<p>ವಡಗೇರಾ: ‘ಮಳೆಗಾಲ ಆರಂಭಗೊಂಡಿದ್ದು ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ಗ್ರಾಮದ ಜನರ ಅರೋಗ್ಯ ಕಾಪಾಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಶಶಿಧರ ಹಿರೇಮಠ ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮಳೆಗಾಲದಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಮಳೆಗೆ ಚರಂಡಿಗಳಲ್ಲಿ ತ್ಯಾಜ್ಯ ಸಂಗ್ರಹವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಚರಂಡಿಗಳನ್ನು ಸ್ವಚ್ಛತೆಗೊಳಿಸಿಬೇಕು’ ಎಂದು ಸೂಚಿಸಿದರು.</p>.<p>ಪ್ರತಿ ಗ್ರಾಮದಲ್ಲಿ ಸ್ವಚ್ಛತಾ ವಾಹನದ ಮೂಲಕ ತ್ಯಾಜ್ಯ ನಿರ್ವಹಣೆ ಮಾಡುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡುಬೇಕು. ಹಾಳಾದ ಪೈಪ್ಗಳ ದುರಸ್ತಿ ಸೇರಿದಂತೆ ಇತರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.</p>.<p>ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು ಮುಂದುವರಿದಿದ್ದು, ಗೋ ಕಟ್ಟೆ, ನಾಲ ಹೂಳೆತ್ತುವುದು ಹಾಗೂ ಕಾಲುವೆ ಹೂಳೆತ್ತುವುದು, ನರೇಗಾ ಕೂಲಿ ಕಾರ್ಮಿಕರಿಗೆ ಬೇಡಿಕೆ ಪಡೆದು ಕೂಲಿ ಕೆಲಸ ನೀಡಲು ಪಿಡಿಒ ಗಳಿಗೆ ಸೂಚಿಸಿದರು.</p>.<p>ಸಹಾಯಕ ನಿರ್ದೇಶಕ ಕಿರಾಣಬಾಬು ಮಾತನಾಡಿ, ಜೂನ್ ತಿಂಗಳ ಅಂತ್ಯದವರೆಗೆ ಕಡ್ಡಾಯವಾಗಿ ಬಾಕಿ ಉಳಿದ ಇ-ಕೆವೈಸಿ ಪೂರ್ಣಗೊಳಿಸಲು ಹಾಗೂ ಕೂಲಿ ಬೇಡಿಕೆ ಸಲ್ಲಿಸಿದ ಕಾರ್ಮಿಕರಿಗೆ ನರೇಗಾ ಕೆಲಸ ಒದಗಿಸಲು ತಿಳಿಸಿದರು.</p>.<p>ಸಹಾಯಕ ಲೆಕ್ಕಾಧಿಕಾರಿ ಶರಣಬಸವ, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಂಐಎಸ್ ಮಲ್ಲಿಕಾರ್ಜುನ, ಗ್ರಾಪಂ ಪಿಡಿಒ, ಕಂಪ್ಯೂಟರ್ ಆಪರೇಟರ್ಗಳು ಹಾಗೂ ತಾಂತ್ರಿಕ ಸಂಯೋಜಕರು, ತಾಪಂ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-1041674255</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ‘ಮಳೆಗಾಲ ಆರಂಭಗೊಂಡಿದ್ದು ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ಗ್ರಾಮದ ಜನರ ಅರೋಗ್ಯ ಕಾಪಾಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಶಶಿಧರ ಹಿರೇಮಠ ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮಳೆಗಾಲದಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಮಳೆಗೆ ಚರಂಡಿಗಳಲ್ಲಿ ತ್ಯಾಜ್ಯ ಸಂಗ್ರಹವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಚರಂಡಿಗಳನ್ನು ಸ್ವಚ್ಛತೆಗೊಳಿಸಿಬೇಕು’ ಎಂದು ಸೂಚಿಸಿದರು.</p>.<p>ಪ್ರತಿ ಗ್ರಾಮದಲ್ಲಿ ಸ್ವಚ್ಛತಾ ವಾಹನದ ಮೂಲಕ ತ್ಯಾಜ್ಯ ನಿರ್ವಹಣೆ ಮಾಡುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡುಬೇಕು. ಹಾಳಾದ ಪೈಪ್ಗಳ ದುರಸ್ತಿ ಸೇರಿದಂತೆ ಇತರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.</p>.<p>ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು ಮುಂದುವರಿದಿದ್ದು, ಗೋ ಕಟ್ಟೆ, ನಾಲ ಹೂಳೆತ್ತುವುದು ಹಾಗೂ ಕಾಲುವೆ ಹೂಳೆತ್ತುವುದು, ನರೇಗಾ ಕೂಲಿ ಕಾರ್ಮಿಕರಿಗೆ ಬೇಡಿಕೆ ಪಡೆದು ಕೂಲಿ ಕೆಲಸ ನೀಡಲು ಪಿಡಿಒ ಗಳಿಗೆ ಸೂಚಿಸಿದರು.</p>.<p>ಸಹಾಯಕ ನಿರ್ದೇಶಕ ಕಿರಾಣಬಾಬು ಮಾತನಾಡಿ, ಜೂನ್ ತಿಂಗಳ ಅಂತ್ಯದವರೆಗೆ ಕಡ್ಡಾಯವಾಗಿ ಬಾಕಿ ಉಳಿದ ಇ-ಕೆವೈಸಿ ಪೂರ್ಣಗೊಳಿಸಲು ಹಾಗೂ ಕೂಲಿ ಬೇಡಿಕೆ ಸಲ್ಲಿಸಿದ ಕಾರ್ಮಿಕರಿಗೆ ನರೇಗಾ ಕೆಲಸ ಒದಗಿಸಲು ತಿಳಿಸಿದರು.</p>.<p>ಸಹಾಯಕ ಲೆಕ್ಕಾಧಿಕಾರಿ ಶರಣಬಸವ, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎಂಐಎಸ್ ಮಲ್ಲಿಕಾರ್ಜುನ, ಗ್ರಾಪಂ ಪಿಡಿಒ, ಕಂಪ್ಯೂಟರ್ ಆಪರೇಟರ್ಗಳು ಹಾಗೂ ತಾಂತ್ರಿಕ ಸಂಯೋಜಕರು, ತಾಪಂ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-1041674255</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>