<p>ಯಾದಗಿರಿ: ‘ಜೈ ಛತ್ರಪತಿ ಶಿವಾಜಿ ಮಹಾರಾಜ ಸೇನಾ ಹಾಗೂ ವೀರ ಸಾವರ್ಕರ ಸೇನಾ ವತಿಯಿಂದ ಮೇ 21ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಅಂಗವಾಗಿ ಶೋಭಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಶಿವಾಜಿ ಮಹಾರಾಜ ಸೇನಾ ಅಧ್ಯಕ್ಷ ಪರಶುರಾಮ ಶೇಗುರಕರ್ ತಿಳಿಸಿದರು.</p>.<p>‘ಅಂದು ಸಂಜೆ 4ಕ್ಕೆ ಅಂಬಾಭವಾನಿ ಮಂದಿರದಿಂದ ಶೋಭಾಯಾತ್ರೆ ಹೊರಡಲಿದೆ. ಕನಕ ವೃತ್ತ, ಬಾಬು ಜಗಜೀವನರಾಂ ವೃತ್ತ, ವಾಲ್ಮೀಕಿ ನಗರ, ಹತ್ತಿಕುಣಿ ಕ್ರಾಸ್, ಗಾಂಧಿ ವೃತ್ತ, ಶಿವಾಜಿ ವೃತ್ತ, ಮೈಲಾಪುರ ಅಗಸಿಯ ಹನುಮಾನ ದೇವಸ್ಥಾನದಲ್ಲಿ ಶೋಭಾಯಾತ್ರೆ ಸಂಪನ್ನಗೊಳ್ಳಲಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಗಾಂಧಿ ವೃತ್ತದಲ್ಲಿ ಸಂಜೆ 7ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಹೈದರಾಬಾದ್ ಗೋಶಾಲಾ ಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಅವರ ದಿಕ್ಸೂಚಿ ಭಾಷಣ ಮಾಡುವರು. ರಾವೂರಿನ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಪಾಲ್ಗೊಳ್ಳಬೇಕು’ ಎಂದರು.</p>.<p>‘ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಈಗಾಗಲೇ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ನಡೆದ ಘಟನೆಯು ಇಲ್ಲಿಯೂ ಮರುಕಳಿಸದಂತೆ ಎಚ್ಚರವಹಿಸುವಂತೆ ಕೋರಲಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವೀರ ಸಾವರ್ಕರ ಸೇನಾ ಜಿಲ್ಲಾ ಅಧ್ಯಕ್ಷ ತ್ಯಾಗರಾಜ ತಾಂಡೂರಕರ್, ಪ್ರಮುಖರಾದ ಸುರೇಶ ನಾಯಕ, ವೀರೇಶ್, ಪವನ ಲಿಂಗೇರಿ, ಶಿವಾನಂದ ವಾಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-30-585304390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಜೈ ಛತ್ರಪತಿ ಶಿವಾಜಿ ಮಹಾರಾಜ ಸೇನಾ ಹಾಗೂ ವೀರ ಸಾವರ್ಕರ ಸೇನಾ ವತಿಯಿಂದ ಮೇ 21ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಅಂಗವಾಗಿ ಶೋಭಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಶಿವಾಜಿ ಮಹಾರಾಜ ಸೇನಾ ಅಧ್ಯಕ್ಷ ಪರಶುರಾಮ ಶೇಗುರಕರ್ ತಿಳಿಸಿದರು.</p>.<p>‘ಅಂದು ಸಂಜೆ 4ಕ್ಕೆ ಅಂಬಾಭವಾನಿ ಮಂದಿರದಿಂದ ಶೋಭಾಯಾತ್ರೆ ಹೊರಡಲಿದೆ. ಕನಕ ವೃತ್ತ, ಬಾಬು ಜಗಜೀವನರಾಂ ವೃತ್ತ, ವಾಲ್ಮೀಕಿ ನಗರ, ಹತ್ತಿಕುಣಿ ಕ್ರಾಸ್, ಗಾಂಧಿ ವೃತ್ತ, ಶಿವಾಜಿ ವೃತ್ತ, ಮೈಲಾಪುರ ಅಗಸಿಯ ಹನುಮಾನ ದೇವಸ್ಥಾನದಲ್ಲಿ ಶೋಭಾಯಾತ್ರೆ ಸಂಪನ್ನಗೊಳ್ಳಲಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಗಾಂಧಿ ವೃತ್ತದಲ್ಲಿ ಸಂಜೆ 7ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಹೈದರಾಬಾದ್ ಗೋಶಾಲಾ ಮಹಲ್ ಕ್ಷೇತ್ರದ ಶಾಸಕ ರಾಜಾಸಿಂಗ್ ಅವರ ದಿಕ್ಸೂಚಿ ಭಾಷಣ ಮಾಡುವರು. ರಾವೂರಿನ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಪಾಲ್ಗೊಳ್ಳಬೇಕು’ ಎಂದರು.</p>.<p>‘ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಈಗಾಗಲೇ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ನಡೆದ ಘಟನೆಯು ಇಲ್ಲಿಯೂ ಮರುಕಳಿಸದಂತೆ ಎಚ್ಚರವಹಿಸುವಂತೆ ಕೋರಲಾಗಿದೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವೀರ ಸಾವರ್ಕರ ಸೇನಾ ಜಿಲ್ಲಾ ಅಧ್ಯಕ್ಷ ತ್ಯಾಗರಾಜ ತಾಂಡೂರಕರ್, ಪ್ರಮುಖರಾದ ಸುರೇಶ ನಾಯಕ, ವೀರೇಶ್, ಪವನ ಲಿಂಗೇರಿ, ಶಿವಾನಂದ ವಾಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-30-585304390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>