<p><strong>ಯಾದಗಿರಿ:</strong> ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗುರುವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ತಮ್ಮ ಮೇಲೆ ದೌರ್ಜನ್ಯವಾದರೆ ಕೂಡಲೇ ಮಾಹಿತಿ ನೀಡಿ ಎಂದು ಮನವಿ ಮಾಡಿದರು.</p>.<p>ಈ ವೇಳೆ ಜಿಲ್ಲೆಯ ಪರಿಶಿಷ್ಟ ಜಾತಿಯವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು ಪೊಲೀಸರು ಮುಂದಾಗಬೇಕು. ಜಾತೀಯತೆ ಇನ್ನೂ ಜೀವಂತವಾಗಿದೆ. ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ. ಹಿಂದೂಗಳಾದರೂ ದೇವಸ್ಥಾನಕ್ಕೆ ಪ್ರವೇಶವಿಲ್ಲ. ಇದರಿಂದ ತುಂಬಾ ನೋವಾಗಿದೆ ಎಂದು ಮುಖಂಡರೊಬ್ಬರು ತಮ್ಮ ಅಳಲು ತೋಡಿಕೊಂಡರು.</p>.<p>ಇದೇ ರೀತಿ ಅನೇಕ ಎಸ್ಸಿ, ಎಸ್ಟಿ ಮುಖಂಡರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಎಸ್ಪಿಯವರು ಸೂಕ್ತ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದರು.</p>.<p>ಡಿವೈಎಸ್ಪಿ ಸಂತೋಷ ಚನ್ನಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಚನ್ನಬಸವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗುರುವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ತಮ್ಮ ಮೇಲೆ ದೌರ್ಜನ್ಯವಾದರೆ ಕೂಡಲೇ ಮಾಹಿತಿ ನೀಡಿ ಎಂದು ಮನವಿ ಮಾಡಿದರು.</p>.<p>ಈ ವೇಳೆ ಜಿಲ್ಲೆಯ ಪರಿಶಿಷ್ಟ ಜಾತಿಯವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು ಪೊಲೀಸರು ಮುಂದಾಗಬೇಕು. ಜಾತೀಯತೆ ಇನ್ನೂ ಜೀವಂತವಾಗಿದೆ. ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ. ಹಿಂದೂಗಳಾದರೂ ದೇವಸ್ಥಾನಕ್ಕೆ ಪ್ರವೇಶವಿಲ್ಲ. ಇದರಿಂದ ತುಂಬಾ ನೋವಾಗಿದೆ ಎಂದು ಮುಖಂಡರೊಬ್ಬರು ತಮ್ಮ ಅಳಲು ತೋಡಿಕೊಂಡರು.</p>.<p>ಇದೇ ರೀತಿ ಅನೇಕ ಎಸ್ಸಿ, ಎಸ್ಟಿ ಮುಖಂಡರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಎಸ್ಪಿಯವರು ಸೂಕ್ತ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದರು.</p>.<p>ಡಿವೈಎಸ್ಪಿ ಸಂತೋಷ ಚನ್ನಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಚನ್ನಬಸವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>