<p>ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಸಂಘದ (ಬ್ಯಾಂಕ್) ಅಧ್ಯಕ್ಷರ ಸಹಿ ನಕಲು ಮಾಡಿ ₹6.62 ಕೋಟಿ ದುರ್ಬಳಕೆ ಮಾಡಿಕೊಂಡ ಆರೋಪದಡಿ ಬ್ಯಾಂಕ್ ಸಿಇಒ ಸೇರಿ ಮೂವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ ನೀಡಿದ ದೂರಿನ ಅನ್ವಯ ಬ್ಯಾಂಕ್ ಸಿಇಒ ರವಿಕಿರಣರೆಡ್ಡಿ, ಸಹಾಯಕ ವ್ಯವಸ್ಥಾಪಕ ವೆಂಕಟರೆಡ್ಡಿ ಹಾಗೂ ಪಿಗ್ಮಿ ಏಜೆಂಟ್ ಸಂಗಣ್ಣ ಬಸಲಿಂಗಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು 2023ರಿಂದ 2025ರ ನಡುವೆ ಸಾಲದ 222 ಅರ್ಜಿಗಳಿಗೆ ಅಧ್ಯಕ್ಷರ ಸಹಿ ನಕಲು ಮಾಡಿ, ₹6.62 ಕೋಟಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಸಾಲಕ್ಕಾಗಿ ಮಂಜೂರು ಮಾಡಿದ ಹಣವನ್ನು ಆನ್ಲೈನ್ ಮೂಲಕ ಸಂಗಣ್ಣ ಅವರ ಖಾತೆಗೆ ವರ್ಗಾಯಿಸಿ ವಂಚನೆ ಎಸಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-51-1334708524</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಸಂಘದ (ಬ್ಯಾಂಕ್) ಅಧ್ಯಕ್ಷರ ಸಹಿ ನಕಲು ಮಾಡಿ ₹6.62 ಕೋಟಿ ದುರ್ಬಳಕೆ ಮಾಡಿಕೊಂಡ ಆರೋಪದಡಿ ಬ್ಯಾಂಕ್ ಸಿಇಒ ಸೇರಿ ಮೂವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ ನೀಡಿದ ದೂರಿನ ಅನ್ವಯ ಬ್ಯಾಂಕ್ ಸಿಇಒ ರವಿಕಿರಣರೆಡ್ಡಿ, ಸಹಾಯಕ ವ್ಯವಸ್ಥಾಪಕ ವೆಂಕಟರೆಡ್ಡಿ ಹಾಗೂ ಪಿಗ್ಮಿ ಏಜೆಂಟ್ ಸಂಗಣ್ಣ ಬಸಲಿಂಗಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು 2023ರಿಂದ 2025ರ ನಡುವೆ ಸಾಲದ 222 ಅರ್ಜಿಗಳಿಗೆ ಅಧ್ಯಕ್ಷರ ಸಹಿ ನಕಲು ಮಾಡಿ, ₹6.62 ಕೋಟಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಸಾಲಕ್ಕಾಗಿ ಮಂಜೂರು ಮಾಡಿದ ಹಣವನ್ನು ಆನ್ಲೈನ್ ಮೂಲಕ ಸಂಗಣ್ಣ ಅವರ ಖಾತೆಗೆ ವರ್ಗಾಯಿಸಿ ವಂಚನೆ ಎಸಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-51-1334708524</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>