ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮೀನು ಕಳೆದುಕೊಂಡ ರೈತನಿಗೆ ಪರಿಹಾರದ ಚೆಕ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ₹10 ಸಾವಿರ ಮುಂಗಡವಾಗಿ ಪಡೆದು ಇನ್ನುಳಿದ ₹5 ಸಾವಿರ ಲಂಚ ಪಡೆಯುವಾಗ ಅಧಿಕಾರಿ ಮತ್ತು ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಖತಾಲಸಾಬ್ ಎಂಬ ರೈತ ಸೂರತ್-ಚೆನ್ನೈ ಎಕ್ಸ್ಪ್ರೆಸ್ ವೇ ಯೋಜನೆಯಡಿ ಎರಡು ಎಕರೆ ಭೂಮಿ ಕಳೆದುಕೊಂಡಿದ್ದರು. ₹20 ಲಕ್ಷ ಪರಿಹಾರ ಪಡೆದಿದ್ದ ರೈತ, ಇನ್ನುಳಿದ ₹20 ಲಕ್ಷ ಚೆಕ್ ನೀಡಲು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.