<p>ಯಾದಗಿರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಪೂರ್ಣ ಪ್ರಮಾಣದಲ್ಲಿ ಪ್ರೋತ್ಸಾಹ ಧನ ವಿತರಿಸದೇ ಜಿಲ್ಲಾ ಮತ್ತು ಕುಟುಂಬ ಕಲ್ಯಾಣಧಿಕಾರಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಮುದಾಯ ಆರೋಗ್ಯಾಧಿಕಾರಿಗಳು ಬುಧವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಬುಧವಾರ ಸಂಜೆ 4 ಗಂಟೆಗೆ ಡಿಎಚ್ಒ ಡಾ.ಇಂದುಮತಿ ಕಾಮಶೆಟ್ಟಿ ಅವರಿಗೆ ಸಮುದಾಯ ಆರೋಗ್ಯಾಧಿಕಾರಿಗಳು ಮನವಿ ಪತ್ರ ಸಲ್ಲಿಸಲು ಆಗಮಿಸಿದ್ದರು. ಆದರೂ ಡಿಎಚ್ಒ ನಮ್ಮ ಮನವಿ ಆಲಿಸದೇ ತೆರಳಿದ್ದಾರೆ ಎಂದು ಆರೋಪಿಸಿ ಕಚೇರಿ ಮುಂದೆಯೇ ವಿವಿಧ ತಾಲ್ಲೂಕುಗಳಿಂದ ಆಗಮಿಸಿದವರು ಪ್ರತಿಭಟನೆ ನಡೆಸಿದರು.</p>.<p>ಇದೇ ವೇಳೆ ಡಿಎಚ್ಒ ನಿರ್ಲಕ್ಷ್ಯವನ್ನು ಖಂಡಿಸಿದರು. ದೇವರು ವರ ಕೊಟ್ಟರೂ ಪೂಜಾರಿ ವರ ಕೊಟ್ಟಿಲ್ಲ ಎನ್ನುವಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ ಡಿಎಚ್ಒ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>15 ಅಂಶಗಳನ್ನು ಪಾಲನೆ ಮಾಡಿ ಆಯಾ ವೈದ್ಯಾಧಿಕಾರಿಗಳ ಸಹಿ ಪಡೆದು ಸಲ್ಲಿಸಿದರೂ ಡಿಎಚ್ಒ ಅವರು ಹಣ ಕಡಿತ ಮಾಡುತ್ತಿದ್ದಾರೆ. ವೈದ್ಯಾಧಿಕಾರಿ ಸಹಿಗೆ ಬೆಲೆಯೇ ಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಪಾದಿಸಿದರು.</p>.<p>ಪ್ರತಿ ತಿಂಗಳು ವೇತನ ಪಾವತಿ ಮಾಡಬೇಕು. ಪ್ರೋತ್ಸಾಹ ಧನ ₹8,000 ಪಾವತಿಸಬೇಕು. ವಿನಾಕಾರಣ ಪ್ರೋತ್ಸಾಹ ಧನ ಕಡಿತ ಮಾಡಬಾರದು ಎಂದು ಆಗ್ರಹಿಸಿದರು.</p>.<p>ಹಣ ಕಡಿತದಿಂದ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ.ಅಧಿಕಾರಿಗೆ ನಮ್ಮ ನೋವು ತೋಡಿಕೊಳ್ಳಲು ಬಂದರೆ ನಮ್ಮ ಆಲಿಸುತ್ತಿಲ್ಲ. ನಮಗೆ ಕಿರುಕುಳ ಆಗುತ್ತಿದೆ. ಡಿಎಚ್ಒ ಬಂದು ನಮ್ಮ ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಅಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಎಚ್ಚರಿಸಿದರು.</p>.<p>ಈ ವೇಳೆ ಸಮುದಾಯ ಆರೋಗ್ಯಾಧಿಕಾರಿಗಳ ಸಂಘದ ಜಿಲ್ಲಾ ಸಂಚಾಲಕ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ಮಾಡಿದವರಿಗೆ ₹8 ಸಾವಿರ ಪ್ರೋತ್ಸಾಹ ಧನ ನೀಡಲು ಸರ್ಕಾರ ತಿಳಿಸಿದೆ. ಆದರೂ ಮೇಲಾಧಿಕಾರಿಗಳು ಒಂದು ಸಾವಿರ, ಎರಡು ಸಾವಿರ ನೀಡುತ್ತಿದ್ದಾರೆ. ಅಲ್ಲದೇ ನಮ್ಮ ಕರ್ತವ್ಯಕ್ಕಿಂತ ಬೇರೆದರಲ್ಲಿ ದುಡಿಸಿಕೊಂಡರೂ ಪ್ರೋತ್ಸಾಹ ಧನ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಯಾದಗಿರಿ, ಶಹಾಪುರ, ಸುರಪುರ, ಹುಣಸಗಿ ಸೇರಿದಂತೆ ವಿವಿಧ ಕಡೆಯಿಂದ ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಈ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ ಅವರಿಗೆ ಕರೆ ಮಾಡಿದರೆ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಪೂರ್ಣ ಪ್ರಮಾಣದಲ್ಲಿ ಪ್ರೋತ್ಸಾಹ ಧನ ವಿತರಿಸದೇ ಜಿಲ್ಲಾ ಮತ್ತು ಕುಟುಂಬ ಕಲ್ಯಾಣಧಿಕಾರಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಮುದಾಯ ಆರೋಗ್ಯಾಧಿಕಾರಿಗಳು ಬುಧವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಬುಧವಾರ ಸಂಜೆ 4 ಗಂಟೆಗೆ ಡಿಎಚ್ಒ ಡಾ.ಇಂದುಮತಿ ಕಾಮಶೆಟ್ಟಿ ಅವರಿಗೆ ಸಮುದಾಯ ಆರೋಗ್ಯಾಧಿಕಾರಿಗಳು ಮನವಿ ಪತ್ರ ಸಲ್ಲಿಸಲು ಆಗಮಿಸಿದ್ದರು. ಆದರೂ ಡಿಎಚ್ಒ ನಮ್ಮ ಮನವಿ ಆಲಿಸದೇ ತೆರಳಿದ್ದಾರೆ ಎಂದು ಆರೋಪಿಸಿ ಕಚೇರಿ ಮುಂದೆಯೇ ವಿವಿಧ ತಾಲ್ಲೂಕುಗಳಿಂದ ಆಗಮಿಸಿದವರು ಪ್ರತಿಭಟನೆ ನಡೆಸಿದರು.</p>.<p>ಇದೇ ವೇಳೆ ಡಿಎಚ್ಒ ನಿರ್ಲಕ್ಷ್ಯವನ್ನು ಖಂಡಿಸಿದರು. ದೇವರು ವರ ಕೊಟ್ಟರೂ ಪೂಜಾರಿ ವರ ಕೊಟ್ಟಿಲ್ಲ ಎನ್ನುವಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ ಡಿಎಚ್ಒ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>15 ಅಂಶಗಳನ್ನು ಪಾಲನೆ ಮಾಡಿ ಆಯಾ ವೈದ್ಯಾಧಿಕಾರಿಗಳ ಸಹಿ ಪಡೆದು ಸಲ್ಲಿಸಿದರೂ ಡಿಎಚ್ಒ ಅವರು ಹಣ ಕಡಿತ ಮಾಡುತ್ತಿದ್ದಾರೆ. ವೈದ್ಯಾಧಿಕಾರಿ ಸಹಿಗೆ ಬೆಲೆಯೇ ಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಪಾದಿಸಿದರು.</p>.<p>ಪ್ರತಿ ತಿಂಗಳು ವೇತನ ಪಾವತಿ ಮಾಡಬೇಕು. ಪ್ರೋತ್ಸಾಹ ಧನ ₹8,000 ಪಾವತಿಸಬೇಕು. ವಿನಾಕಾರಣ ಪ್ರೋತ್ಸಾಹ ಧನ ಕಡಿತ ಮಾಡಬಾರದು ಎಂದು ಆಗ್ರಹಿಸಿದರು.</p>.<p>ಹಣ ಕಡಿತದಿಂದ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ.ಅಧಿಕಾರಿಗೆ ನಮ್ಮ ನೋವು ತೋಡಿಕೊಳ್ಳಲು ಬಂದರೆ ನಮ್ಮ ಆಲಿಸುತ್ತಿಲ್ಲ. ನಮಗೆ ಕಿರುಕುಳ ಆಗುತ್ತಿದೆ. ಡಿಎಚ್ಒ ಬಂದು ನಮ್ಮ ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ಅಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಎಚ್ಚರಿಸಿದರು.</p>.<p>ಈ ವೇಳೆ ಸಮುದಾಯ ಆರೋಗ್ಯಾಧಿಕಾರಿಗಳ ಸಂಘದ ಜಿಲ್ಲಾ ಸಂಚಾಲಕ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ಮಾಡಿದವರಿಗೆ ₹8 ಸಾವಿರ ಪ್ರೋತ್ಸಾಹ ಧನ ನೀಡಲು ಸರ್ಕಾರ ತಿಳಿಸಿದೆ. ಆದರೂ ಮೇಲಾಧಿಕಾರಿಗಳು ಒಂದು ಸಾವಿರ, ಎರಡು ಸಾವಿರ ನೀಡುತ್ತಿದ್ದಾರೆ. ಅಲ್ಲದೇ ನಮ್ಮ ಕರ್ತವ್ಯಕ್ಕಿಂತ ಬೇರೆದರಲ್ಲಿ ದುಡಿಸಿಕೊಂಡರೂ ಪ್ರೋತ್ಸಾಹ ಧನ ನೀಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>ಯಾದಗಿರಿ, ಶಹಾಪುರ, ಸುರಪುರ, ಹುಣಸಗಿ ಸೇರಿದಂತೆ ವಿವಿಧ ಕಡೆಯಿಂದ ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಈ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ ಅವರಿಗೆ ಕರೆ ಮಾಡಿದರೆ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>