<p><strong>ಯಾದಗಿರಿ: </strong>ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣದ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ರಾಗಪ್ರಿಯಾ.ಆರ್ ತಿಳಿಸಿದ್ದಾರೆ.</p>.<p>ಜಿಲ್ಲಾ ಕೋವಿಡ್ ಆಸ್ಪತ್ರೆ ಬಳಿ ಆಮ್ಲಜನಕ ಉತ್ಪಾದನಾ ಘಟಕದ ಪ್ರಮುಖ ಸಾಧನವಾಗಿರುವ ಬೃಹತ್ ಕಂಟೇನರ್ ಅನ್ನು ಇಳಿಸಿದ ವೇಳೆ ಭೇಟಿ ಮಾತನಾಡಿದರು.</p>.<p>ಪ್ರತಿ ಒಂದು ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದ್ದು, ಇದರಿಂದ ನಿತ್ಯ 70 ರಿಂದ 80 ರೋಗಿಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಬಹುದಾಗಿದೆ. ಇದರಿಂದ ಜಿಲ್ಲೆಯಲ್ಲಿರುವ ಕೋವಿಡ್ ರೋಗಿಗಳಿಗೆ ಆಮ್ಲಜನಕ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಸುಮಾರು 4 ಟನ್ ತೂಕವಿರುವ ಆಮ್ಲಜನಕ ಉತ್ಪಾದನೆ ಮಾಡುವ ಈ ಕಂಟೇನರ್ ಅನ್ನು ಇಸ್ರೇಲ್ ಸರ್ಕಾರ ದಾನವಾಗಿ ನೀಡಿದೆ. ಭಾರತ ದೇಶಕ್ಕೆ ಇಸ್ರೇಲ್ ಸರ್ಕಾರ ಒಟ್ಟು ಮೂರು ಕಂಟೇನರ್ಗಳನ್ನು ನೀಡಿದೆ. ಈ ಪೈಕಿ ರಾಜ್ಯಕ್ಕೆ ಎರಡು ದೊರೆತಿದ್ದು, ರಾಜ್ಯ ಕೈಗಾರಿಕೆ ಇಲಾಖೆಯು ಯಾದಗಿರಿ ಮತ್ತು ಕೋಲಾರ ಜಿಲ್ಲೆಗೆ ತಲಾ ಒಂದೊಂದು ಕಂಟೇನರ್ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ( ಎನ್ಡಿಆರ್ಎಫ್) ಬಂದಿಳಿಸಿದ್ದು, ಶೀಘ್ರದಲ್ಲೇ ಇದರ ಕಾರ್ಯಾರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.</p>.<p>ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಕರ್ನಾಟಕ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಬಾಬುರೆಡ್ಡಿ, ರಾಯಚೂರು ಮತ್ತು ಯಾದಗಿರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೀರಭೂಷಣ್ ಶೆಟ್ಟಿ, ಯಾದಗಿರಿ ಸಹಾಯಕ ಎಂಜಿನಿಯರ್ ಧನರಾಜ್ ಚವಾಣ್, ಸಹಾಯಕ ಔಷಧ ನಿಯಂತ್ರಕ ಅಧಿಕಾರಿ<br />ಪ್ರಿಯಾರಾಜನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣದ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ರಾಗಪ್ರಿಯಾ.ಆರ್ ತಿಳಿಸಿದ್ದಾರೆ.</p>.<p>ಜಿಲ್ಲಾ ಕೋವಿಡ್ ಆಸ್ಪತ್ರೆ ಬಳಿ ಆಮ್ಲಜನಕ ಉತ್ಪಾದನಾ ಘಟಕದ ಪ್ರಮುಖ ಸಾಧನವಾಗಿರುವ ಬೃಹತ್ ಕಂಟೇನರ್ ಅನ್ನು ಇಳಿಸಿದ ವೇಳೆ ಭೇಟಿ ಮಾತನಾಡಿದರು.</p>.<p>ಪ್ರತಿ ಒಂದು ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದ್ದು, ಇದರಿಂದ ನಿತ್ಯ 70 ರಿಂದ 80 ರೋಗಿಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಬಹುದಾಗಿದೆ. ಇದರಿಂದ ಜಿಲ್ಲೆಯಲ್ಲಿರುವ ಕೋವಿಡ್ ರೋಗಿಗಳಿಗೆ ಆಮ್ಲಜನಕ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಸುಮಾರು 4 ಟನ್ ತೂಕವಿರುವ ಆಮ್ಲಜನಕ ಉತ್ಪಾದನೆ ಮಾಡುವ ಈ ಕಂಟೇನರ್ ಅನ್ನು ಇಸ್ರೇಲ್ ಸರ್ಕಾರ ದಾನವಾಗಿ ನೀಡಿದೆ. ಭಾರತ ದೇಶಕ್ಕೆ ಇಸ್ರೇಲ್ ಸರ್ಕಾರ ಒಟ್ಟು ಮೂರು ಕಂಟೇನರ್ಗಳನ್ನು ನೀಡಿದೆ. ಈ ಪೈಕಿ ರಾಜ್ಯಕ್ಕೆ ಎರಡು ದೊರೆತಿದ್ದು, ರಾಜ್ಯ ಕೈಗಾರಿಕೆ ಇಲಾಖೆಯು ಯಾದಗಿರಿ ಮತ್ತು ಕೋಲಾರ ಜಿಲ್ಲೆಗೆ ತಲಾ ಒಂದೊಂದು ಕಂಟೇನರ್ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ( ಎನ್ಡಿಆರ್ಎಫ್) ಬಂದಿಳಿಸಿದ್ದು, ಶೀಘ್ರದಲ್ಲೇ ಇದರ ಕಾರ್ಯಾರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.</p>.<p>ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಕರ್ನಾಟಕ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಬಾಬುರೆಡ್ಡಿ, ರಾಯಚೂರು ಮತ್ತು ಯಾದಗಿರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೀರಭೂಷಣ್ ಶೆಟ್ಟಿ, ಯಾದಗಿರಿ ಸಹಾಯಕ ಎಂಜಿನಿಯರ್ ಧನರಾಜ್ ಚವಾಣ್, ಸಹಾಯಕ ಔಷಧ ನಿಯಂತ್ರಕ ಅಧಿಕಾರಿ<br />ಪ್ರಿಯಾರಾಜನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>