲಿ ಮೊತ್ತ ನೀಡಲಾಗುತ್ತಿದ್ದು, ಯೋಜನೆ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು’ ಎಂದು ಗ್ರಾಪಂ ಸಿಬ್ಬಂದಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಕಿರಾಣಬಾಬು, ಡಿಎಂಐಎಸ್ ರಾಘವೇಂದ್ರ, ಡಿಐಇಸಿ ಪರಶುರಾಮ, ಟಿಸಿ ರವೀಂದ್ರ ದೇಸಾಯಿ, ಟಿಎಂಐಎಸ್ ಮಲ್ಲಿಕಾರ್ಜುನ ನರೇಗಾ ಅಡ್ಮೀನ್ ದೇವಮ್ಮ ಹಾಗೂ ಟಿಐಇಸಿ ದುರ್ಗೇಶ, ಡಿಇಒ ಗಳು, ಟಿಎಎ ಮತ್ತು ಜಿಕೆಎಂಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-30-193840950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬವು ಮೇ ತಿಂಗಳ ಅಂತ್ಯದ ಒಳಗೆ, ಜಾಬ್ ಕಾರ್ಡ್ಗಳನ್ನು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ ದೇವರಮನಿ ರವರ ಅಧ್ಯಕ್ಷತೆಯಲ್ಲಿ ನಡೆದ ನರೇಗಾ ಸಿಬ್ಬಂದಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ 17 ಗ್ರಾಪಂಯ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳು, ಗ್ರಾಮದ ಕೂಲಿ ಕಾರ್ಮಿಕರ ಮನೆ ಮನೆಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು ಹಾಗೆಯೆ ಪ್ರತಿ ಗ್ರಾಪಂಗಳಿಗೆ ನಿಗದಿಪಡಿಸಿದ ಮಾನವ ದಿನಗಳ ಗುರಿಯನ್ನು ಸಾಧಿಸಬೇಕು. ಯಾವುದೇ ಕಾರಣಕ್ಕೂ ಉದಾಸಿನತೆಯನ್ನು ಸಹಿಸುವುದಿಲ್ಲ’ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಬ್ಬಂದಿ ಕಾರ್ಮಿಕರಿಂದ ಕೂಲಿ ಬೇಡಿಕೆ ಪಡೆದು, ನಿರಂತರ ಕೂಲಿ ಕೆಲಸ ಒದಗಿಸುವುದು, ನರೇಗಾ ಯೋಜನೆಯಡಿ ಕೆಲಸ ಮಾಡುವ ಪ್ರತಿಯೊಬ್ಬ ಗಂಡು-ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ, ದಿನಕ್ಕೆ ಒಬ್ಬರಿಗೆ ₹370 ಕೂಲಿ ಮೊತ್ತ ನೀಡಲಾಗುತ್ತಿದ್ದು, ಯೋಜನೆ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು’ ಎಂದು ಗ್ರಾಪಂ ಸಿಬ್ಬಂದಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಕಿರಾಣಬಾಬು, ಡಿಎಂಐಎಸ್ ರಾಘವೇಂದ್ರ, ಡಿಐಇಸಿ ಪರಶುರಾಮ, ಟಿಸಿ ರವೀಂದ್ರ ದೇಸಾಯಿ, ಟಿಎಂಐಎಸ್ ಮಲ್ಲಿಕಾರ್ಜುನ ನರೇಗಾ ಅಡ್ಮೀನ್ ದೇವಮ್ಮ ಹಾಗೂ ಟಿಐಇಸಿ ದುರ್ಗೇಶ, ಡಿಇಒ ಗಳು, ಟಿಎಎ ಮತ್ತು ಜಿಕೆಎಂಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-30-193840950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>