<p><strong>ಯಾದಗಿರಿ:</strong> ಬೆಳಗಾವಿಯ ಶಿವಂ ಅಸೋಸಿಯೆಟ್ಸ್ ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಂಪನಿಯ ವಹಿವಾಟಿನ ಹಣವನ್ನು ತಡೆಹಿಡಿಯಲಾಗಿದೆ. ಈ ಕಂಪನಿಗೆ ಜಿಲ್ಲೆಯ ಸಾರ್ವಜನಿಕರು ಹಣ ಹೂಡಿಕೆ ಮಾಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.</p>.<p>ಶಿವಂ ಕಪನಿಯವರು ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿನ ಸುಮಾರು 10,000 ಜನರಿಂದ ₹ 3 ಲಕ್ಷ ಪಡೆದು, ಅವರಿಗೆ ಪ್ರತಿ ತಿಂಗಳು ಪ್ರತಿಶತ ಶೇ 3ರಷ್ಟು ಹಣವನ್ನು ಸಂದಾಯ ಮಾಡುತ್ತಿರುವುದು ತಿಳಿದು ಬಂದಿದ್ದು. ಶಿವಂ ಅಸೋಸಿಯೆಟ್ಸ್ ಕಂಪೆನಿಯು ಸಾರ್ವಜನಿಕರಿಗೆ ಮೋಸ ಮಾಡಿ ಹಣವನ್ನು ಪಡೆದು ವಂಚನೆ ಮಾಡುತ್ತಿದೆ. ಈ ಕಂಪನಿಯಲ್ಲಿ ಯಾರೂ ಹಣ ಹೂಡಿಕೆ ಮಾಡಿ ಮೋಸ ಹೋಗಬಾರದು. ಬೆಳಗಾವಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ವಹಿವಾಟಿನ ಹಣವನ್ನು ತಡೆಹಿಡಿಯಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಈ ಕಂಪನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಮೊಬೈಲ್ ಸಂಖ್ಯೆ: 9480803664ಗೆ ಸಂಪರ್ಕಿಸಬಹುದು ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-30-892823907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಬೆಳಗಾವಿಯ ಶಿವಂ ಅಸೋಸಿಯೆಟ್ಸ್ ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಂಪನಿಯ ವಹಿವಾಟಿನ ಹಣವನ್ನು ತಡೆಹಿಡಿಯಲಾಗಿದೆ. ಈ ಕಂಪನಿಗೆ ಜಿಲ್ಲೆಯ ಸಾರ್ವಜನಿಕರು ಹಣ ಹೂಡಿಕೆ ಮಾಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.</p>.<p>ಶಿವಂ ಕಪನಿಯವರು ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿನ ಸುಮಾರು 10,000 ಜನರಿಂದ ₹ 3 ಲಕ್ಷ ಪಡೆದು, ಅವರಿಗೆ ಪ್ರತಿ ತಿಂಗಳು ಪ್ರತಿಶತ ಶೇ 3ರಷ್ಟು ಹಣವನ್ನು ಸಂದಾಯ ಮಾಡುತ್ತಿರುವುದು ತಿಳಿದು ಬಂದಿದ್ದು. ಶಿವಂ ಅಸೋಸಿಯೆಟ್ಸ್ ಕಂಪೆನಿಯು ಸಾರ್ವಜನಿಕರಿಗೆ ಮೋಸ ಮಾಡಿ ಹಣವನ್ನು ಪಡೆದು ವಂಚನೆ ಮಾಡುತ್ತಿದೆ. ಈ ಕಂಪನಿಯಲ್ಲಿ ಯಾರೂ ಹಣ ಹೂಡಿಕೆ ಮಾಡಿ ಮೋಸ ಹೋಗಬಾರದು. ಬೆಳಗಾವಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ವಹಿವಾಟಿನ ಹಣವನ್ನು ತಡೆಹಿಡಿಯಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಈ ಕಂಪನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಮೊಬೈಲ್ ಸಂಖ್ಯೆ: 9480803664ಗೆ ಸಂಪರ್ಕಿಸಬಹುದು ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-30-892823907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>