ಹುಣಸಗಿ:ತಾಲ್ಲೂಕಿನ ಐ.ಬಿ.ತಾಂಡಾ (ಹನುಮ ನಗರ) ದ ಬಾಲಕ ಗೌತಮ ಪರಶುರಾಮ ಚವ್ಹಾಣ್ (11) ಶನಿವಾರ ಬೆಳಿಗ್ಗೆ ಹಾವು ಕಚ್ಚಿ ಮೃತಪಟ್ಟಿದ್ದಾನೆ.
ಮೃತ ಬಾಲಕ ನಾರಾಯಣಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಾಲಕನ ತಂದೆ ನೀಡಿದ ದೂರಿನಂತೆ ನಾರಾಯಣಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲತವಾಡ ಪ್ರಾಥಮಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.