<p>ವಡಗೇರಾ: ‘ಕಂದಾಯ ಇಲಾಖೆಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಜನ ಸಾಮಾನ್ಯರಿಗೆ ಜನಸ್ನೇಹಿ ಸೇವೆ ಒದಗಿಸಬೇಕು’ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ ಗುರುವಾರ ಭೇಟಿ ನೀಡಿ ಜನಗಣತಿಯ ಕಾರ್ಯ ಹಾಗೂ ಬಾಕಿ ಇರುವ ಅರ್ಜಿಗಳ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.</p>.<p>ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನಗಣತಿ ಕಾರ್ಯವನ್ನು ಪಾರದರ್ಶಕವಾಗಿ ನಡೆಸುವಂತೆ ತಹಶೀಲ್ದಾರ್ ಮತ್ತು ಸಿಬ್ಬಂದಿಗೆ ಸೂಚಿಸುವುದರ ಜತೆಗೆ ಜನಗಣತಿಗಾಗಿ ಜಿಲ್ಲಾಡಳಿತ ನೇಮಿಸಿದ ಸಿಬ್ಬಂದಿ ಕಡ್ಡಾಯವಾಗಿ ಜನಗಣತಿ ಕಾರ್ಯದಲ್ಲಿ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದರು.</p>.<p>‘ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಾಕಿ ಇರುವ ಕಡತಗಳ ವಿಲೇವಾರಿಗಳನ್ನು ಶೀಘ್ರವೇ ಮಾಡಬೇಕು. ಯಾವುದೆ ಕಾರಣಕ್ಕೂ ವಿಳಂಬ ದೊರಣೆಯನ್ನು ಸಹಿಸುವುದಿಲ್ಲ’ ಎಂದರು.</p>.<p>ತಹಶೀಲ್ ಕಚೇರಿಯಲ್ಲಿ ಸ್ವಚ್ಛತೆ ಕಾಪಾಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು. ತಹಶೀಲ್ದಾರ್ ಮಂಗಳಾ. ಎಂ, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-30-1717320795</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ‘ಕಂದಾಯ ಇಲಾಖೆಯ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಜನ ಸಾಮಾನ್ಯರಿಗೆ ಜನಸ್ನೇಹಿ ಸೇವೆ ಒದಗಿಸಬೇಕು’ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ ಗುರುವಾರ ಭೇಟಿ ನೀಡಿ ಜನಗಣತಿಯ ಕಾರ್ಯ ಹಾಗೂ ಬಾಕಿ ಇರುವ ಅರ್ಜಿಗಳ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.</p>.<p>ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನಗಣತಿ ಕಾರ್ಯವನ್ನು ಪಾರದರ್ಶಕವಾಗಿ ನಡೆಸುವಂತೆ ತಹಶೀಲ್ದಾರ್ ಮತ್ತು ಸಿಬ್ಬಂದಿಗೆ ಸೂಚಿಸುವುದರ ಜತೆಗೆ ಜನಗಣತಿಗಾಗಿ ಜಿಲ್ಲಾಡಳಿತ ನೇಮಿಸಿದ ಸಿಬ್ಬಂದಿ ಕಡ್ಡಾಯವಾಗಿ ಜನಗಣತಿ ಕಾರ್ಯದಲ್ಲಿ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದರು.</p>.<p>‘ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಾಕಿ ಇರುವ ಕಡತಗಳ ವಿಲೇವಾರಿಗಳನ್ನು ಶೀಘ್ರವೇ ಮಾಡಬೇಕು. ಯಾವುದೆ ಕಾರಣಕ್ಕೂ ವಿಳಂಬ ದೊರಣೆಯನ್ನು ಸಹಿಸುವುದಿಲ್ಲ’ ಎಂದರು.</p>.<p>ತಹಶೀಲ್ ಕಚೇರಿಯಲ್ಲಿ ಸ್ವಚ್ಛತೆ ಕಾಪಾಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು. ತಹಶೀಲ್ದಾರ್ ಮಂಗಳಾ. ಎಂ, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-30-1717320795</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>