<p><strong>ಯಾದಗಿರಿ</strong>: ಸಮಾಜದಲ್ಲಿ ಶಾಂತಿ ಕದಡುವ ಆರೋಪದ ಮೇಲೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಬಂದೇನವಾಜ ಗೋಗಿ, ಕಾರ್ಯಕರ್ತಮಹಮ್ಮದ್ ಹಸೀಮ್ ಪಟೇಲ್ ಗೋಗಿ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ.</p>.<p>ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸರು ಎಸ್ ಡಿಪಿ ಐ ಕಾರ್ಯಕರ್ತರನ್ನು ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಅವರ ಮನೆಗಳಿಂದ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>'ಎಲ್ಲ ಕಡೆ ಪಿ ಎಫ್ ಐ ಸಂಘಟನೆಯ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಕಾರಣ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇವರು ಯಾವುದೇ ಸಂದರ್ಭದಲ್ಲಿ ಜನರನ್ನು ಸೇರಿಸಿಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡುವ ಅವಕಾಶ ಇರುವ ಕಾರಣ ವಶಕ್ಕೆ ಪಡೆದುವಿಚಾರಣೆ ನಡೆಸಲಾಗುತ್ತಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.</p>.<p><strong>ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ</strong><br />ಮೊಹಮ್ಮದ್ ಮುನೀರ್ ಬಾಗ್ವಾನ್, ಮಹಮ್ಮದ್ ಮೆಹಬೂಬ್ ಎಂಬುವವರನ್ನುವಶಕ್ಕೆ ಪಡೆದು ಕಲಂ 107,151 ಸಿಅರ್ಪಿಎಸ್ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ವಶಕ್ಕೆ ಪಡೆದಿರುವವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಸಮಾಜದಲ್ಲಿ ಶಾಂತಿ ಕದಡುವ ಆರೋಪದ ಮೇಲೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಬಂದೇನವಾಜ ಗೋಗಿ, ಕಾರ್ಯಕರ್ತಮಹಮ್ಮದ್ ಹಸೀಮ್ ಪಟೇಲ್ ಗೋಗಿ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ.</p>.<p>ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸರು ಎಸ್ ಡಿಪಿ ಐ ಕಾರ್ಯಕರ್ತರನ್ನು ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಅವರ ಮನೆಗಳಿಂದ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>'ಎಲ್ಲ ಕಡೆ ಪಿ ಎಫ್ ಐ ಸಂಘಟನೆಯ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಕಾರಣ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇವರು ಯಾವುದೇ ಸಂದರ್ಭದಲ್ಲಿ ಜನರನ್ನು ಸೇರಿಸಿಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡುವ ಅವಕಾಶ ಇರುವ ಕಾರಣ ವಶಕ್ಕೆ ಪಡೆದುವಿಚಾರಣೆ ನಡೆಸಲಾಗುತ್ತಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.</p>.<p><strong>ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ</strong><br />ಮೊಹಮ್ಮದ್ ಮುನೀರ್ ಬಾಗ್ವಾನ್, ಮಹಮ್ಮದ್ ಮೆಹಬೂಬ್ ಎಂಬುವವರನ್ನುವಶಕ್ಕೆ ಪಡೆದು ಕಲಂ 107,151 ಸಿಅರ್ಪಿಎಸ್ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ವಶಕ್ಕೆ ಪಡೆದಿರುವವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>