<p><strong>ಯಾದಗಿರಿ:</strong> ದೇಶದ ಆರ್ಥಿಕತೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಇದರಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಎಂ.ಜಿ. ಹೇಳಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಶುಕ್ರವಾರ ಕಾರ್ಮಿಕರ ದಿನಾಚರಣೆ ಅಂಗವಾಗಿ ಎಐಯುಟಿಯುಸಿ ಜಿಲ್ಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮುಚ್ಚುತ್ತಿರುವ ಕಾರ್ಖಾನೆ ಗಳಿಂದಾಗಿ ಬಹು ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರ ಹಿತ ಕಾಪಾಡಲು ಮುಂದಾಗುತ್ತಿಲ್ಲ. ಬದಲಿಗೆ, ಬಂಡವಾಳಶಾಹಿಗಳ ಹಿತ ಕಾಪಾಡುತ್ತಿವೆ’ ಎಂದರು.</p>.<p>‘ದೇಶದಲ್ಲಿ ದಿನೇ ದಿನೇ ನಿರುದ್ಯೋಗ ಹೆಚ್ಚಳವಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಇಡೀ ಕಾರ್ಮಿಕರು ತಮ್ಮ ಹಕ್ಕಿಗಾಗಿ ಹೋರಾಟ ನಡೆಸಲು ಇಂದು ಪಣ ತೊಡಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಅಧ್ಯಕ್ಷೆ ಎಂ. ಉಮಾದೇವಿ ಮಾತನಾಡಿ, ‘ಕಾರ್ಮಿಕರ ದಿನಾಚರಣೆ ಯು ಕಾರ್ಮಿಕರಲ್ಲಿ ಹೋರಾಟದ ಸ್ಫೂರ್ತಿಯನ್ನು ತುಂಬುತ್ತದೆ’ ಎಂದರು.</p>.<p>ಜಿಲ್ಲಾ ಸಮಿತಿ ಸದಸ್ಯೆ ರೇಣುಕಾ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ಮಲಾ, ಶರಣಪ್ಪ, ಪ್ರೀತಿ, ಸರಸ್ವತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ದೇಶದ ಆರ್ಥಿಕತೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಇದರಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಎಂ.ಜಿ. ಹೇಳಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಶುಕ್ರವಾರ ಕಾರ್ಮಿಕರ ದಿನಾಚರಣೆ ಅಂಗವಾಗಿ ಎಐಯುಟಿಯುಸಿ ಜಿಲ್ಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮುಚ್ಚುತ್ತಿರುವ ಕಾರ್ಖಾನೆ ಗಳಿಂದಾಗಿ ಬಹು ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರ ಹಿತ ಕಾಪಾಡಲು ಮುಂದಾಗುತ್ತಿಲ್ಲ. ಬದಲಿಗೆ, ಬಂಡವಾಳಶಾಹಿಗಳ ಹಿತ ಕಾಪಾಡುತ್ತಿವೆ’ ಎಂದರು.</p>.<p>‘ದೇಶದಲ್ಲಿ ದಿನೇ ದಿನೇ ನಿರುದ್ಯೋಗ ಹೆಚ್ಚಳವಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಇಡೀ ಕಾರ್ಮಿಕರು ತಮ್ಮ ಹಕ್ಕಿಗಾಗಿ ಹೋರಾಟ ನಡೆಸಲು ಇಂದು ಪಣ ತೊಡಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಅಧ್ಯಕ್ಷೆ ಎಂ. ಉಮಾದೇವಿ ಮಾತನಾಡಿ, ‘ಕಾರ್ಮಿಕರ ದಿನಾಚರಣೆ ಯು ಕಾರ್ಮಿಕರಲ್ಲಿ ಹೋರಾಟದ ಸ್ಫೂರ್ತಿಯನ್ನು ತುಂಬುತ್ತದೆ’ ಎಂದರು.</p>.<p>ಜಿಲ್ಲಾ ಸಮಿತಿ ಸದಸ್ಯೆ ರೇಣುಕಾ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ಮಲಾ, ಶರಣಪ್ಪ, ಪ್ರೀತಿ, ಸರಸ್ವತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>